T20 ವಿಶ್ವಕಪ್ | ಇತಿಹಾಸ ಸೃಷ್ಟಿಸಿ ಸೆಮಿಫೈನಲ್‌ಗೆ ಅಫ್ಘಾನ್; ತಾಲಿಬಾನ್ ನಾಡಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Date:

Advertisements

ಕಿಂಗ್ಸ್ ಟೌನ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಸಿಸಿ T20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 8 ರನ್ ಗಳಿಂದ ಸೋಲಿಸಿದ ಅಫ್ಘಾನಿಸ್ತಾನ, ಚೊಚ್ಚಲ ಬಾರಿಗೆ ಸೆಮಿಫೈನಲ್ ಪ್ರವೇಶಿಸುವ ಮೂಲಕ ಇತಿಹಾಸ ಸೃಷ್ಟಿಸಿತು.

ಅಫ್ಘಾನಿಸ್ತಾನ ಸೆಮಿಫೈನಲ್ ಪ್ರವೇಶಿಸುವುದರೊಂದಿಗೆ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬಿದ್ದಿದೆ. ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸುವ ಮೂಲಕ ರಶೀದ್ ಖಾನ್ ಬಳಗ ಇತಿಹಾಸ ಸೃಷ್ಟಿಸಿದೆ. ಜೂನ್ 26ರಂದು ಗಯಾನದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಅಫ್ಘಾನಿಸ್ತಾನ ಎದುರಿಸಲಿದೆ.

ತಾಲಿಬಾನ್ ನಾಡಲ್ಲಿ ಮುಗಿಲು ಮುಟ್ಟಿದ ಸಂಭ್ರಮ

Advertisements

ಸದ್ಯ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನೇತೃತ್ವದ ಸರ್ಕಾರವು ಆಡಳಿತ ನಡೆಸುತ್ತಿದೆ. ಬಾಂಗ್ಲಾದೇಶವನ್ನು 8 ರನ್ ಗಳಿಂದ ಅಫ್ಘಾನ್ ತಂಡವು ಸೋಲಿಸುತ್ತಿದ್ದತೆಯೇ ತಂಡದ ಆಟಗಾರರು, ಕೋಚ್ ಹಾಗೂ ಇಂಗ್ಲೆಂಡ್‌ನ ಮಾಜಿ ಆಟಗಾರ ಜೋನಾಥನ್ ಟ್ರಾಟ್, ಕೋಚಿಂಗ್ ತಂಡದ ಭಾಗವಾಗಿರುವ ವೆಸ್ಟ್‌ ಇಂಡೀಸ್‌ನ ಮಾಜಿ ಆಟಗಾರ ಡ್ವೇಯ್ನ್ ಬ್ರಾವೋ ಮೈದಾನವಿಡೀ ಓಡಿ, ಕುಣಿದು ಕುಪ್ಪಳಿದರು.

ಗೆದ್ದ ಖುಷಿಯಲ್ಲಿದ್ದ ಅಫ್ಘಾನ್ ತಂಡದ ಆಟಗಾರರ ಕಣ್ಣಲ್ಲಿ ಖುಷಿಯಿಂದ ಆನಂದಬಾಷ್ಪ ಹರಿಸಿದರೆ, ತಂಡವು ಗೆಲ್ಲುತ್ತಿದ್ದಂತೆಯೇ ತಾಲಿಬಾನ್ ನಾಡಲ್ಲಿ ಜನರು ಖುಷಿಯಿಂದ ರಸ್ತೆಗಿಳಿದು, ಸಂಭ್ರಮಾಚರಣೆ ನಡೆಸಿದರು. ಇದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಹೀಗಾಗಿ ರಸ್ತೆಯಿಂದ ಜನರನ್ನು ತೆರವುಗೊಳಿಸಲು ಅಫ್ಘಾನಿಸ್ತಾನದ ಪೊಲೀಸರು, ನೆರೆದಿದ್ದ ಜನರನ್ನು ಚದುರಿಸಲು ಜಲಫಿರಂಗಿ ಬಳಸಿದರಾದರೂ, ಯಾರೂ ಕೂಡ ರಸ್ತೆಯಿಂದ ಕದಡಲಿಲ್ಲ.

ಈ ನಡುವೆ  ಸಾವಿರಾರು ಮಂದಿ ಅಫ್ಘಾನಿಸ್ತಾನದ ಜಲಾದಾಬಾದ್‌ನಲ್ಲಿ ರಸ್ತೆಗೆ ಇಳಿದಿರುವ ಫೋಟೋ ಸದ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.

ಈ ಫೋಟೊವನ್ನು ಖುದ್ದು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್‌ ತನ್ನ ಸೋಷಿಯಲ್ ಮೀಡಿಯಾ ಪೇಜ್‌ನಲ್ಲೂ ಕೂಡ ಪ್ರಕಟಿಸಿದ್ದು, “ತಂಡದ ಗೆಲುವನ್ನು ಹೇಗೆ ಆಚರಿಸಬೇಕೆಂದು ನಮ್ಮವರಿಗೆ ತಿಳಿದಿದೆ” ಎಂದು ತಿಳಿಸಿದೆ.

ವಿಡಿಯೋ ಕಾಲ್ ಮಾಡಿ ನಾಯಕ ರಶೀದ್ ಖಾನ್‌ಗೆ ಅಭಿನಂದಿಸಿದ ಅಫ್ಘಾನ್ ವಿದೇಶ ಮಂತ್ರಿ

ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪಿದ್ದಕ್ಕಾಗಿ ಅಫ್ಘಾನಿಸ್ತಾನ ತಂಡದ ನಾಯಕ ರಶೀದ್ ಖಾನ್ ಅವರನ್ನು ದೇಶದ ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಖಾನ್ ಮುಟ್ಟಾಕಿ ಅಭಿನಂದಿಸಿದ್ದು, ತಂಡಕ್ಕೆ ಹೆಚ್ಚಿನ ಯಶಸ್ಸು ಸಿಗಲಿ ಎಂದು ಹಾರೈಸಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X