ಮೈಸೂರು | ಮಾದಕ ವಸ್ತುಗಳ ದುರುಪಯೋಗ, ಕಳ್ಳ ಸಾಗಣಿಕೆ ವಿರುದ್ಧ ಜಾಗೃತಿ ಅಭಿಯಾನದ ಪ್ರತಿಜ್ಞೆ ಸ್ವೀಕಾರ

Date:

Advertisements

ಮಕ್ಕಳಲ್ಲಿ ಮಾದಕ ವಸ್ತುಗಳ ಅರಿವು ಮೂಡಬೇಕು. ಸ್ವಾಸ್ಥ್ಯ ಸಮಾಜಕ್ಕೆ ಕೊಡುಗೆಯಾಗುವ ನಿಟ್ಟಿನಲ್ಲಿ ಮಕ್ಕಳು ಬೆಳೆಯಬೇಕು ಎಂದು ಅಂಕಣಕಾರ ಡಾ ವಿ ರಂಗನಾಥ್ ಹೇಳಿದರು.

ಮೈಸೂರಿನ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಪುಷ್ಪಾಂಜಲಿ ಸೇವಾ ಸಂಸ್ಥೆ ಮತ್ತು ಅಗರ್ವಾಲ್ ಸಮಾಜದ ಸಂಯುಕ್ತ ಆಶ್ರಯದಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಕಳ್ಳ ಸಾಗಣೆ’ ವಿರೋಧದ ಅಂತರರಾಷ್ಟ್ರೀಯ ದಿನ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಜ್ಞೆ ಬೋಧಿಸಿ ಮಾತನಾಡಿದರು.

ಮಾದಕ ವಸ್ತುಗಳ ಅರಿವು

“ಮಕ್ಕಳಲ್ಲಿ ಮಾದಕ ವಸ್ತುಗಳ ಬಗೆಗಿನ ಕುತೂಹಲ ಮೂಡದಂತೆ ಹಾಗೂ ಮಾದಕ ವಸ್ತುಗಳ ವ್ಯಸನಿಗಳಾಗದಂತೆ ನೋಡಿಕೊಳ್ಳಬೇಕು. ಮಕ್ಕಳು ಆರೋಗ್ಯದ ಕಡೆ ಗಮನ ಹರಿಸಿ ಶಿಕ್ಷಣದ ಕಡೆಗೆ ಗಮನ ಕೊಡಬೇಕು. ಯಾವುದೇ ಸಾಮಾಜಿಕ ಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡಬಾರದು. ಅಂತಹ ಘಟನೆಗಳು ಕಂಡುಬಂದಲ್ಲಿ ಖಂಡಿಸಿ, ಸಂಬಂಧಪಟ್ಟವರ ಗಮನಕ್ಕೆ ತರುವಂತಹ ಕೆಲಸವಾಗಬೇಕು” ಎಂದರು.

Advertisements

ಮಾದಕ ವಸ್ತುಗಳ ಅರಿವು

ಕಾರ್ಯಕ್ರಮಕ್ಕೂ ಮುನ್ನ ಎನ್‌ಸಿಸಿ ಕೆಡೆಟ್‌ಗಳು, ಮಹಾವೀರ ವಿದ್ಯಾಸಂಸ್ಥೆ, ಗೋಪಾಲಸ್ವಾಮಿ ಕಾಲೇಜು, ವಾಗ್ದೇವಿ ವಿದ್ಯಾಲಯ, ಗೀತಾ ಶಿಶು ಶಿಕ್ಷಣ ಸಂಸ್ಥೆ ಸೇರಿದಂತೆ ಇತರ ಕಾಲೇಜಿನ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಾನವ ಸರಪಳಿಯಲ್ಲಿ ಭಾಗಿಯಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೃಹತ್‌ ಗುಂಡಿಗಳಿಂದ ರಾರಾಜಿಸುತ್ತಿರುವ ರಸ್ತೆ; ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಹೈರಾಣು

ಕಾರ್ಯಕ್ರಮದಲ್ಲಿ ಅಗರ್ವಾಲ್ ಸಂಸ್ಥೆಯ ಮುಖ್ಯಸ್ಥ ಡಾ ಎಸ್ ಕೆ ಮಿತ್ತಲ್ , ಚೇತನ್ ಗಿರಿ ಮಹಾರಾಜ್ ಸ್ವಾಮೀಜಿ, ಎನ್ ಸಿ ಸಿ ಗ್ರೂಪ್ ಕಮಾಂಡರ್ ಕರ್ನಲ್ ರೋಹಿತ್ ಠಾಕೂರ್, ಉಚ್ಛ ಶಿಕ್ಷಣಾಧಿಕಾರಿ ಅರುಣ್ ಕುಮಾರ್, ಗೋಪಾಲಸ್ವಾಮಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್, ಜೀವದಾರ ರಕ್ತನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ದತ್ತಾತ್ರೇಯ ಸಿಂಧೆ, ನವೀನ ಗುಪ್ತ, ಹರಿ ಸಿಂಗ್ ಲಂಬ, ಅಜಯ್ ಶಾಸ್ತ್ರಿ ಸೇರಿದಂತೆ ಇತರ ಮುಖಂಡರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X