ಜುಲೈನಲ್ಲಿ ಮೋದಿ ರಷ್ಯಾ ಭೇಟಿ: ತಿಂಗಳ ಅಂತರದಲ್ಲಿ ಎರಡನೇ ವಿದೇಶ ಭೇಟಿ

Date:

Advertisements

ಭಾರತದ ಪ್ರಧಾನಿ ನರೇಂದ್ರ ಮೋದಿ ಜುಲೈನಲ್ಲಿ ರಷ್ಯಾಕ್ಕೆ ಭೇಟಿ ನಿಡುವ ಸಾಧ್ಯತೆಯಿದ್ದು, ಭಾರತ – ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವುದು ಇದು ಮೊದಲ ಬಾರಿಯಾಗಿದೆ.

ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಮೋದಿ ಇಟಲಿಗೆ ಭೇಟಿ ನೀಡಿದ್ದರು. ಈಗ ಅಧಿಕಾರ ಸ್ವೀಕರಿಸಿ ಒಂದಿ ತಿಂತಗಳು ಕಳೆದಿಲ್ಲ, ಈಗ ರಷ್ಯಾಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ.

ಮೋದಿ ಭೇಟಿ ನೀಡುತ್ತಿರುವ ಬಗ್ಗೆ ರಾಜತಾಂತ್ರಿಕ ಮೂಲಗಳನ್ನು ಉಲ್ಲೇಖಿಸಿ ರಷ್ಯಾದ ಸುದ್ದಿ ಮಾಧ್ಯಮ ಸಂಸ್ಥೆ ಆರ್‌ಐಎ ತಿಳಿಸಿದೆ. ಆದರೆ ಭೇಟಿಯ ಅಂತಿಮ ರೂಪುರೇಷುಗಳು ಇನ್ನು ನಿರ್ಧಾರವಾಗಿಲ್ಲ.

Advertisements

ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಮೋದಿ ಅವರಿಗೆ ರಷ್ಯಾಕ್ಕೆ ಭೇಟಿ ನೀಡಲು ಮಾರ್ಚ್‌ನಲ್ಲಿ ಆಹ್ವಾನ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೇ ಅಸ್ತ್ರ ಮತ್ತು ಗುರಾಣಿ

ಮೋದಿ ರಷ್ಯಾಕ್ಕೆ ಕೊನೆಯ ಬಾರಿ ಭೇಟಿ ನೀಡಿದ್ದು 2019ರಲ್ಲಿ. ವ್ಲಾಡಿವೊಸ್ಟೋಕ್‌ನಲ್ಲಿನ ಈಸ್ಟರ್ನ್‌ ಎಕನಾಮಿಕ್‌ ಫೋರಂನಲ್ಲಿ ಭಾಗಿಯಾಗಿದ್ದರು. 2000ರ ಅಕ್ಟೋಬರ್‌ನಲ್ಲಿ ಪುಟಿನ್‌ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಭಾರತ ಹಾಗೂ ರಷ್ಯಾ ನಡುವೆ ವಾರ್ಷಿಕ ಸಾಂಪ್ರದಾಯಿಕ ಶೃಂಗಸಭೆ ಆರಂಭಗೊಂಡಿತ್ತು.

ಭಾರತ – ರಷ್ಯಾ ನಡುವೆ ಸಾಂಪ್ರದಾಯಿಕ ಶೃಂಗಸಭೆ ಕೊನೆಯದಾಗಿ 2021ರ ಡಿಸೆಂಬರ್‌ನಲ್ಲಿ ನಡೆದಿತ್ತು. ಅಧ್ಯಕ್ಷ ಪುಟಿನ್‌ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೋವಿಡ್‌ ಸಾಂಕ್ರಾಮಕ ಹಾಗೂ ಅನಿರ್ದಿಷ್ಟ ಕಾರಣಗಳಿಂದ ಕಳೆದ ಎರಡು ವರ್ಷಗಳಿಂದ ಉಭಯ ದೇಶಗಳ ನಡುವೆ ಶೃಂಗಸಭೆ ನಡೆದಿಲ್ಲ.

ಕಳೆದ ಹಲವು ದಶಕಗಳಲ್ಲಿ ರಷ್ಯಾವು ಭಾರತಕ್ಕೆ ರಕ್ಷಣಾ ಸಾಮಾಗ್ರಿಗಳನ್ನು ರಫ್ತು ಮಾಡುತ್ತಿತ್ತು. ಆದರೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಯೂರೋಪ್‌ ಹಾಗೂ ಅಮೆರಿಕ ನಡುವೆ ಭಾರತ ರಕ್ಷಣಾ ಸಾಮಗ್ರಿಗಳಿಗಾಗಿ ಒಪ್ಪಂದ ಮಾಡಿಕೊಂಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X