T20 ವಿಶ್ವಕಪ್ | ರೋಹಿತ್ ಶರ್ಮಾ ಅರ್ಧಶತಕ; ಇಂಗ್ಲೆಂಡ್‌ ಗೆಲುವಿಗೆ 172 ರನ್‌ಗಳ ಗುರಿ ನೀಡಿದ ಟೀಮ್ ಇಂಡಿಯಾ

Date:

Advertisements

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ 172 ರನ್‌ಗಳ ಗುರಿ ನೀಡಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 171 ರನ್ ದಾಖಲಿಸಿತು.

ಟೀಮ್ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾರ ಪೈಕಿ ಕೊಹ್ಲಿ ಸ್ಫೋಟಕ ಆರಂಭ ನೀಡುವ ಮುನ್ಸೂಚನೆ ನೀಡಿದರು. ರೀಸ್ ಟಾಪ್ಲಿಯ ಓವರ್‌ನಲ್ಲಿ ಒಂದು ಸಿಕ್ಸರ್‌ ಬಾರಿಸಿ, ನಂತರದ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಬಳಿಕ ಬಂದ ರಿಷಭ್ ಪಂತ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಕೇವಲ 4 ರನ್ ಬಾರಿಸಿ, ಸ್ಯಾಮ್ ಕರನ್ ಎಸೆತದಲ್ಲಿ ಔಟಾದರು.

Advertisements

ಬಳಿಕ ಕ್ರೀಸ್‌ನಲ್ಲಿದ್ದ ನಾಯಕ ರೋಹಿತ್ ಶರ್ಮಾ ಜೊತೆಗೂಡಿದ ಸೂರ್ಯ ಕುಮಾರ್ ಯಾದವ್ ಉತ್ತಮ ಜೊತೆಯಾಟ ನಡೆಸಿದರು. ನಾಯಕ ರೋಹಿತ್ ಶರ್ಮಾ 39 ಎಸೆತಗಳನ್ನು ಎದುರಿಸಿ 6 ಬೌಂಡರಿ ಹಾಗೂ 2 ಬೌಂಡರಿಯ ನೆರವಿನಿಂದ 57 ರನ್ ಗಳಿಸಿದ್ದಾಗ, ಆದಿಲ್ ರಶೀದ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ಸೂರ್ಯ ಕುಮಾರ್ ಯಾದವ್ ಹಾಗೂ ರೋಹಿತ್ ಶರ್ಮಾ ಜೋಡಿಯು 73 ರನ್‌ಗಳ ಜೊತೆಯಾಟ ನಡೆಸಿದರು.

ಆ ಬಳಿಕ ಉತ್ತಮವಾಗಿ ಬ್ಯಾಟ್ ನಡೆಸಿ ಅರ್ಧಶತಕದತ್ತ ಮುನ್ನುಗ್ಗುತ್ತಿದ್ದ ಸೂರ್ಯ ಕುಮಾರ್ ಯಾದವ್ ಅವರನ್ನು ಜೋಫ್ರಾ ಆರ್ಚರ್, ತನ್ನ ಓವರ್‌ನಲ್ಲಿ ವಿಕೆಟ್ ಪಡೆಯುವ ಮೂಲಕ ರನ್‌ಗೆ ಬ್ರೇಕ್ ಹಾಕಿದರು. ಕ್ರಿಸ್ ಜೋರ್ಡಾನ್‌ಗೆ ಕ್ಯಾಚ್ ನೀಡಿ, ಔಟಾಗುವುದಕ್ಕೂ ಮುನ್ನ 36 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಬೌಂಡರಿಯ ನೆರವಿನಿಂದ 47 ರನ್ ಗಳಿಸಿದರು.

ಆನಂತರ ಟೀಮ್ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯಾ 13 ಎಸೆತಗಳಲ್ಲಿ 23 ರನ್ ಗಳಿಸಿದರೆ, ರವೀಂದ್ರ ಜಡೇಜಾ 17 ರನ್, ಅಕ್ಷರ್ ಪಟೇಲ್ 10 ರನ್ ಗಳಿಸಿದರು. ಮಧ್ಯಮ ಕ್ರಮಾಂಕದ ಬ್ಯಾಟರ್ ಶಿವಂ ದುಬೆ ಮಹತ್ವದ ಪಂದ್ಯದಲ್ಲೇ ಶೂನ್ಯಕ್ಕೆ ಔಟಾದರು. ತಾನೆದುರಿಸಿದ ಜೋರ್ಡಾನ್ ಅವರ ಮೊದಲ ಎಸೆತದಲ್ಲೇ ವಿಕೆಟ್ ಕೀಪರ್ ಬಟ್ಲರ್‌ಗೆ ಕ್ಯಾಚಿತ್ತು ಔಟಾಗುವ ಮೂಲಕ ಮತ್ತೊಮ್ಮೆ ಬ್ಯಾಟಿಂಗ್‌ನಲ್ಲಿ ವಿಫಲರಾದರು.

ಅಂತಿಮವಾಗಿ ಟೀಮ್ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 171 ರನ್ ದಾಖಲಿಸುವ ಮೂಲಕ ಸವಾಲಿನ ಗುರಿ ನೀಡಿದೆ. ಇಂಗ್ಲೆಂಡ್ ಪರವಾಗಿ ಕ್ರಿಸ್ ಜೋರ್ಡಾನ್ 3 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಜೋಫ್ರಾ ಆರ್ಚರ್, ಆದಿಲ್ ರಶೀದ್, ಸ್ಯಾಮ್ ಕರನ್ ಹಾಗೂ ರೀಸ್ ಟಾಪ್ಲಿ ತಲಾ ಒಂದೊಂದು ವಿಕೆಟ್ ಗಳಿಸುವಲ್ಲಿ ಸಫಲರಾದರು.

ಗೆದ್ದವರು ಫೈನಲ್‌ಗೆ

ಇಂದಿನ ಸೆಮಿಫೈನಲ್‌ನಲ್ಲಿ ಗೆದ್ದವರು ಜೂನ್ 29ರಂದು ಬಾರ್ಬಡೋಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ, ಈಗಾಗಲೇ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X