ರಾಯಚೂರು | ಮದುವೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಪ್ರಕರಣ; ಪ್ರೀತಿಸಿದಾತನ ವಿರುದ್ಧ ಕ್ರಮಕ್ಕೆ ಆಗ್ರಹ

Date:

Advertisements

ರಾಯಚೂರು ನಗರದ ಜಲಾಲನಗರದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಭೋವಿ ವಡ್ಡರ ಸಮಾಜ ಸಿಂಧನೂರು ತಾಲೂಕು ಅಧ್ಯಕ್ಷೆ ರತ್ನಮ್ಮ ಒತ್ತಾಯಿಸಿದರು.

ರಾಯಚೂರು ನಗರದಲ್ಲಿ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿ, “ಜಲಾಲನಗರದ ನಿವಾಸಿಯಾಗಿರುವ ಅನುರಾಧಾ ಅದೇ ಬಡಾವಣೆಯ ವಿನಯರೆಡ್ಡಿ ಈರೇಶ ಎಂಬ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಳ್ಳುವದಾಗಿ ಪುಸಲಾಯಿಸಿ ದೂರದ ಊರುಗಳಿಗೆ ಕರೆದುಕೊಂಡು ಹೋಗಿದ್ದ. ಎಲ್ಲೆಡೆ ತಿರುಗಾಡಿ ಬಂದ ನಂತರ ವಡ್ಡರ ಸಮಾಜದರಾಗಿರುವುದರಿಂದ ಮನೆಯುವರು ಮದುವೆಗೆ ನಿರಾಕರಿಸಿದ್ದಾರೆ” ಎಂದರು.

“ಅನುರಾಧಾ ತಂದೆಯೂ ಮದುವೆಗೆ ಸಮ್ಮತಿಸಿದ್ದರು. ಅನುರಾಧಾಳನ್ನು ಮಹಿಳಾ ಸಾಂತ್ವಾನ ಕೇಂದ್ರದಲ್ಲಿರಿಸಿದ್ದಾಗ ತಂದೆತಾಯಿ ಮತ್ತು ಪ್ರೀತಿಸಿದ ಹುಡುಗ ಮೋಸ ಮಾಡಿದ್ದರಿಂದ ಕಟ್ಟಡದ ಮೇಲಿಂದ ಬಿದ್ದು ಸಾವಿಗೀಡಾಗಿದ್ದಾಳೆ. ಕೂಡಲೇ ಆರೋಪಿ ವಿನಯರೆಡ್ಡಿಯನ್ನು ಕಠಿಣ ಶಿಕ್ಷೆಗೆ ಗುರಿಗೊಳಿಸಬೇಕು” ಎಂದು ಆಗ್ರಹಿಸಿದರು.

Advertisements

ಭೋವಿ ವಡ್ಡರ ಸಮಾಜ ಜಿಲ್ಲಾ ಮಹಿಳಾಧ್ಯಕ್ಷೆ ಶಶಿಕಲಾ ಭೀಮರಾಯ ಮಾತನಾಡಿ, “ಪ್ರೀತಿಸುವಾಗ ಇಲ್ಲದೇ ಇರುವ ಜಾತಿ ಮದುವೆ ಮಾಡಿಕೊಳ್ಳಲು ಅಡ್ಡಿಯಾಗಿದೆ. ವಿನಯರೆಡ್ಡಿ ಎಂಬಾತನಿಂದಲೇ ಅನುರಾಧ ಸಾವಿಗೆ ಕಾರಣವಾಗಿದೆ. ಹಾಗಾಗಿ ಕೂಡಲೇ ಆತನ ವಿರುದ್ಧ ಕಠಿಣ ಕ್ರಮ ಕೈಗೊಂಡು ಮೃತ ಯುವತಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೆಣ್ಣು ಮಕ್ಕಳ ಪೂರ್ಣ ಶಿಕ್ಷಣ, ದೇಶದ ರಕ್ಷಣೆ; ಕ್ರೈ ಸಂಸ್ಥೆಯ ರಾಷ್ಟ್ರೀಯ ಅಭಿಯಾನಕ್ಕೆ ಚಾಲನೆ

ಈ ಸಂದರ್ಭದಲ್ಲಿ ಭೋವಿ ಸಮಾಜದ ಜಿಲ್ಲಾಧ್ಯಕ್ಷ ಹನುಮಂತ, ಸಿಂಧನೂರು ತಾಲೂಕು ಅಧ್ಯಕ್ಷೆ ಗದ್ದೆಮ್ಮ, ರೇಣಮ್ಮ, ಹೊನ್ನಮ್ಮ, ಲಕ್ಷ್ಮೀ, ರತ್ನಮ್ಮ, ಶಾಂತಮ್ಮ, ನಾಗರತ್ನ ಇದ್ದರು.

ವರದಿ : ಹಫೀಜುಲ್ಲ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X