ದರ್ಶನ್ ಪ್ರಕರಣ | ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಬಂಧನ

Date:

Advertisements

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರವಾಗಿ ಆತನ ಅಭಿಮಾನಿಗಳಿಗೆ ಪ್ರಚೋದನೆ ಮಾಡುತ್ತಿದ್ದ ಹಾಗೂ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದರ್ಶನ್ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 504, 506 ಅಡಿ ಎಫ್ಐಆರ್ ದಾಖಲಾಗಿದೆ.

ಇತ್ತೀಚೆಗೆ ಜೈಲು ಸೇರಿದ್ದ ನಟ ದರ್ಶನ್ ವಿರುದ್ಧ ನಿರ್ಮಾಪಕ ಉಮಾಪತಿ ಗೌಡ ಅವರು ಮಾತನಾಡಿದ್ದರು. ಇದಕ್ಕೆ ಕೋಪಗೊಂಡ ದರ್ಶನ್ ಅಭಿಮಾನಿಯಾದ ಆರೋಪಿ ಚೇತನ್ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದನು. ಅಲ್ಲದೇ, ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ. ಜತೆಗೆ, ದರ್ಶನ್ ಅಭಿಮಾನಿಗಳಿಗೆ ಪ್ರಚೋದನೆ ಮಾಡಿದ್ದನು.

Advertisements

ಈ ಬಗ್ಗೆ ನಿರ್ಮಾಪಕ ಉಮಾಪತಿ ಗೌಡ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಪೊಲೀಸರು ಚೇತನ್​ನನ್ನು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೂರಜ್ ರೇವಣ್ಣ ಪ್ರಕರಣ ತನಿಖೆ ಸಿಐಡಿಗೆ ವರ್ಗಾವಣೆ

ಅಭಿಮಾನಿ ಗಾಡಿ ಮೇಲೆ ನಟ ದರ್ಶನ್‌ಗೆ ನೀಡಿರುವ ಖೈದಿ ನಂಬರ್

ಮೈಸೂರಿನಲ್ಲಿ ನಟ ದರ್ಶನ್ ಅಭಿಮಾನಿ ರಾಜೇಶ್ ಎಂಬುವವರು ತಮ್ಮ ಗಾಡಿ ಮೇಲೆ ದರ್ಶನ್‌ಗೆ ಜೈಲಿನಲ್ಲಿ ನೀಡಿರುವ ಖೈದಿ ನಂಬರ್ ಹಾಕಿಸಿಕೊಂಡಿದ್ದಾರೆ.

ರಾಜೇಶ್ ಇವರು ಟಿ.ನರಸೀಪುರ ತಾಲೂಕಿನ ಕರುಹಟ್ಟಿ ಗ್ರಾಮದವರು. ಜೈಲಿನಲ್ಲಿ ನಟ ದರ್ಶನ್‌ಗೆ ಖೈದಿ ನಂಬರ್ 6106 ಕೊಟ್ಟಿದ್ದಾರೆ. ಈಗಾಗಲೇ ಗಾಡಿಗೆ ನಂಬರ್ ಇದ್ದು, ಅದನ್ನು ಬದಲಾಯಿಸಲು ಆಗದ ಕಾರಣ ಗಾಡಿ ಮೇಲೆ 6106 ಹಾಕಿಸಿಕೊಂಡಿದ್ದಾರೆ. ಇದೇ ಲಕ್ಕಿ ನಂಬರ್ ಎಂದು ಗಾಡಿ ಮೇಲೆ ಬರೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X