ಶಿವಮೊಗ್ಗ | ಮಹಾನಗರ ಪಾಲಿಕೆ ಹಾಗೂ ಖಾಸಗಿ ನಿವೇಶನಗಳ ಅತಿಕ್ರಮಣ ತೆರವಿಗೆ ಆಗ್ರಹ

Date:

Advertisements

ಗೋಪಾಲಗೌಡ ಬಡಾವಣೆ ಮಹಾನಗರ ಪಾಲಿಕೆಯ ಹಾಗೂ ಖಾಸಗಿ ನಿವೇಶನಗಳ ಅತಿಕ್ರಮಣ ತೆರವುಗೊಳಿಸುವಂತೆ ಒತ್ತಾಯಿಸಿ ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

“ಮಹಾನಗರ ಪಾಲಿಕೆ ವ್ಯಾಪ್ತಿಯ 17ನೇ ವಾರ್ಡ್‌ ಗೋಪಾಲಗೌಡ ಬಡಾವಣೆಯ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಬಭಾಗ ಮಹಾನಗರ ಪಾಲಿಕೆಗೆ ಸೇರಿದ ಸಾಕಷ್ಟು ಖಾಲಿ ನಿವೇಶನಗಳಿವೆ. ಇದಕ್ಕೆ ಹೊಂದಿಕೊಂಡಂತೆ ಈ ಹಿಂದೆ ಪಾಲಿಕೆ ಕಸ ವಿಲೇವಾರಿ ಘಟಕ ತೆರೆದಿದ್ದು, ಉಳಿದ ನಿವೇಶನದ ಜಾಗಕ್ಕೆ ಯಾವುದೇ ತಡೆಗೋಡೆ ನಿರ್ಮಿಸಿಲ್ಲ. ಇದನ್ನು ಗಮನಿಸಿದ ಮಾಜಿ ಜನಪ್ರತಿನಿಧಿ ಹಾಗೂ ಪ್ರಭಾವಿ ಮುಖಂಡರು ಹಾಲಿ ಜನಪ್ರತಿನಿಧಿಗಳ ಕುಮ್ಮಕ್ಕಿನಿಂದ ಮಹಾನಗರ ಪಾಲಿಕೆಯ ಆಸ್ತಿ ಕಬಳಿಸಲು ಹೊಂಚು ಹಾಕಿದ್ದಾರೆ” ಎಂದು ಗೋಪಾಲಗೌಡ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಆರೋಪಿಸಿದರು.

“ಪಾಲಿಕೆಗೆ ಸೇರಿದ ಹಾಗೂ ಕೆಲವು ಖಾಸಗಿ ವ್ಯಕ್ತಿಗಳ ಖಾತೆ ಇರುವ ನಿವೇಶನಗಳಿಗೆ ಅಕ್ರಮವಾಗಿ ಬೇಲಿ ನಿರ್ಮಿಸಿಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಗಮನಿಸಿ ಸಾರ್ವಜನಿಕರು ಹಾಗೂ ಖಾಸಗಿ ನಿವೇಶನದ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿ ರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಮನವಿ ಮೇರೆಗೆ ರಕ್ಷಣಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಖಾಸಗಿ ನಿವೇಶನಗಳಿಗೆ ಅಕ್ರಮವಾಗಿ ನಿರ್ಮಿಸಿದ್ದ ಬೇಲಿಗಳನ್ನು ತೆರವುಗೊಳಿಸಿದ್ದರು. ಉಳಿದ ಮಹಾನಗರ ಪಾಲಿಕೆಗೆ ಸೇರಿದ ಜಾಗದ ಒತ್ತುವರಿಯನ್ನು ಇನ್ನೂ ತೆರವುಗೊಳಿಸಿಲ್ಲ. ಆದ್ದರಿಂದ ತಾವುಗಳು ಖುದ್ದು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು” ಎಂದು ಒತ್ತಾಯಿಸಿದರು.

Advertisements

ಮಹಾನಗರ ಪಾಲಿಕೆಯ ಅಸ್ತಿಗೆ ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿ ಕಬಳಿಸಲು ಯತ್ನಿಸಿರುವ ಭೂ ಕಬಳಿಕೆದಾರರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು.  ಖಾಲಿ ಜಾಗದಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಪಾರ್ಕ್/ಉದ್ಯಾನವನ ಅಥವಾ ಕ್ರೀಡಾಂಗಣ ನಿರ್ಮಿಸಿ ಸ್ಥಳೀಯ ನಿವಾಸಿಗಳಿಗೆ ಅನುಕೂಲವಾಗುವಂತೆ ಬಹುದಿನದ ಬೇಡಿಕೆಗೆ ಸಹಕರಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಾದಕ ವಸ್ತುಗಳ ದುರುಪಯೋಗ, ಕಳ್ಳ ಸಾಗಣಿಕೆ ವಿರುದ್ಧ ಜಾಗೃತಿ ಅಭಿಯಾನದ ಪ್ರತಿಜ್ಞೆ ಸ್ವೀಕಾರ

ಈ ಸಂದರ್ಭದಲ್ಲಿ ಜಿ ಡಿ ಮಂಜುನಾಥ್, ಟಿ ಡಿ ಗಿತೇಂದ್ರ ಗೌಡ, ಆರ್ ರಾಜಶೇಕರ್, ಬಿ ಆರ್ ರವಿ, ಬಿ ರುದ್ರಪ್ಪ, ಈ ಟಿ ಕಿರಣ್ ಕುಮಾರ್, ನಾಗೇಶ್, ಕೆ ಪಿ ಸುಬ್ಬಣ್ಣ, ಎಂ ಬಿ ರವಿಕುಮಾ‌ರ್, ಪ್ರಜ್ವಲ್, ಸತೀಶ್ ಚಂದ್ರ, ಅಜಯ್, ಜಿ ಎಸ್ ಶಿವಕುಮಾರ್, ಹೆಚ್ ಬಸವರಾಜ್, ಎನ್ ಆರ್ ಮುರುಳಿ, ಸುಧಾಕ‌ರ್ ಶೆಟ್ಟಿ, ಅರವಿಂದ್, ಎ ಪಿ ಜಯಣ್ಣ, ಶಿವಾನಂದ್ ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X