ಬೀದರ್‌ | ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದ ಮಾಲೀಕನಿಗೆ 25 ಸಾವಿರ ರೂ. ದಂಡ ವಿಧಿಸಿದ ಕೋರ್ಟ್

Date:

Advertisements

ಅಪ್ರಾಪ್ತ ವಯಸ್ಸಿನ ಬಾಲಕನ ಕೈಗೆ ಬೈಕ್ ಕೊಟ್ಟಿದ್ದ ತಪ್ಪಿಗೆ ವಾಹನದ ಮಾಲೀಕ 25 ಸಾವಿರ ರೂ. ದಂಡ ಪಾವತಿಸಿದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.

ಬಸವಕಲ್ಯಾಣ ಸಂಚಾರಿ ಪೊಲೀಸ್‌ ಠಾಣೆಯ ಪಿಎಸ್‌ಐ ಸುವರ್ಣ ಮಲಶೆಟ್ಟಿ ನೇತ್ರತ್ವದಲ್ಲಿ ನಗರದ ಐಡಿಯಲ್‌ ಶಾಲೆ ಹತ್ತಿರ ಇತ್ತೀಚೆಗೆ ವಾಹನ ತಪಾಸಣೆ ಮಾಡುವ ವೇಳೆ 17 ವರ್ಷದ ಅಪ್ರಾಪ್ತ ಬಾಲಕನೊಬ್ಬ ಚಾಲನಾ ಪರವಾನಗಿ ಇಲ್ಲದೆ ದ್ವಿಚಕ್ರ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು ಪತ್ತೆಯಾಗಿತ್ತು.

ಈ ಸಂಬಂಧ ದ್ವಿಚಕ್ರ ವಾಹನವನ್ನು ಠಾಣೆಗೆ ತೆಗೆದುಕೊಂಡು ಹೋಗಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಲಾವಣೆಗೆ ಅವಕಾಶ ನೀಡಿದ ವಾಹನದ ಮಾಲೀಕ ಸಾಹೇರಾ ಬೇಗಂ ಮೀರಜ್‌ ಖಾನ್ ಎನ್ನುವರ ವಿರುದ್ಧ ಮೋಟಾರ್‌ ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದರು.‌

Advertisements

ಈ ಸುದ್ದಿ ಓದಿದ್ದೀರಾ? ಜಿಯೋ ಬಳಕೆದಾರರಿಗೆ ರೀಚಾರ್ಜ್‌ ತುಟ್ಟಿ; ಹೊಸ ಬೆಲೆಗಳು ಹೀಗಿವೆ

ವಿಚಾರಣೆ ನಡೆಸಿದ ಬಸವಕಲ್ಯಾಣ ಪಿಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ‌ ಬಿ.ಚೆನ್ನಪ್ಪ ಅವರು ದ್ವಿಚಕ್ರ ಮಾಲೀಕರಾದ ಸಾಹೆರಾ ಬೇಗಂ ಅವರಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X