ಗದುಗಿನ ಇತಿಹಾಸ, ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯ: ಇತಿಹಾಸ ಸಂಶೋಧಕ ಅ ದ ಕಟ್ಟಿಮನಿ

Date:

Advertisements

ಕರ್ನಾಟಕದ ಸಾಂಸ್ಕೃತಿಕ ಇತಿಹಾಸದ ಅಧ್ಯಯನದಲ್ಲಿ ಗದುಗಿನ ಇತಿಹಾಸ ಮತ್ತು ಸ್ಮಾರಕಗಳು ಸರ್ವಕಾಲಕ್ಕೂ ಸ್ಮರಣೀಯವಾಗಿವೆ. ಜಿಲ್ಲೆಯ ಇತಿಹಾಸ ಮತ್ತು ಸಂಸ್ಕೃತಿಯ ಸಂವರ್ಧನೆಯಲ್ಲಿ ಭೌಗೋಳಿಕ ಸಂಪನ್ಮೂಲಗಳ ಪಾತ್ರ ಅನನ್ಯವಾಗಿದೆ ಎಂದು ಇತಿಹಾಸ ಸಂಶೋಧಕ ಮತ್ತು ಪ್ರವಾಸಿ ಮಾರ್ಗದರ್ಶಿ ಅ ದ ಕಟ್ಟಿಮನಿ ಅವರು ಹೇಳಿದರು.

ಗದಗ ಜಿಲ್ಲೆಯ ಹುಲಕೋಟಿಯ ಕೆ ಎಚ್ ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ 2ನೇ ಸೆಮಿಸ್ಟರ್ ವಿದ್ಯಾರ್ಥಿಗಳು ಶನಿವಾರ ಡಾ. ಅಪ್ಪಣ್ಣ ಹಂಜೆ ಅವರ ಮಾರ್ಗದರ್ಶನದಲ್ಲಿ ‘ಗದಗ ನಗರದ ಇತಿಹಾಸ ಮತ್ತು ಸ್ಮಾರಕಗಳು’ ಕುರಿತು ಕ್ಷೇತ್ರಕಾರ್ಯ ಅಧ್ಯಯನ ಕೈಗೊಂಡ ವೇಳೆ ಮಾತನಾಡಿದರು.

ಗದಗ ನಗರದ ಇತಿಹಾಸ ಮತ್ತು ಸ್ಮಾರಕಗಳನ್ನು ಪರಿಚಯಿಸುತ್ತಾ, ಸ್ಥಳೀಯ ತ್ರಿಕೂಟೇಶ್ವರ, ಸರಸ್ವತಿ, ವೀರನಾರಾಯಣ, ಕರಿದೇವರ ಗುಡಿ, ರಾಮಲಿಂಗೇಶ್ವರ ದೇವಾಲಯಗಳು ಹಾಗೂ ಜುಮ್ಮಾ ಮಸೀದಿಯ ನಿರ್ಮಾತೃ, ಕಾಲಮಾನ, ವಾಸ್ತುಕಲೆ ವೈಶಿಷ್ಟ್ಯಗಳು, ಇವುಗಳ ಪೂಜೆ-ಪುನಸ್ಕಾರ, ಜೀರ್ಣೋದ್ಧಾರ ಇತ್ಯಾದಿ ಚಟುವಟಿಕೆಗಳಿಗೆ ಪ್ರಭುಗಳು ಮತ್ತು ಪ್ರಜೆಗಳು ಕೊಡಮಾಡಿದ ದಾನ-ದತ್ತಿಗಳನ್ನು ದಾಖಲಿಸಿರುವ ಶಾಸನಗಳನ್ನು ಸವಿಸ್ತಾರವಾಗಿ ವಿವರಿಸಿದರು.

Advertisements

ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಅಪ್ಪಣ್ಣ ಹಂಜೆ ಅವರು ವಿದ್ಯಾರ್ಥಿಗಳಿಗೆ ಗದುಗಿನ ಸ್ಮಾರಕಗಳು ಮತ್ತು ಶಿಲ್ಪಗಳ ಪರಿಕಲ್ಪನೆಗಳು, ವಾಸ್ತು ಲಕ್ಷಣಗಳು, ಪ್ರತಿಮಾ ಲಕ್ಷಣಗಳನ್ನು ವಿವರಿಸಿ, “ಕರ್ನಾಟಕದ ವಾಸ್ತುಶಿಲ್ಪ ಕಲೆಗಳ ಅಧ್ಯಯನದಲ್ಲಿ ಇವುಗಳ ಪಾತ್ರ ಅನನ್ಯವಾಗಿದ್ದು, ತ್ರಿಕೂಟೇಶ್ವರ, ವೀರನಾರಾಯಣ, ಜುಮ್ಮಾ ಮಸೀದಿಗಳ ಆಡಳಿತ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ನಿರ್ವಹಣೆಯನ್ನು ಒಂದೇ ಕಮಿಟಿ ನಿರ್ವಹಿಸುತ್ತಿದ್ದ ಸಂಗತಿ ಜಿಲ್ಲೆಯ ಸಾಮರಸ್ಯ, ಸಹಬಾಳ್ವೆ, ಸಮನ್ವಯತೆ, ಸೌಹಾರ್ದತೆ, ಸಮಾನತೆ, ಸಹಿಷ್ಣುತೆ ಜೀವನ ಮೌಲ್ಯಗಳಿಗೆ ಅತ್ಯುತ್ತಮ ನಿದರ್ಶನವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬಾಗಲಕೋಟೆ | ದಸಂಸ ಮುಖಂಡ ಉದಯ ಕಡಕೋಳ ಸ್ಮರಣಾರ್ಥ ನುಡಿನಮನ ಕಾರ್ಯಕ್ರಮ

ಇತಿಹಾಸ ಉಪನ್ಯಾಸಕ ಪ್ರೊ. ಬಸವಂತೆಪ್ಪ ದೊಡ್ಡಮನಿ ಅವರು ವಿದ್ಯಾರ್ಥಿಗಳಿಗೆ ಗದುಗಿನ ಸ್ಮಾರಕಗಲ್ಲುಗಳು, ಬಾವಿಗಳು, ಮಠಗಳು, ಕೆರೆಗಳ ಹಿರಿಮೆಯನ್ನು ಪರಿಚಯಿಸಿದರು.

ಈ ಸಂದರ್ಭದಲ್ಲಿ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X