ಸಿಎಂ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್, ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ

Date:

Advertisements

ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿಯವರು ಕೆಂಪೇಗೌಡ ಜಯಂತಿಯ ವೇದಿಕೆಯಲ್ಲಿ ನೀಡಿದ್ದ ಬಹಿರಂಗ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಸ್ವಾಮೀಜಿಯವರ ಹೇಳಿಕೆ ಕುರಿತು ಸಿಎಂ ಆಗಲೀ, ಡಿಕೆ ಶಿವಕುಮಾರ್ ಆಗಲೀ ವೇದಿಕೆ ಮೇಲೆ ಯಾವುದೇ ಉತ್ತರ ನೀಡಲಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಹೊರಬಂದ ಬಳಿಕ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.

“ನಮ್ಮದು ಹೈಕಮಾಂಡ್ ಸಂಸ್ಕೃತಿಯ ಪಕ್ಷ. ಹೈಕಮಾಂಡ್ ನಿರ್ಧಾರವೇ ಅಂತಿಮ. ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತ ಸ್ವಾಮೀಜಿ ಅವರಲ್ಲ” ಎಂದು ಹೇಳಿದರು. ಆ ಮೂಲಕ, ಸಿಎಂ ಸ್ಥಾನ ಅಷ್ಟು ಸುಲಭವಿಲ್ಲ ಎಂಬ ಸಂದೇಶವನ್ನು ಸಿದ್ದರಾಮಯ್ಯ ರವಾನೆ ಮಾಡಿದರು.

Advertisements
Chandrashekhar swamiji
ಚಂದ್ರಶೇಖರನಾಥ ಸ್ವಾಮೀಜಿ

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯುತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ? ಡಿಕೆಶಿಯನ್ನು ಸಿಎಂ ಮಾಡಲು ಬಹಿರಂಗವಾಗಿ ಸಿದ್ದರಾಮಯ್ಯಗೆ ಮನವಿ ಮಾಡಿಕೊಂಡ ಸ್ವಾಮೀಜಿ!

“ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ” ಎಂದು ತಿಳಿಸಿದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X