ಬೆಂಗಳೂರು | ಟೀ, ಕಾಫಿ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರ ಚಿಂತನೆ

Date:

Advertisements

ಸದ್ಯ 1 ಲೀ. ಹಾಲಿನ ಜತೆಗೆ 50 ಎಂಎಲ್‌ ಹಾಲು ನೀಡುತ್ತೇವೆಂದು ಕೆಎಂಎಫ್‌ ಹಾಲಿನ ದರದಲ್ಲಿ ₹2 ಏರಿಕೆ ಮಾಡಿದೆ. 1ಲೀ. 50 ಎಂಎಲ್‌ ಹಾಲಿನ ದರ ₹44ಗೆ ಏರಿಕೆಯಾಗಲಿದೆ. ಈ ಬೆನ್ನಲ್ಲೇ, ರಾಜ್ಯ ಹೋಟೆಲ್ ಮಾಲೀಕರ ಸಂಘವು ಕಾಫಿ, ಟೀ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಪೆಟ್ರೊಲ್, ಡಿಸೇಲ್, ತರಕಾರಿ ಸೇರಿದಂತೆ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇದರಿಂದ ಹೋಟೆಲ್ ಉದ್ಯಮಕ್ಕೆ ಎದುರಾಗುವ ನಷ್ಟವನ್ನು ಪರಿಗಣಿಸಿ ಕಾಫಿ, ಟೀ ಬೆಲೆಯಲ್ಲಿ ₹2 ಏರಿಕೆ ಮಾಡಲು ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ.

ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೇ, ನಮ್ಮಲ್ಲಿ ಕಾಫಿ, ಟೀ ಬೆಲೆ ಕಡಿಮೆ ಇದೆ. ಅಲ್ಲದೇ, ಕಾಫಿ ಹಾಗೂ ಟೀ ಪೌಡರ್​ಗಳ ಬೆಲೆ ಹೆಚ್ಚಳವಾಗಿದೆ. ಹಾಗಾಗಿ, ಕನಿಷ್ಠ ₹2 ಏರಿಕೆ ಮಾಡುವ ಬಗ್ಗೆ ಹೋಟೆಲ್ ಮಾಲೀಕರು ಚಿಂತನೆ ನಡೆಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

1 ಲೀಗೆ ಹೆಚ್ಚುವರಿ 50 ಎಂಎಲ್‌ ಹಾಲು ಸೇರ್ಪಡೆ ಮಾಡಿ ದರ ಪರಿಷ್ಕರಣೆಯೊಂದಿಗೆ ಇಂದಿನಿಂದ ಹಾಲಿನ ಪ್ಯಾಕೆಟ್‌ ಮಾರಾಟವಾಗುತ್ತಿದೆ. ಸದ್ಯ ರಾಜ್ಯದಲ್ಲಿ ಹಾಲಿನ ದರ ಹೆಚ್ಚಳದ ಬಗ್ಗೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇದು ದರ ಏರಿಕೆಯಲ್ಲ. 50 ಎಂಎಲ್‌ ಹೆಚ್ಚು ಹಾಳು ನೀಡುತ್ತಿದ್ದೇವೆ. ಅದಕ್ಕೆ ಈ ₹2 ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X