ಬೆಂಗಳೂರು | 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಭಾಟಿಯಾ ಕುರಿತ ಪಾಠ; ಪಾಲಕರ ವಿರೋಧ

Date:

Advertisements

ಬೆಂಗಳೂರಿನ ಹೆಬ್ಬಾಳದಲ್ಲಿರುವ ಸಿಂಧಿ ಶಾಲೆಯ ಪಠ್ಯವೊಂದರಲ್ಲಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಕುರಿತಾದ ಪಠ್ಯವೊಂದನ್ನು ಅಳವಡಿಸಿರುವುದು ವಿವಾದಕ್ಕೆ ಕಾರಣವಾಗಿದೆ.

‘ಸಿಂಧ್ ವಿಭಜನೆಯ ನಂತರದ ಜೀವನ, ವಲಸೆ, ಸಮುದಾಯ ಮತ್ತು ಕಲಹ’ ಎಂಬ ಶಿರ್ಶಿಕೆಯಡಿ ತಮನ್ನಾ ಪಠ್ಯ ಇದೆ. ಇದಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.

“ತಮನ್ನಾ ಅವರು ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸುತ್ತಾರೆ. ಅಂಥ ಸಿನಿಮಾಗಳಲ್ಲಿ ಅವರು ಪೋರ್ನ್ ರೀತಿಯ ದೃಶ್ಯಗಳಲ್ಲಿಯೂ ಕಾಣಿಸಿಕೊಳ್ಳುತ್ತಾರೆ. ಅಂಥವರು ಮಕ್ಕಳಿಗೆ ಆದರ್ಶವಾಗಬೇಕೇ?” ಎಂದು ಪಾಲಕರು ಪ್ರಶ್ನೆ ಮಾಡಿದ್ದಾರೆ.

Advertisements

“ತಮನ್ನಾ ಅವರಿಂದ ಮಕ್ಕಳು ಕಲಿಯುವುದಾದರೂ ಏನಿದೆ?” ಎಂದು ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ.

ಸಿಂಧಿ ಶಾಲೆಯ ಪಠ್ಯೇತರ ಪಠ್ಯದಲ್ಲಿ ಈ ಪಾಠ ಅಳವಡಿಕೆ ಮಾಡಲಾಗಿದೆ. 7ನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಪಾಠ ನೀಡಲಾಗಿದೆ. ಈ ಕುರಿತು ಕೆಲವು ಫೋಟೋಗಳು ಲಭ್ಯವಾಗಿದೆ. ಪಾಠದಲ್ಲಿ ತಮನ್ನಾ ಅವರ ಬಗ್ಗೆ ನೀಡಲಾಗಿದೆ. ಅವರು ಹುಟ್ಟಿದ್ದು ಅವರು ಮಾಡಿದ ಸಿನಿಮಾ ಇವುಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತೆರಿಗೆ ಕಟ್ಟುತ್ತಿರುವವರ ಮೇಲೆ ಹೊರೆ ಹೊರಿಸುತ್ತಿರುವ ಬಿಬಿಎಂಪಿ: ಎಎಪಿ ಆಕ್ರೋಶ

ಸಿಂಧ್ ಸಮುದಾಯ ಸಾಧಕರ ಪರಿಚಯಿಸಲು ಹೋಗಿ ಎಡವಟ್ಟು ಮಾಡಿದ್ದಾರೆ ಎನ್ನಲಾಗುತ್ತಿದೆ. ನಟಿ ಮಾಡಿದ ಸಿನಿಮಾಗಳ ಬಗ್ಗೆ ಹಾಗೂ ತೆಲುಗು, ತಮಿಳಿನಲ್ಲಿ ಅವರು ಅಭಿನಯಿಸಿರುವ ಬಗ್ಗೆ ಪಠ್ಯದಲ್ಲಿ ನೀಡಲಾಗಿದೆ.

ಈ ಬಗ್ಗೆ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಪೋಷಕರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X