ಲೋಕಸಭೆ ಸ್ಪೀಕರ್ ಸ್ಥಾನ : ವಿಪಕ್ಷದಿಂದ ಕಾಂಗ್ರೆಸ್‌ನ ಕೆ ಸುರೇಶ್, ಎನ್‌ಡಿಎನಿಂದ ಓಂ ಬಿರ್ಲಾ ಪುನಃ ಕಣಕ್ಕೆ

Date:

Advertisements

ಲೋಕಸಭೆ ಸ್ಪೀಕರ್‌ ಸ್ಥಾನಕ್ಕೆ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ ಸಂಸದ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜೊತೆ ಮಾತುಕತೆ ಮುರಿದುಬಿದ್ದ ನಂತರ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಕಳೆದ ಎನ್‌ಡಿಎ ಸರ್ಕಾರದಲ್ಲಿ ಸ್ಫೀಕರ್‌ ಆಗಿದ್ದ ಬಿಜೆಪಿ ಸಂಸದ ಓಂ ಬಿರ್ಲಾ ಪುನಃ ನಾಮಪತ್ರ ಸಲ್ಲಿಸಿದ್ದಾರೆ.

ಸ್ಪೀಕರ್‌ ಚುನಾವಣೆಯು ಜೂ.26ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ. ಓಂ ಬಿರ್ಲಾ ಅವರು ರಾಜಸ್ಥಾನದ ಕೋಟ ಲೋಕಸಭಾ ಕ್ಷೇತ್ರದಿಂದ 2014ರಿಂದ ಸಂಸದರಾಗಿ ಆಯ್ಕೆಯಾಗುತ್ತಿದ್ದಾರೆ.

ಸ್ಪೀಕರ್‌ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಗೆ ಬೆಂಬಲ ವ್ಯಕ್ತಪಡಿಸಲು ಇಂಡಿಯಾ ಒಕ್ಕೂಟದ ಸದಸ್ಯರು ನಿರಾಕರಿಸಿದರು. ಕೇಂದ್ರ ಸಚಿವ ರಾಜ್‌ನಾಥ್ ಸಿಂಗ್‌ ಅವರ ಕಚೇರಿಗೆ ಮಾತುಕತೆಗೆ ಆಗಮಿಸಿದ್ದ ಕಾಂಗ್ರೆಸ್‌ನ ಕೆ ಸಿ ವೇಣು ಗೋಪಾಲ್‌, ಡಿಎಂಕೆಯ ಟಿ ಆರ್‌ ಬಾಲು ಒಮ್ಮತಕ್ಕೆ ಬೆಂಬಲ ವ್ಯಕ್ತಪಡಿಸಲು ನಿರಾಕರಿಸಿ ಕಚೇರಿಯಿಂದ ಹೊರನಡೆದರು.

Advertisements

ಭರ್ತೃಹರಿ ಮಹತಾಬ್‌ ಅವರನ್ನು ಸ್ಪೀಕರ್‌ ಆಗಿ ಆಯ್ಕೆ ಮಾಡುವುದರ ಮೂಲಕ ಕೇಂದ್ರ ಸರ್ಕಾರ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಒಳಗೊಂಡಂತೆ ವಿಪಕ್ಷಗಳು ನಿನ್ನೆ ವಿರೋಧ ವ್ಯಕ್ತಪಡಿಸಿದ್ದವು. ನಿಯಮಾನುಸಾರ ಅತೀ ಹೆಚ್ಚು ಅವಧಿಗೆ 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಕಾಂಗ್ರೆಸ್ ಸಂಸದ ಕೆ ಸುರೇಶ್‌ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡಬೇಕಿತ್ತೆಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ. ಹಿರಿತನದ ಆಧಾರದ ಮೇಲೆ ಸುರೇಶ್ ಅವರನ್ನು ಲೋಕಸಭೆಯ ಹಂಗಾಮಿ ಸ್ಪೀಕರ್‌ ಆಗಿ ಆಯ್ಕೆ ಮಾಡಬೇಕಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆಯೇ?

ಬಿಜೆಪಿ ನೇತೃತ್ವದ ಸರ್ಕಾರ ಸ್ಪೀಕರ್‌ ಹುದ್ದೆಯ ನಿಯಮಾವಳಿಯನ್ನು ಉಲ್ಲಂಘಿಸಿ ರಾಜಕೀಯಕರಣಗೊಳಿಸಿದೆ ಎಂದು ಕಾಂಗ್ರೆಸ್ ನಾಯಕರಾದ ಜೈರಾಮ್‌ ರಮೇಶ್ ಹಾಗೂ ಕೆ ಸಿ ವೇಣುಗೋಪಾಲ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.

ಕೇರಳದ ಸಂಸದ ಕೆ ಸುರೇಶ್‌ ಅವರು ಎರಡು ಬಾರಿ ಸೋತಿದ್ದರೂ ಎರಡು ಕ್ಷೇತ್ರಗಳಾದ ಮಾವಲಿಕೇರ ಹಾಗೂ ಅಡೂರಿನಿಂದ 8 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ವಿಪಕ್ಷಗಳ ಆರೋಪವನ್ನು ಅಲ್ಲಗಳೆದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಅವರು, ಮಹತಾಬ್‌ ಅವರು ಸತತವಾಗಿ 7 ಬಾರಿ ಆಯ್ಕೆಯಾದ ಕಾರಣ ನಿಯಮಾನುಸಾರ ಅವರನ್ನು ಆಯ್ಕೆ ಮಾಡಲಾಗಿದೆ. ಸುರೇಶ್ ಅವರು 1998 ಹಾಗೂ 2004ರಲ್ಲಿ ಸೋಲು ಅನುಭವಿಸಿದ್ದರು ಎಂದು ತಿಳಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X