ಇನ್ಮುಂದೆ 1 ಲೀ. ಜೊತೆಗೆ 50 ಎಂಎಲ್‌ ಹೆಚ್ಚುವರಿ ಹಾಲು; ₹2 ಏರಿಕೆ

Date:

Advertisements

ಪೆಟ್ರೋಲ್, ಡಿಸೇಲ್, ತರಕಾರಿ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೆ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ 1.ಲೀ ಹಾಲಿಗೆ ₹42 ಇದ್ದು, ಇದೀಗ 1ಲೀ. ಜತೆಗೆ 50 ಎಂಎಲ್‌ ಹೆಚ್ಚುವರಿ ಹಾಲು ನೀಡಲು ಕೆಎಂಎಫ್‌ ಮುಂದಾಗಿದೆ. ಈ ಹಿನ್ನೆಲೆ, ₹2 ಏರಿಕೆಯಾಗಲಿದ್ದು, ₹44 ಆಗಲಿದೆ.

ಕಳೆದ ಆಗಸ್ಟ್‌ನಲ್ಲಿ ನಂದಿನಿ ಹಾಲು ಹಾಗೂ ಮೊಸರಿನ ದರ ಸೇರಿದಂತೆ ಇನ್ನಿತರ ಉತ್ಪನ್ನಗಳ ದರವನ್ನು ಏರಿಸಲಾಗಿತ್ತು. ಇದು ಜನಸಾಮಾನ್ಯರ ಜೇಬಿಗೆ ಹೊರೆಯಾಗಿ ಪರಿಣಮಿಸಿತ್ತು. ಇದೀಗ ಮತ್ತೆ ನಂದಿನಿ ಹಾಲಿನ ದರ ಏರಿಕೆ ಮಾಡಿದೆ.

ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (ಕೆಎಂಎಫ್‌) ಮಹತ್ವದ ನಿರ್ಧಾರವನ್ನು ಜೂನ್ 25ರಂದು ಪ್ರಕಟಿಸಿದೆ. ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದರು.

Advertisements

ಈ ಬಗ್ಗೆ ಮಾತನಾಡಿದ ಕೆಎಂಎಫ್‌ ಅಧ್ಯಕ್ಷ ಭಿಮನಾಯ್ಕ್‌, “ಈಗ ನೀಡುತ್ತಿರುವ 1 ಲೀ. ಹಾಲಿನ ಜತೆಗೆ ಇನ್ನು ಹೆಚ್ಚುವರಿಯಾಗಿ 50 ಎಂಎಲ್‌ ಹೆಚ್ಚುವರಿ ಹಾಲು ನೀಡುತ್ತೇವೆ. ಅದಕ್ಕೆ ಹೆಚ್ಚುವರಿಯಾಗಿ ₹2 ಏರಿಕೆ ಮಾಡಿದ್ದೇವೆ. ಈ ಹಿಂದೆ 1 ಲೀಟರ್ ಹಾಲಿನ ದರ ₹42 ಇತ್ತು. ಇದೀಗ 1ಲೀ. ಜತೆಗೆ 50 ಎಂಎಲ್‌ ಹಾಲು ನೀಡುತ್ತೇವೆ. ಹಾಗಾಗಿ, ₹44 ಆಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಅಭಿಮಾನಿ ಬಂಧನ

“ರೈತರ ಹಿತದೃಷ್ಟಿಯಿಂದ ಹಾಗೂ ಎಲ್ಲ ಒಕ್ಕೂಟದ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದ್ದೇವೆ. ಬೇರೆ ರಾಜ್ಯಗಳಿಗೆ ಹೋಲಿಸಿದರೇ, ನಮ್ಮಲ್ಲಿ ಹಾಲಿನ ದರ ಕಡಿಮೆ ಇದೆ. ಈಗ ಏನೇ ಹೆಚ್ಚುವರಿ ಹಣ ನಿಗದಿ ಮಾಡಿದರೂ ಕೂಡ ಅದು ರೈತರಿಗೆ ಸೇರುತ್ತದೆ” ಎಂದರು.

