ನೀಟ್ ಅಕ್ರಮ | ಕೇಂದ್ರ ಮಾನವ ಸಂಪನ್ಮೂಲ ಸಚಿವರ ರಾಜೀನಾಮೆಗೆ ಎಸ್‌ಐಓ ಆಗ್ರಹ

Date:

Advertisements

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಅಕ್ರಮಗಳ ಕುರಿತು ತನಿಖೆಗೆ ಕೇಂದ್ರ ಸರ್ಕಾರ ಸಮಿತಿ ರಚಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು. ಅಕ್ರಮದ ಹೊಣೆ ಹೊತ್ತು ಕೇಂದ್ರ ಮಾನವ ಸಂಪನ್ಮೂಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಸ್‌ಐಓಕಾರ್ಯಕರ್ತರು ತುಮಕೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಡಿದ ಎಸ್‌ಐಓ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹಮದ್ ಕೈಫ್, “ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಜೀವನದ ಜೊತೆ ಚಲ್ಲಾಟವಾಡುತ್ತಿದೆ. ಕಳೆದ ನಾಲ್ಕು ನೀಟ್ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಯಾಗಿರುವ ಅನುಮಾನಗಳಿದ್ದರೂ, ಕೇಂದ್ರ ಸರ್ಕಾರ ಅದನ್ನು ನಿರಾಕರಿಸಿತ್ತು. ಆದರೆ, ಈ ಬಾರಿಯ ನೀಟ್ ಪ್ರಶ್ನೆಪತ್ರಿಕೆ ಸೋರಿಯಾಗಿರುವುದನ್ನು ಸ್ವತಹಃ ಹೆಚ್.ಆರ್.ಡಿ ಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಪ್ರಕರಣದ ಸಂಬಂಧ ಬಿಜೆಪಿಯ ಹಲವಾರು ಮುಖಂಡರನ್ನು ಬಂಧಿಸಲಾಗಿದೆ. ಇದನ್ನು ನೋಡಿದರೆ ನೀಟ್ ಪರೀಕ್ಷೆಯ ಮೂಲಕ ಬಡವರ ಮಕ್ಕಳು ವೈದ್ಯರಾಗದಂತೆ ತಡೆಯುವ ಪ್ರಯತ್ನವನ್ನು ಬಿಜೆಪಿ ನಡೆಸುತ್ತಿರುವುದು ಸ್ಪಷ್ಟವಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ವೈದ್ಯನಾಗಬೇಕೆಂಬ ಕನಸಿನೊಂದಿಗೆ ಕಷ್ಟಪಟ್ಟು ಓದಿ,ಪರೀಕ್ಷೆ ಬರೆದ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಅತಂತ್ರ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚಲ್ಲಾಟವಾಡುತ್ತಿದೆ. ಹಾಗಾಗಿ ಪ್ರಕರಣವನ್ನು ಉನ್ನತ ಮಟ್ಟದ ಸಮಿತಿ ರಚಿಸಿ ತನಿಖೆಗೆ ಒಪ್ಪಿಸಬೇಕು. ಪ್ರಕರಣದ ಹೊಣೆ ಹೊತ್ತು ಕೇಂದ್ರದ ಶಿಕ್ಷಣ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಧಾನಮಂತ್ರಿಗಳು ವಿದ್ಯಾರ್ಥಿಗಳ ಸಮಸ್ಯೆ ಕುರಿತು ಮಾತನಾಡಬೇಕು. ಎಲ್ಲ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀಟ್ ಮರು ಪರೀಕ್ಷೆ ನಡೆಸಬೇಕು” ಎಂದು ಮಹಮದ್ ಕೈಫ್ ಆಗ್ರಹಿಸಿದ್ದಾರೆ.

Advertisements

ಸಾಮಾಜಿಕ ಹೋರಾಟಗಾರ ತಾಜುದ್ದೀನ್ ಷರೀಫ್ ಮಾತನಾಡಿ, “ಕೇಂದ್ರ ಸರ್ಕಾರ ನೇಮಿಸಿದ ಎನ್‌ಟಿಎ ಸಂಸ್ಥೆಯಿಂದ ನೀಟ್ ಬರೆದ ಆರ್ಹ ಅಭ್ಯರ್ಥಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕೆಲವರಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಬಿಜೆಪಿ ಶಾಸಕರು, ಸಂಸದರ ಅಧೀನದ ಶಿಕ್ಷಣ ಸಂಸ್ಥೆಗಳು ಮತ್ತು ನೀಟ್ ಕೋಚಿಂಗ್ ಸೆಂಟರ್‌ಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿ ಲಕ್ಷಾಂತರ ಮಕ್ಕಳ ವೈದ್ಯಕೀಯ ಕನಸಿಗೆ ಕೊಳ್ಳಿ ಇಡಲಾಗಿದೆ. ಇದು ನಿಜಕ್ಕೂ ಖಂಡನೀಯ. ಕೂಡಲೇ ಕೇಂದ್ರ ಹೆಚ್.ಆರ್.ಡಿ ಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಾನೂನು ವಿದ್ಯಾರ್ಥಿನಿ ದೀಪಿಕಾ ಮರಳೂರು ಮಾತನಾಡಿ, “ಕಷ್ಟಪಟ್ಟು ಪರೀಕ್ಷೆ ಬರೆದು ವೈದ್ಯರಾಗಿ ರೋಗಿಗಳ ಸೇವೆ ಮಾಡುವ ಬದಲು, ವಾಮಮಾರ್ಗದಿಂದ ಲಕ್ಷಾಂತರ ರೂ. ಖರ್ಚು ಮಾಡಿ ಪ್ರಶ್ನೆಪತ್ರಿಕೆ ಖರೀದಿಸಿ ವೈದ್ಯನಾಗುವ ವ್ಯಕ್ತಿಯಿಂದ ಯಾವ ರೀತಿಯ ಸೇವೆಯನ್ನು ನಿರೀಕ್ಷಿಸಲು ಸಾಧ್ಯ. ಈ ವಿಚಾರದಲ್ಲಿ ಸರ್ಕಾರಕ್ಕೆ ಮಾತನಾಡಲು ನೈತಿಕತೆಯೇ ಇಲ್ಲ. ಕೂಡಲೇ ಶಿಕ್ಷಣ ಮಂತ್ರಿಗಳು ರಾಜೀನಾಮೆ ನೀಡಬೇಕು. ಮರು ಪರೀಕ್ಷೆ ನಡೆಸುವ ಮೂಲಕ ನೊಂದು ಆತ್ಮಹತ್ಯೆಯ ಹಾದಿ ಹಿಡಿಯುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಬೇಕು” ಎಂದು ಅಗ್ರಹಿಸಿದರು.

ಪ್ರತಿಭಟನೆಯಲ್ಲಿ ಮದೀಹ, ಮಹಮದ್ ಖಲೀಲ್ ಖಾನ್, ಮಹಮದ್ ಜಲೀಲ್, ಅಸಾದುಲ್ಲಾಖಾನ್, ಹಮೀನ, ತಮನ್ನಾ, ಮಸಿಹಾ, ಇಲ್ಲಾಮ್ ಮತ್ತಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X