ಶವರ್ಮಾದಲ್ಲಿ ಅಪಾಯಕಾರಿ ಬಾಕ್ಟೀರಿಯಾ ಪತ್ತೆ; ಬ್ಯಾನ್​ಗೆ ಚಿಂತನೆ ನಡೆಸಿದ ಎಫ್‌ಎಎಸ್‌ಎಸ್‌ಎಐ

Date:

Advertisements

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ (ಎಫ್‌ಎಎಸ್‌ಎಸ್‌ಎಐ) ನಡೆಸಿದ ಟೆಸ್ಟ್​ನಲ್ಲಿ ಗೋಬಿ ಮಂಚೂರಿ, ಕಬಾಬ್​​, ಪಾನಿಪುರಿಯಲ್ಲಿ ಕ್ಯಾನ್ಸರ್​ ಕಾರಕ ಅಂಶಗಳು ಪತ್ತೆಯಾಗಿದ್ದವು. ಇದೀಗ, ಈ ಪಟ್ಟಿಯಲ್ಲಿ ಶವರ್ಮಾ ಕೂಡ ಸೇರಿಕೊಂಡಿದ್ದು, ಆರೋಗ್ಯದ ದೃಷ್ಟಿಯಿಂದ ಶವರ್ಮಾ ನಿಷೇಧಿಸಲು ಎಫ್‌ಎಎಸ್‌ಎಸ್‌ಎಐ ಚಿಂತನೆ ನಡೆಸಿದೆ.

ರಾಜ್ಯದ ನಾನಾಕಡೆಯಿಂದ 17 ಮಾದರಿಯ ಶವರ್ಮಾವನ್ನು ಆಹಾರ ಮತ್ತು ಗುಣಮಟ್ಟ ಇಲಾಖೆಯು ಪರೀಕ್ಷೆ ನಡೆಸಿದೆ. ಈ ಪೈಕಿ 8 ಶವರ್ಮಾ ಮಾದರಿಯಲ್ಲಿ ಬ್ಯಾಕ್ಟೀರಿಯಾ ಈಸ್ಟ್‌ ಪತ್ತೆಯಾಗಿದೆ.

ಸರಿಯಾದ ಕ್ರಮದಲ್ಲಿ ಆಹಾರ ತಯಾರಿ ಮಾಡದ ಕಾರಣ ಬ್ಯಾಕ್ಟಿರೀಯಾಗಳು ಪತ್ತೆಯಾಗಿವೆ. ಈಗಾಗಲೇ ಅಸುರಕ್ಷಿತ ಶವರ್ಮಾ ನೀಡಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Advertisements

ಶವರ್ಮಾ ಮಾರಾಟಗಾರರು ಕಡ್ಡಾಯವಾಗಿ ಎಫ್‌ಎಸ್‌ಎಸ್‌ಎಐ ನೋಂದಣಿ ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ, ಮಾರಾಟಗಾರರು ನೋಂದಣಿ ಮಾಡಿಸದಿದ್ದರೇ, ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ.

ಜತೆಗೆ, ಶವರ್ಮಾ ತಯಾರಿ ಮಾಡುವಾಗ ಮಾರಾಟಗಾರರು ಮುಖ್ಯವಾಗಿ ಶುಚಿತ್ವ ಕಾಪಾಡಿಕೊಳ್ಳಬೇಕು ಎಂದು ಹೇಳಿದೆ. ಶುಚಿತ್ವ ನಿರ್ವಹಣೆ, ನೋಂದಣಿ ಮಾಡಿಸದಿದ್ದರೂ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಗೋಬಿ, ಕಬಾಬ್ ಮತ್ತು ಪಾನಿಪುರಿಯಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಪತ್ತೆಯಾಗಿದೆ. ಕಬಾಬ್ ತಯಾರಿ ಮಾಡಲು ಬಳಕೆ ಮಾಡುವ ಕೃತಕ ಬಣ್ಣದಲ್ಲಿ ಅಪಾಯಕಾರಿ ಅಂಶ ಪತ್ತೆಯಾಗಿದೆ. ಹೀಗಾಗಿ, ಬಣ್ಣ ಬಳಕೆ ಮಾಡಬಾರದು ಎಂದು ಕರ್ನಾಟಕ ಆರೋಗ್ಯ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಅಪಹರಣ​ ಪ್ರಕರಣ; ಕನ್ನಡಪರ ಸಂಘಟನೆ ಅಧ್ಯಕ್ಷ ಸೇರಿ 6 ಜನರ ವಿರುದ್ಧ ಎಫ್​ಐಆರ್

ಅಲ್ಲದೆ, ಗೋಬಿ ಮಂಚೂರಿ, ಕಾಟನ್‌ ಕ್ಯಾಂಡಿಗೂ ಬಣ್ಣ ಬಳಸದಂತೆ ಸೂಚಿಸಿದೆ. ನಂತರ ಈಗ ಶವರ್ಮಾದಲ್ಲೂ ಆರೋಗ್ಯಕ್ಕೆ ಹಾನಿಯುಂಟುಮಾಡುವ ಅಂಶ ಇರುವುದು ಬಹಿರಂಗವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X