ಬೆಂಗಳೂರು | ಜುಲೈ 1ರಿಂದ ಬ್ಯಾರೀಸ್ ಸೆಂಟ್ರಲ್ ಕಮಿಟಿಯಿಂದ ಸದಸ್ಯತ್ವ ಅಭಿಯಾನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಕರ್ನಾಟಕದ ಬಹುಮುಖ್ಯ ಸಮುದಾಯವಾಗಿರುವ ಬ್ಯಾರಿ ಸಮುದಾಯದ ಜನರನ್ನು ಸಂಘಟಿಸುವ ಸಲುವಾಗಿ ಬ್ಯಾರೀಸ್ ಸೆಂಟ್ರಲ್ ಕಮಿಟಿ ಆರಂಭಿಸಲಾಗಿದ್ದು, ಜುಲೈ 1ರಿಂದ ಜುಲೈ 31ರವರೆಗೆ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಕಮಿಟಿಯ ಅಧ್ಯಕ್ಷ ಶಬೀರ್ ಬ್ರಿಗೇಡ್ ತಿಳಿಸಿದ್ದಾರೆ.

ಶುಕ್ರವಾರ ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಬೆಂಗಳೂರಿನಲ್ಲಿ ಸುಮಾರು ಒಂದು ಲಕ್ಷ ಬ್ಯಾರಿ ಸಮುದಾಯದ ಜನರಿದ್ದು, ಅವರನ್ನು ಒಂದೇ ವೇದಿಕೆಗೆ ತರುವ ಉದ್ದೇಶವನ್ನು ಬ್ಯಾರೀಸ್ ಸೆಂಟ್ರಲ್ ಕಮಿಟಿ ಹೊಂದಿದೆ” ಎಂದು ತಿಳಿಸಿದರು.

“ಉನ್ನತ ವ್ಯಾಸಂಗಕ್ಕೆ ಬೆಂಗಳೂರಿಗೆ ಬರುವ ಸಮುದಾಯದ ವಿದ್ಯಾರ್ಥಿಗಳಿಗೆ ನೆರವು ಒದಗಿಸುವುದು, ಉದ್ಯೋಗ, ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಬ್ಯಾರಿಗಳು ಅನ್ಯಾಯಕ್ಕೊಳಗಾಗುವ ಸಂದರ್ಭದಲ್ಲಿ ಕಾನೂನಾತ್ಮಕ ನೆರವು ಒದಗಿಸುವುದು, ಅಪಘಾತಕ್ಕೊಳಗಾದ ಸಂದರ್ಭದಲ್ಲಿ ನೆರವು ನೀಡುವುದು, ಸಮುದಾಯದ ಶೈಕ್ಷಣಿಕ, ಆರ್ಥಿಕ, ರಾಜಕೀಯ ಅಭಿವೃದ್ಧಿಗೆ ಶ್ರಮಿಸುವುದು ಸೇರಿದಂತೆ ಹಲವು ಹಲವು ಧ್ಯೇಯೋದ್ದೇಶಗಳನ್ನು ಸಮಿತಿ ಹೊಂದಿದೆ” ಎಂದು ಶಬೀರ್ ಬ್ರಿಗೇಡ್ ತಿಳಿಸಿದರು.

Advertisements

ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ನಾಸಿರ್ ಕೆಂಪಿ, ಸಲೀಮ್ ಸಿ.ಎಂ, ಸಂಶುದ್ದೀನ್ ಕುಕ್ಕಾಜೆ, ಇರ್ಷಾದ್ ಬಜಾಲ್, ಬಶೀರ್ ಅಡ್ಯನಡ್ಕ ಉಪಸ್ಥಿತರಿದ್ದರು.

BCF BANGALORE

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆಯಾ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗೆ ಸಮೀಕ್ಷೆ ಅಗತ್ಯ: ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕ

ಬೆಂಗಳೂರು ನಗರದ ಶಾಸಕರ ಭವನದಲ್ಲಿ ಸಾಲಿಡಾರಿಟಿ ಯೂಥ್ ಮೂವ್ಮೆಂಟ್ ಕರ್ನಾಟಕ ವತಿಯಿಂದ...

ದಲಿತರ ಹಣ ದುರುಪಯೋಗ ಆರೋಪ: ಸಚಿವ ಶರಣಬಸಪ್ಪರನ್ನು ಸಂಪುಟದಿಂದ ಕೈಬಿಡಲು ದಲಿತ ಸೇನೆ ಆಗ್ರಹ

ಹಲವು ಸರಕಾರಿ ಭೂಮಿಗಳನ್ನು ಒತ್ತುವರಿ ಮಾಡಿ, ದಲಿತರಿಗೆ ಮೀಸಲಿಟ್ಟ ಹಣವನ್ನು ಸಣ್ಣ...

ಬೆಂಗಳೂರು | ಪಿಂಚಣಿ ಪರಿಷ್ಕರಣೆಗೆ ಆಗ್ರಹಿಸಿ ನಿವೃತ್ತ ಉದ್ಯೋಗಿಗಳಿಂದ ಉಪವಾಸ ಸತ್ಯಾಗ್ರಹ

ಸರಕಾರಿ ಬ್ಯಾಂಕ್ ಪಿಂಚಣಿದಾರಿಗೆ ಮತ್ತು ನಿವೃತ್ತಿ ವೇತನದಾರರಿಗೆ ಪಿಂಚಣಿ ಪರಿಷ್ಕರಣೆ ಮಾಡಬೇಕು...

ದ್ವೇಷ, ಸುಳ್ಳಿನ ವಿರುದ್ಧ ಕಾನೂನು ತರುವುದಕ್ಕೂ ಮುನ್ನ ಸರ್ಕಾರ ಸಮಗ್ರವಾದ ಚರ್ಚೆ ನಡೆಸಲಿ: ಶಿವಸುಂದರ್

ಕರ್ನಾಟಕದಲ್ಲಿ ಹೆಚ್ಚಾಗುತ್ತಿರುವ ದ್ವೇಷ, ಸುಳ್ಳು ಸುದ್ದಿಗಳ ಪ್ರಚಾರದ ವಿರುದ್ಧ ಕಾನೂನು ತರಲು...

Download Eedina App Android / iOS

X