ದೆಹಲಿ ವಿಮಾನ ನಿಲ್ದಾಣದ ಛಾವಣಿ ಕುಸಿದು ಒಬ್ಬರು ಸಾವು, 5 ಮಂದಿಗೆ ಗಾಯ

Date:

Advertisements

ಭಾರಿ ಮಳೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಛಾವಣಿಯ ಒಂದು ಭಾಗ ಕುಸಿದು ಒಬ್ಬರು ಮೃತಪಟ್ಟು, 5 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ ಎಂದು ದೆಹಲಿ ಅಗ್ನಿ ಶಾಮಕ ಸೇವೆ ತಿಳಿಸಿದೆ.

ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ವ್ಯಕ್ತಿಯೊಬ್ಬರು ಕುಸಿತದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛಾವಣಿ ಕುಸಿತದಿಂದಾಗಿ ಟರ್ಮಿನಪ್ 1ರ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಾಗೆಯೇ ಸುರಕ್ಷತಾ ದೃಷ್ಟಿಯಿಂದ ಚಕ್ ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಇಂದು ಬೆಳಿಗ್ಗೆ 5.30ಕ್ಕೆ ಅಗ್ನಿ ಶಾಮಕ ತಂಡ ಛಾವಣಿ ಕುಸಿತದ ಬಗ್ಗೆ ಕರೆ ಸ್ವೀಕರಿಸಿದ್ದು, ತಕ್ಷಣ ಸ್ಥಳಕ್ಕೆ 4 ಅಗ್ನಿ ಶಾಮಕ ವಾಹನಗಳು ಆಗಮಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

“ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಛಾವಣಿ ಕುಸಿತವಾಗಿರುವ ಘಟನೆಯ ಬಗ್ಗೆ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಟರ್ಮಿನಲ್ 1ರಲ್ಲಿ ತೊಂದರೆಯಾದ ಪ್ರಯಾಣಿಕರೆಲ್ಲರಿಗೂ ವಿಮಾನ ನಿಲ್ದಾಣದ ಸಿಬ್ಬಂದಿ ಸಲಹೆ ನೀಡುತ್ತಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿವೆ” ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ನಿನ್ನೆ(ಜೂ.27) ಭಾರಿ ಮಳೆಯಾಗಿದ್ದು ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶಗಳು ಜಲಾವೃತವಾಗಿವೆ.

ದೆಹಲಿಯಲ್ಲಿ ಬೆಳಿಗ್ಗೆ 5.30 ರವರೆಗೆ ಸಫ್ದರ್‌ಜಂಗ್‌ನಲ್ಲಿ 153.7 ಮಿಮೀ ಮತ್ತು ಪಾಲಂ ವಿಮಾನ ನಿಲ್ದಾಣದಲ್ಲಿ 93 ಮಿಮೀ ಮಳೆಯಾಗಿದೆ.

ಒಂದು ದಿನದ ಹಿಂದಷ್ಟೆ ಮಧ್ಯಪ್ರದೇಶದ ಜಬಲ್‌ಪುರ ವಿಮಾನ ನಿಲ್ದಾಣದ ಕಾರ್‌ ಪಾರ್ಕಿಂಗ್‌ ಪ್ರದೇಶದಲ್ಲಿ ಛಾವಣಿಯಲ್ಲಿದ್ದ ಲೋಹದ ವಸ್ತು ಬಿದ್ದ ಪರಿಣಾಮ ಸರ್ಕಾರಿ ಅಧಿಕಾರಿಯ ಕಾರೊಂದು ಸಂಪೂರ್ಣವಾಗಿ ನುಜ್ಜುಗುಜ್ಜಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ.

ಜಬಲ್‌ಪುರ ವಿಮಾನ ನಿಲ್ದಾಣ

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X