T20 ವಿಶ್ವಕಪ್ | ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’; 10 ವರ್ಷಗಳ ಬಳಿಕ ಫೈನಲ್‌ಗೆ ಟೀಮ್ ಇಂಡಿಯಾ

Date:

Advertisements

ವೆಸ್ಟ್‌ಇಂಡೀಸ್‌ನ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವಿನ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಟೀಮ್ ಇಂಡಿಯಾ ಭರ್ಜರಿ 68 ರನ್‌ಗಳ ಭರ್ಜರಿ ಜಯ ಗಳಿಸುವ ಮೂಲಕ 10 ವರ್ಷಗಳ ಬಳಿಕ ಫೈನಲ್‌ ತಲುಪಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಟೀಮ್ ಇಂಡಿಯಾ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 171 ರನ್ ದಾಖಲಿಸಿತ್ತು. 172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಜೋಸ್ ಬಟ್ಲರ್ ನೇತೃತ್ವದ ಆಂಗ್ಲರ ತಂಡವು, ಸ್ಪಿನ್ನರ್‌ಗಳ ಮೋಡಿಗೆ ಬಲಿಯಾಗಿ 16.4 ಓವರ್‌ಗಳಲ್ಲಿ 103 ರನ್ ಗಳಿಸುಷ್ಟರಲ್ಲಿ ಆಲೌಟ್ ಆಗಿದೆ. ಆ ಮೂಲಕ 68 ರನ್‌ಗಳಿಂದ ಸೋಲೊಪ್ಪಿಕೊಂಡಿದೆ.

ಈ ಗೆಲುವಿನೊಂದಿಗೆ ಟೀಮ್ ಇಂಡಿಯಾವು 2022ರ ಸೆಮಿಫೈನಲ್‌ನಲ್ಲಿ ಸೋತಿದ್ದಕ್ಕೆ ಸೇಡು ತೀರಿಸಿಕೊಂಡಂತಾಗಿದೆ.

Advertisements

2007ರಲ್ಲಿ ಆರಂಭವಾದ ಟಿ20 ವಿಶ್ವಕಪ್‌ ಇತಿಹಾಸದಲ್ಲಿ ಭಾರತ ಮೊದಲ ಬಾರಿ ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಆನಂತರದಲ್ಲಿ ಕಳೆದ 17 ವರ್ಷಗಳಲ್ಲಿ ಟೀಂ ಇಂಡಿಯಾ 2014ರಲ್ಲಿ ಫೈನಲ್‌ ಪ್ರವೇಶಿಸಿದರೂ ಶ್ರೀಲಂಕಾ ವಿರುದ್ಧ ಸೋಲು ಅನುಭವಿಸಿತ್ತು. ಈಗ ಇಂಗ್ಲೆಂಡ್ ಅನ್ನು ಸೋಲಿಸುವ ಮೂಲಕ ಭಾರತ 10 ವರ್ಷಗಳ ಬಳಿಕ ಫೈನಲ್‌ ತಲುಪಿದ್ದು, ಪ್ರಶಸ್ತಿ ಗೆಲ್ಲಲು ಒಂದು ಮೆಟ್ಟಿಲು ಮಾತ್ರ ಬಾಕಿಯಿದೆ.

ಸ್ಪಿನ್ನರ್ಸ್‌ಗಳ ಮೋಡಿಗೆ ಇಂಗ್ಲೆಂಡ್ ‘ಬಲಿ’

172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್‌ಗೆ ನಾಯಕ ಜೋಸ್ ಬಟ್ಲರ್ ಉತ್ತಮ ಆರಂಭವನ್ನೇ ಒದಗಿಸಿದ್ದರು. 3 ಓವರ್‌ಗಳಲ್ಲಿ ಫಿಲ್ ಸಾಲ್ಟ್‌ ಜೊತೆಗೆ 26 ರನ್ ಕಲೆ ಹಾಕಿದ್ದರು. ಈ ವೇಳೆ ದಾಳಿಗಿಳಿದ ಸ್ಪಿನ್ನರ್ ಅಕ್ಷರ್ ಪಟೇಲ್, ತಾನೆಸೆದ ಮೊದಲ ಓವರ್‌ನ ಮೊದಲ ಎಸೆತದಲ್ಲೇ ಜೋಸ್ ಬಟ್ಲರ್ ಅವರ ವಿಕೆಟ್ ಪಡೆಯುವಲ್ಲಿ ಸಫಲರಾದರು.

ಆ ಬಳಿಕ ದಾಳಿಗಿಳಿದ ಟೀಮ್ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಫಿಲ್ ಸಾಲ್ಟ್‌ ಅವರನ್ನು ಕ್ಲೀನ್ ಬೌಲ್ಡ್ ಆದರು. ತನ್ನ ಮೊದಲನೇ ಓವರ್‌ನ ಮೊದಲ ಬಾಲ್‌ನಲ್ಲಿ ವಿಕೆಟ್‌(ಜೋಸ್ ಬಟ್ಲರ್) ಗಳಿಸಿದಂತೆ ಅಕ್ಷರ್ ಪಟೇಲ್ ಎರಡನೇ ಓವರ್‌ನ ಮೊದಲನೇ ಎಸೆತ(ಜಾನಿ ಬೈರ್‌ಸ್ಟೋವ್) ಹಾಗೂ ಮೂರನೇ ಓವರ್‌ನ ಮೊದಲ ಎಸೆತದಲ್ಲಿ ವಿಕೆಟ್(ಮೊಯೀನ್ ಅಲಿ) ಪಡೆಯುವ ಮೂಲಕ ವಿಶಿಷ್ಟ ಸಾಧನೆಗೈದರು.

ಟೀಮ್ ಇಂಡಿಯಾ ಪರ ಉತ್ತಮ ಬೌಲಿಂಗ್ ದಾಳಿಗೈದ ಅಕ್ಷರ್ ಪಟೇಲ್ 23ಕ್ಕೆ 3 ವಿಕೆಟ್ ಗಳಿಸಿದರೆ, ಕುಲ್‌ದೀಪ್ ಯಾದವ್ 19ಕ್ಕೆ 3 ವಿಕೆಟ್ ಗಳಿಸಿ ಮಿಂಚಿದರು. ಉಳಿದಂತೆ ಬುಮ್ರಾ 2 ವಿಕೆಟ್ ಪಡೆಯುವಲ್ಲಿ ಸಫಲರಾದರು.

ಇಂಗ್ಲೆಂಡ್ ಪರ ಬ್ಯಾಟಿಂಗ್‌ನಲ್ಲಿ ಹ್ಯಾರಿ ಬ್ರೂಕ್ 25 ರನ್, ಜೋಸ್ ಬಟ್ಲರ್ 23 ಹಾಗೂ ಬೌಲರ್ ಜೋಫ್ರಾ ಆರ್ಚರ್ 21  ರನ್ ಗಳಿಸಲಷ್ಟೇ ಶಕ್ತರಾದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X