ಯೋಗ್ಯತೆ ಇಲ್ಲವೆಂದರೆ ಚುನಾವಣೆಗೆ ಹೋಗೋಣ; ರಾಜಣ್ಣ ವಿರುದ್ಧ ಡಿಕೆಸು ಕಿಡಿ

Date:

Advertisements

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲಾದ ಕಾಂಗ್ರೆಸ್‌, ಇದೀಗ ಒಳಜಗಳಕ್ಕಿಳಿದಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಪಕ್ಷದ ಸಚಿವರು ಹಾಗೂ ಮಠಗಳ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಬಣಗಳ ಹೆಸರಿನಲ್ಲಿ ನಡೆಯುತ್ತಿದ್ದ ಆಂತರಿಕ ಕಲಹ ಬಹಿರಂಗಗೊಂಡಿದ್ದು, ಕಾಂಗ್ರೆಸ್‌ ನಾಯಕರು ಒಬ್ಬರ ಮೇಲೊಬ್ಬರು ಕಿಡಿಕಾರುತ್ತಿದ್ದಾರೆ.

ಮೂರು ಉಪಮುಖ್ಯಮಂತ್ರಿಗಳ ಹುದ್ದೆಗೆ ಸಚಿವ ಕೆ.ಎನ್ ರಾಜಣ್ಣ, ಸತೀಶ್‌ ಜಾರಕಿಹೊಳಿ, ಪರಮೇಶ್ವರ ಬೇಡಿಕೆ ಇಡುತ್ತಿದ್ದರೆ, ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ ಶಿವಕುಮಾರ್‌ಗೆ ಬಿಟ್ಟುಕೊಡಿ ಎಂದು ಸಿದ್ದರಾಮಯ್ಯ ಎದುರು ಒಕ್ಕಲಿಗರ ಮಠದ ಚಂದ್ರಶೇಖರನಾಥ ಸ್ವಾಮೀಜಿ ಬೇಡಿಕೆ ಇಟ್ಟಿದ್ದರು. ಇದು ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ.

ಸ್ವಾಮೀಜಿ, ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರುತ್ತಿರುವ ಸಚಿವ ಕೆ.ಎನ್ ರಾಜಣ್ಣ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಡಿಕೆ ಶಿವಕುಮಾರ್ ತ್ಯಜಿಸಬೇಕು ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ತೀವ್ರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ ಸುರೇಶ್, “ಉತ್ತಮ ಆಡಳಿತ ನಡೆಸಬೇಕೆಂದು ಡಿಕೆ ಶಿವಕುಮಾರ್‌ಗೆ ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ ಯೋಗ್ಯತೆ ಇಲ್ಲವೆಂದು ಹೇಳುವುದಾದರೆ, ಚುನಾವಣೆಗೆ ಹೋಗುವುದು ವಾಸಿ. ನಾವೆಲ್ಲರೂ ಚುನಾವಣೆಗೆ ಹೋಗೋಣ” ಎಂದು ಆಕ್ರೋಶ ವ್ಯಕ್ತಪಡಿಸಿಸದ್ದಾರೆ.

Advertisements

“ಡಿಕೆ ಶಿವಕುಮಾರ್ ಅವರಿಗೆ ಜವಾಬ್ದಾರಿ ಕೊಟ್ಟಿರುವುದು ಪಕ್ಷದ ವರಿಷ್ಠರು. ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆಯೂ ಶಾಶ್ವತ ಅಲ್ಲ. ಹೇಳಿಕೆ ಕೊಡುತ್ತಿರುವವರು ಹಿಂದೆ ತಿರುಗಿ ಅವರ ಬೆನ್ನು ನೋಡಿಕೊಳ್ಳಬೇಕು” ಎಂದು ಕಿಡಿಕಾರಿದ್ದಾರೆ.

“ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆ ಸ್ಥಾನ‌ ಖಾಲಿಯಾದ ಮೇಲೆ ಆ ಹುದ್ದೆ ಚರ್ಚೆಗೆ ಬರುತ್ತದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X