ಪ್ರಥಮ ದರ್ಜೆ ಕ್ರಿಕೆಟ್ | ಒಂದೇ ಓವರ್‌ನಲ್ಲಿ 43 ರನ್ ಚಚ್ಚಿಸಿಕೊಂಡ ಇಂಗ್ಲೆಂಡ್‌ ವೇಗಿ ಒಲ್ಲಿ ರಾಬಿನ್ಸನ್!

Date:

Advertisements

ಇಂಗ್ಲೆಂಡ್‌ನ ವೇಗದ ಬೌಲರ್ ಒಲ್ಲಿ ರಾಬಿನ್ಸನ್ ಕೌಂಟಿ ಚಾಂಪಿಯನ್‌ಶಿಪ್ ಪಂದ್ಯದಲ್ಲಿ ಒಂದೇ ಓವರ್‌ನಲ್ಲಿ 43 ರನ್‌ಗಳನ್ನು ಚಚ್ಚಿಸಿಕೊಳ್ಳುವ ಮೂಲಕ ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಅತ್ಯಂತ ದುಬಾರಿ ಬೌಲಿಂಗ್ ಮಾಡುವ ಅನಗತ್ಯ ದಾಖಲೆಯನ್ನು ತನ್ನ ಹೆಸರಿನಲ್ಲಿ ಬರೆಸಿಕೊಂಡಿದ್ದಾರೆ.

2021ರಲ್ಲಿ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಬಲಗೈ ಬೌಲರ್ ರಾಬಿನ್ಸನ್, ಇಂಗ್ಲೆಂಡ್ ಪರ 20 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಅವರು ಇಲ್ಲಿ ಹೋವ್‌ನಲ್ಲಿ ಸಸೆಕ್ಸ್‌ಗಾಗಿ ಆಡುತ್ತಿರುವಾಗ ಲೀಸೆಸ್ಟರ್‌ಶೈರ್ ವಿರುದ್ಧ ಡಿವಿಷನ್ ಎರಡು ಪಂದ್ಯದಲ್ಲಿ ತಮ್ಮ ಓವರ್ ಅನ್ನು ಪೂರ್ಣಗೊಳಿಸಲು ಒಟ್ಟು ಒಂಭತ್ತು ಎಸೆತಗಳನ್ನು ಬೌಲ್ ಮಾಡಿ, 43 ರನ್ ಚಚ್ಚಿಸಿಕೊಂಡಿದ್ದಾರೆ. ಇದು 134 ವರ್ಷಗಳ ಕೌಂಟಿ ಚಾಂಪಿಯನ್‌ಶಿಪ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಓವರ್ ಆಗಿದೆ.

ಲೀಸೆಸ್ಟರ್‌ಶೈರ್‌ನ ಲೂಯಿಸ್ ಕಿಂಬರ್, ರಾಬಿನ್ಸನ್ ಎಸೆತದಲ್ಲಿ ಐದು ಸಿಕ್ಸರ್ (ಮೂರು ನೋಬಾಲ್), ಮೂರು ಬೌಂಡರಿ ಮತ್ತು ಒಂದು ರನ್ ಬಾರಿಸಿ 43 ರನ್ ಗಳಿಸಿದರು.

Advertisements

ರಾಬಿನ್ಸನ್ ಅವರ 13ನೇ ಓವರ್‌ನಲ್ಲಿ ನೋ ಬಾಲ್‌ನಲ್ಲಿ 6, 6, ನೋ ಬಾಲ್‌ನಲ್ಲಿ 4, 6, 4, 6, ನೋ ಬಾಲ್‌ನಲ್ಲಿ 4, 6 ಮತ್ತು ಒಂದು ರನ್ ಗಳಿಸಿದರು. ಈ ಮೂಲಕ ಇಂಗ್ಲೆಂಡ್ ಪರ ಅತಿ ಹೆಚ್ಚು ರನ್ ನೀಡಿದ ದಾಖಲೆಯನ್ನೂ ರಾಬಿನ್ಸನ್ ಮುರಿದರು. ರಾಬಿನ್ಸನ್ ಮಾಜಿ ಟೆಸ್ಟ್ ವೇಗದ ಬೌಲರ್ ಅಲೆಕ್ಸ್ ಟ್ಯೂಡರ್ ಅವರ 38 ರನ್‌ಗಳನ್ನು ಕೊಟ್ಟಿದ್ದ ದಾಖಲೆಯನ್ನು ಹಿಂದಿಕ್ಕಿದರು.

ಎರಡನೇ ಅತಿವೇಗದ ದ್ವಿಶತಕ ಬಾರಿಸಿದ ಲೂಯಿಸ್ ಕಿಂಬರ್

ರಾಬಿನ್ಸನ್ ಓವರ್‌ನಲ್ಲಿ 43 ರನ್ ಬಂದಿದ್ದು ಒಂದೆಡೆಯಾದರೆ, ಪ್ರಥಮ ದರ್ಜೆ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ವೇಗದ ಡಬಲ್ ಸೆಂಚುರಿ ಬಾರಿಸಿದ ಕೀರ್ತಿಗೆ ಲೂಯಿಸ್ ಕಿಂಬರ್ ಪಾತ್ರರಾಗಿದ್ದಾರೆ.

ಲೂಯಿಸ್ ಕಿಂಬರ್ ಅವರು, ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಕೇವಲ 100 ಎಸೆತಗಳಲ್ಲಿ ಎರಡನೇ ಅತಿವೇಗದ ದ್ವಿಶತಕ ಬಾರಿಸಿದರು. ಈ ಮೊದಲು 2018ರಲ್ಲಿ ಕಾಬೂಲ್ ರೀಜನ್ Vs ಬೂಸ್ಟ್ ರೀಜನ್‌ನ ಪಂದ್ಯದಲ್ಲಿ ಶಫೀಕುಲ್ಲಾ ಅವರು 89 ಎಸೆತಗಳಲ್ಲಿ ಅತಿವೇಗದ ದ್ವಿಶತಕ ಬಾರಿಸಿದ್ದರು. ಈ ಪಟ್ಟಿಯಲ್ಲಿ ಭಾರತದ ರವಿಶಾಸ್ತ್ರೀ ಹಾಗೂ ತನ್ಮಯ್ ಅಗರ್ವಾಲ್ ಹೆಸರು ಕೂಡ ಇದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X