ಹತ್ತಿಕ್ಕಬೇಡಿ, ಅವಕಾಶ ನೀಡಿ: ಮೊದಲ ಭಾಷಣದಲ್ಲಿ ಸ್ಪೀಕರ್‌ಗೆ ವಿಪಕ್ಷ ನಾಯಕ ರಾಹುಲ್ ಮನವಿ

Date:

Advertisements

ಲೋಕಸಭೆ ಸ್ಪೀಕರ್ ಆಗಿ ಮತ್ತೆ ಆಯ್ಕೆಯಾದ ಓಂ ಬಿರ್ಲಾ ಅವರಿಗೆ ಅಭಿನಂದಿಸಿದ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ “ಜನರ ಧ್ವನಿಯನ್ನು ಪ್ರತಿನಿಧಿಸಲು, ಮಾತನಾಡಲು ನಮಗೂ ಅವಕಾಶ ಕೊಡಿ” ಎಂದು ಮನವಿ ಮಾಡಿದ್ದಾರೆ.

ರಾಹುಲ್ ಗಾಂಧಿ ವಿಪಕ್ಷ ನಾಯಕರಾದ ಬಳಿಕ ಲೋಕಸಭೆಯಲ್ಲಿ ಮೊದಲ ಭಾಷಣವನ್ನು ಮಾಡಿದ್ದು ಇಂಡಿಯಾ ಒಕ್ಕೂಟದ ಪರವಾಗಿ ನೂತನವಾಗಿ ಆಯ್ಕೆಯಾದ ಸ್ಪೀಕರ್‌ಗೆ ಅಭಿನಂದಿಸಿದರು. ಜೊತೆಗೆ ಲೋಕಸಭೆಯು ಯಾವ ರೀತಿ ನಡೆಯಬೇಕು ಎಂದು ವಿವರಿಸಿದರು.

“ಕೆಳಮನೆ (ಲೋಕಸಭೆ) ಭಾರತದ ಜನರ ಧ್ವನಿಯನ್ನು ಪ್ರತಿನಿಧಿಸುತ್ತದೆ. ಈ ಧ್ವನಿಯ ಅಂತಿಮ ತೀರ್ಪುಗಾರರು ನೀವು. ಖಂಡಿತವಾಗಿಯೂ ಸರ್ಕಾರಕ್ಕೆ ರಾಜಕೀಯ ಬಲವಿದೆ. ಆದರೆ ವಿಪಕ್ಷಗಳು ಕೂಡಾ ಭಾರತದ ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ. ಕಳೆದ ಬಾರಿಗಿಂತ ಈ ಬಾರಿ ವಿಪಕ್ಷಗಳು ಗಮನಾರ್ಹವಾಗಿ ಅಧಿಕ ಜನರ ಧ್ವನಿಯನ್ನು ಪ್ರತಿನಿಧಿಸುತ್ತವೆ” ಎಂದು ತಿಳಿಸಿದರು.

Advertisements

ಇದನ್ನು ಓದಿದ್ದೀರಾ?  ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

“ನೀವು ಮಾಡುವ ಕೆಲಸಕ್ಕೆ ಬೆಂಬಲ ನೀಡುತ್ತೇವೆ. ಹಾಗೆಯೇ ಕೆಳಮನೆಯು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ನಾವು ಬಯಸುತ್ತೇವೆ. ಇದು ಅತೀ ಮುಖ್ಯ. ನಂಬಿಕೆಯ ಆಧಾರದಲ್ಲಿ ಸಹಕಾರ ಬೆಳೆಯುತ್ತದೆ. ಆದ್ದರಿಂದ ವಿಪಕ್ಷಗಳ ದನಿ ಅತೀ ಮುಖ್ಯವಾಗುತ್ತದೆ. ಈ ಮನೆಯಲ್ಲಿ ವಿಪಕ್ಷಗಳ ಪ್ರಾತಿನಿಧ್ಯಕ್ಕೆ ಅವಕಾಶ ಸಿಗಬೇಕು” ಎಂದು ಹೇಳಿದರು.

“ಜನರನ್ನು ಪ್ರತಿನಿಧಿಸಲು, ಮಾತನಾಡಲು, ದೇಶದ ಜನರ ದನಿಯನ್ನು ಪ್ರತಿನಿಧಿಸಲು ನಮಗೆ ನೀವು ಅವಕಾಶ ಮಾಡಿಕೊಡುತ್ತೀರಿ ಎಂಬ ವಿಶ್ವಾಸವಿದೆ. ಎಷ್ಟು ಪರಿಣಾಮಕಾರಿ ಸದನವು ನಡೆಯಲಿದೆ ಎಂಬುವುದು ಪ್ರಶ್ನೆಯಲ್ಲ. ಭಾರತದ ಎಷ್ಟು ಜನರ ಪ್ರತಿನಿಧಿಗಳಿಗೆ ಭಾಗಿಯಾಗಲು ಅವಕಾಶ ನೀಡಲಾಗುತ್ತದೆ ಎಂಬುವುದು ಪ್ರಶ್ನೆಯಾಗಿದೆ” ಎಂದು ಅಭಿಪ್ರಾಯಿಸಿದರು.

“ವಿಪಕ್ಷ ನಾಯಕರುಗಳ ಧ್ವನಿಯನ್ನು ಮೌನಗೊಳಿಸುವ ಮೂಲಕ ನೀವು ಲೋಕಸಭೆಯನ್ನು ಪರಿಣಾಮಕಾರಿಯಾಗಿ ನಡೆಸಬಹುದು ಎಂಬ ಕಲ್ಪನೆಯು ಪ್ರಜಾಸತ್ತಾತ್ಮಕವಲ್ಲದ ಕಲ್ಪನೆಯಾಗಿದೆ” ಎಂದರು.

ಇನ್ನು “ವಿಪಕ್ಷಗಳು ಈ ದೇಶದ ಸಂವಿಧಾನವನ್ನು ರಕ್ಷಿಸಬೇಕೆಂದು ಜನರು ಬಯಸುತ್ತಾರೆ ಎಂಬುವುದು ಈ ಚುನಾವಣೆಯಲ್ಲಿ ತಿಳಿದುಬಂದಿದೆ. ವಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡುವ ಮೂಲಕ, ಭಾರತದ ಜನರನ್ನು ಪ್ರತಿನಿಧಿಸಲು ನಮಗೆ ಅವಕಾಶ ನೀಡುವ ಮೂಲಕ ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಮಾಡುತ್ತೀರಿ ಎಂಬ ವಿಶ್ವಾಸ ನಮಗಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X