ಶಿವಮೊಗ್ಗ | ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗ; ಗೆದ್ದು ಬೀಗಿದ ಕಾಂಗ್ರೆಸ್ ಅಭ್ಯರ್ಥಿಗಳು

Date:

Advertisements

ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದ್ದು, 13 ಸ್ಥಾನಗಳ ಪೈಕಿ ಕೇವಲ ಓರ್ವ ಅಭ್ಯರ್ಥಿ ಗೆಲುವು ಕಂಡಿದ್ದರೆ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಸಹಕಾರಿ ಧುರೀಣ ಆರ್ ಎಂ ಮಂಜುನಾಥ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಈ ಕುರಿತಂತೆ ಚುನಾವಣಾಧಿಕಾರಿ ಸತ್ಯನಾರಾಯಣ್ ಮಾಹಿತಿ ನೀಡಿದ್ದು, “ಬೇಳೂರು ಗೋಪಾಲಕೃಷ್ಣ, ಸಿ ಹನುಮಂತಪ್ಪ, ಎಸ್ ಪಿ ಚಂದ್ರಶೇಖರ್ ಗೌಡ, ಎಸ್ ಕೆ ಮರಿಯಪ್ಪ, ಜಿ ಎನ್ ಸುಧೀರ, ಕೆ ಪಿ ರುದ್ರಗೌಡ, ಟಿ ಶಿವಶಂಕರಪ್ಪ ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಸೇರಿದಂತೆ 13 ಮಂದಿ ಗೆಲುವು ಸಾಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಕ್ಷೇತ್ರವಾರು ಗೆದ್ದ ಅಭ್ಯರ್ಥಿಗಳು ಹಾಗೂ ಪಡೆದ ಮತಗಳ ವಿವರ

Advertisements

ಕ್ಷೇತ್ರ-1 ಶಿವಮೊಗ್ಗ ತಾಲೂಕು: ಕೆ ಪಿ ದುಗ್ಗಪ್ಪ ಗೌಡ 13 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಶಿವನಂಜಪ್ಪ 12 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಭದ್ರಾವತಿ ತಾಲೂಕು: ಸಿ ಹನುಮಂತಪ್ಪ 9 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಹೆಚ್ ಎಲ್ ಷಡಾಕ್ಷರಿ 7 ಮತಗಳೊಂದಿಗೆ ಸೋಲು ಕಂಡಿದ್ದಾರೆ.

ತೀರ್ಥಹಳ್ಳಿ ತಾಲೂಕು: ಬಸವಾನಿ ವಿಜಯದೇವ್ 14 ಮತಗಳಿಂದ ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಕೆ ಎಸ್ ಶಿವಕುಮಾರ್ 9 ಮತಗಳೊಂದಿಗೆ ಸೋಲು ಕಂಡಿದ್ದಾರೆ.

ಸಾಗರ ತಾಲೂಕು: ಶಾಸಕ ಬೇಳೂರು ಗೋಪಾಲಕೃಷ್ಣ ಅವರು 15 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ರತ್ನಾಕರ ಹೊನಗೋಡು 14 ಮತಗಳನ್ನು ಪಡೆದರೂ 1 ಮತದಿಂದ ಸೋಲನುಭವಿಸುವಂತಾಗಿದೆ.

ಸೊರಬ ತಾಲೂಕು: ಕೆ ಪಿ ರುದ್ರಗೌಡ ಅವರು 14 ಮತಗಳಿಂದ ಗೆಲುವು ಸಾಧಿಸಿದರೆ, ಶಿವಮೂರ್ತಿ ಗೌಡ 10 ಮತಗಳಿಂದ ಸೋತಿದ್ದಾರೆ. ಹೊಸನಗರ ತಾಲೂಕಿನಲ್ಲಿ ಎಂ ಎಂ ಪರಮೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕ್ಷೇತ್ರ-2 ಶಿವಮೊಗ್ಗ ಉಪವಿಭಾಗ: ಆರ್ ಎಂ ಮಂಜುನಾಥ ಗೌಡ ಅವರು 15 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ವಿರೂಪಾಕ್ಷಪ್ಪ 3 ಮತಗಳನ್ನು ಪಡೆದಿದ್ದಾರೆ.

ಸಾಗರ ಉಪವಿಭಾಗ: ಜಿ ಎನ್ ಸುಧೀರ್ 23 ಮತಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ್ದರೆ, ಬಿ ಡಿ ಭೂಕಾಂತ್ 21 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.

ಕ್ಷೇತ್ರ-3, ಶಿವಮೊಗ್ಗ ಉಪವಿಭಾಗ: ಎಸ್ ಕೆ ಮರಿಯಪ್ಪ 39 ಮತ ಪಡೆದು ಗೆಲುವು, ಎಸ್ ಪಿ ದಿನೇಶ್ 16 ಮತಗಳೊಂದಿಗೆ ಸೋತಿದ್ದಾರೆ.

ಶಿಕಾರಿಪುರ ತಾಲ್ಲೂಕು: ಬಿಜೆಪಿಯ ಅಭ್ಯರ್ಥಿ ಪಿಎಲ್ ಬಸವರಾಜ್ 32 ಮತಗಳಿಂದ ಗೆಲುವು ಸಾಧಿಸಿದ್ರೇ, ರವೀಂದ್ರ ಹೆಚ್ ಎಸ್ 21 ಮತಗಳೊಂದಿಗೆ ಸೋಲು ಕಂಡಿದ್ದಾರೆ.

ಕ್ಷೇತ್ರ-4ರ ಶಿವಮೊಗ್ಗ ಉಪ ವಿಭಾಗ: ಮಹಾಲಿಂಗಯ್ಯ ಶಾಸ್ತ್ರಿ 47 ಮತಗಳೊಂದಿಗೆ ಗೆಲುವು ಕಂಡಿದ್ದಾರೆ. ಈ ಕ್ಷೇತ್ರದಲ್ಲಿ ಕೆ.ಎಲ್ ಜಗದೀಶ್ವರ್ 45, ಡಿ.ಆನಂದ್ 16, ಜೆ.ಪಿ ಯೋಗೇಶ್ 14 ಮತಗಳನ್ನು ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಲಿಂಗತ್ವ ಅಲ್ಪಸಂಖ್ಯಾತರಿಗೆ ಗೌರವದ ಬದುಕು ಕೊಡಿ: ಬಿ ಮಂಜಮ್ಮ ಜೋಗತಿ

ಸಾಗರ ಉಪ ವಿಭಾಗ: ಟಿ ಶಿವಶಂಕರಪ್ಪ 75 ಮತಗಳೊಂದಿಗೆ ಗೆಲುವು ಕಂಡಿದ್ದರೇ, ಎಂ ಡಿ ಹರೀಶ್ 61 ಮತಗಳೊಂದಿಗೆ ಸೋಲು ಕಂಡಿದ್ದಾರೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯ ಮತದಾನದಲ್ಲಿ 621 ಮಂದಿ ಭಾಗಿಯಾಗಿ ತಮ್ಮ ಮತವನ್ನು ಚಲಾಯಿಸಿದ್ದರು. ಇವುಗಳಲ್ಲಿ 5 ಮತಗಳು ತಿರಸ್ಕೃತಗೊಂಡಿವೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X