“ಕರ್ನಾಟಕ ಹಾಲು ಮಂಡಳಿ ಹಾಲು ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಭಾರತದಲ್ಲಿ ಮೊದಲ ಸ್ಥಾನ. ಸದ್ಯ 98 ಲಕ್ಷ 17ಸಾವಿರ ಲೀ. ಹಾಲು ಸಂಗ್ರಹ ಆಗುತ್ತಿದೆ. ಸದ್ಯದಲ್ಲೇ ಒಂದು ಕೋಟಿ ಸಂಗ್ರಹ ಗುರಿ ಮುಟ್ಟಲಿದೆ. ಇದು ದಾಖಲೆ. ರಾಜ್ಯದ 27 ಲಕ್ಷ ಹಾಲು ಉತ್ಪಾದಕರು ಇದಕ್ಕೆ ಕಾರಣ. ಸದ್ಯದ ಶೇಖರಣೆಯಲ್ಲಿ 30 ಲಕ್ಷ ಲೀ. ಪೌಡರ್‌ಗೆ ಕಳುಹಿಸುತ್ತಿದ್ದೇವೆ. ಇದರಲ್ಲಿ ನಮ್ಮ ಬಂಡವಾಳ ಸ್ವಲ್ಪ ಡೆಡ್ ಆಗುತ್ತಿದೆ. 27 ಲಕ್ಷ ಹಾಲು ಉತ್ಪಾದಕರು ಗ್ರಾಹಕರಿಗೆ ತೊಂದರೆಯಾಗಬಾರದು. ಇಬ್ಬರು ಕೂಡ ನಮಗೆ ಎರಡು ಕಣ್ಣಿದ್ದ ಹಾಗೆ. ಪ್ರತಿ ಲೀಟರ್‌ ಪ್ಯಾಕೆಟ್‌ನಲ್ಲಿ 50 ಮಿಲೀ ಹಾಲನ್ನು ಹೆಚ್ಚಿಗೆ ನೀಡಲಾಗುವುದು. ಇದರಿಂದ ನಂದಿನಿ ಹಾಲಿನ ಬೆಲೆಯೇರಿಕೆಯ ಬಿಸಿ ಜನರಿಗೆ ತಟ್ಟುವುದಿಲ್ಲ” ಎಂದಿದ್ದಾರೆ.

WhatsApp Image 2024 06 25 at 12.15.27 PM

“ಬೇರೆ ರಾಜ್ಯಗಳಲ್ಲಿ ಹಾಲಿನ ದರ ಹೆಚ್ಚಾಗಿದೆ. ಕರ್ನಾಟಕದಲ್ಲಿ ನಂದಿನಿ ಹಾಲು ₹44, ಕೇರಳದಲ್ಲಿ ಮಿಲ್ಮಾ ₹52, ದೆಹಲಿ ಮದರ್ ಡೇರಿ ₹54, ಗುಜರಾತ್ ಅಮುಲ್ ₹56, ಮಹಾರಾಷ್ಟ್ರ ಅಮುಲ್ ₹56, ಆಂಧ್ರ ಪ್ರದೇಶ್ ವಿಜಯ ₹58 ಇದೆ. ಹಾಲಿಗೆ ಮಾತ್ರ ಬೆಲೆ ಏರಿಕೆ ಆಗಲಿದ್ದು, ಮೊಸರು, ತುಪ್ಪ, ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ನೀಲಿ ಪ್ಯಾಕೆಟ್ ಹಾಲು ₹42 ರಿಂದ ₹44, ನೀಲಿ ಪ್ಯಾಕೆಟ್ (ಟೋನ್ಡ್ ಹಾಲು) ₹43 ರಿಂದ ₹45, ಸಮೃದ್ದಿ ಹಾಲು ₹51 ರಿಂದ ₹53, ಶುಭಂ (ಟೋನ್ಡ್ ಹಾಲು) ₹49 ರಿಂದ ₹51, ಸಂತೃಪ್ತಿ ಹಾಲು ₹55 ರಿಂದ ₹57, ಶುಭಂ ಗೋಲ್ಡ್ ಹಾಲು ₹49 ರಿಂದ ₹51, ಶುಭಂ ಡಬಲ್ ಟೋನ್ಡ್ ಹಾಲು ₹41 ರಿಂದ ₹43ಗೆ ಏರಿಕೆ ಆಗಲಿದೆ.

ಕೆಎಂಎಫ್​ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕಾಂಗ್ರೆಸ್ಸಿಗರೇ ನಿಮಗೆ ವೋಟ್ ಹಾಕಿ ಜನ್ರು ತಪ್ಪು ಮಾಡಿದ್ದಾರೆ ಅನ್ನಿಸುತ್ತೆ, ಈಗಾಗಲೇ ಮದ್ಯ, ತೈಲ, ಪೆಟ್ರೋಲ್, ಡೀಸೆಲ್, ಈಗ ಹಾಲಿಗೆ 2 ರೂ. ಹೆಚ್ಚು ಮಾಡಿ ಜನ್ರ ಸಮಾಧಿ ಮಾಡಲು ಹೊರಟಿರುವ ಕಾಂಗ್ರೆಸ್ಸಿಗರೇ ನಿಮಗೆ ಲೋಕಸಭೆಯಲ್ಲಿ ಜನ್ರು ಹೆಚ್ಚಿನ ಸೀಟು ಗೆಲ್ಲಿಸಿ ಕೊಡಲಿಲ್ಲವೆಂದು ಈ ರೀತಿ ಸೇಡು ತಿರಿಸಿಕೊಳ್ಳುವುದು ಸರಿಯಲ್ಲ. ಅಲ್ಲದೇ, ನಿಮ್ಮ ಬಿಟ್ಟಿ ಗ್ಯಾರಂಟಿಗಳಿಗೆ ಜನ್ರ ಮೇಲೆ ಈ ರೀತಿ ಆರ್ಥಿಕ ಹೊರೆ ಹಾಕ್ತಿದ್ದೀರಿ. ನಿಮ್ಮನ್ನು ಆ ದೇವ್ರೂ ಕೂಡ ಕ್ಷಮಿಸೋದಿಲ್ಲ. ಥೂ.. ನಿಮ್ಮ ಯೋಗ್ಯತೆಗೆ ಬೆಂಕಿ ಹಾಕಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X