ಬಾಗಲಕೋಟೆ | ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ; ಉಸ್ತುವಾರಿ ಸಚಿವರೊಂದಿಗೆ ಹಕ್ಕೊತ್ತಾಯ ಸಭೆ

Date:

Advertisements

ಕಳೆದ ವರ್ಷ ಕಾರ್ಖಾನೆ ಬಂದ್ ಆಗಿರುವುದು ಎಲ್ಲರಿಗೂ ಬೇಜಾರಿನ ಸಂಗತಿ. ಕಾರ್ಮಿಕರು ಕಳೆದ ಒಂದು ವರ್ಷದಿಂದ ವೇತನವಿಲ್ಲದೆ ದುಡಿಯುತ್ತಿದ್ದಾರೆ. ಕಾರ್ಖಾನೆಯ ಲೀಜ಼್ ಪ್ರಕ್ರಿಯೆ ವಿಳಂಬಕ್ಕೆ ಕಾರಣಗಳೇನು? ಕಾರ್ಖಾನೆಯನ್ನು ಈ ವರ್ಷ ಹೇಗೆ ಪ್ರಾರಂಭ ಮಾಡುತ್ತಿರಿ ಎಂಬ ವಿಷಯದ ಬಗ್ಗೆ ನಮಗೆ ಗೊಂದಲವಿದೆ ಎಂದ ರೈತ ಮುಖಂಡ ಮುತ್ತಪ್ಪ ಕೋಮಾರ ಸಚಿವರ ಗಮನ ಸೆಳೆದರು.

ಬಾಗಲಕೋಟೆ ಜಿಲ್ಲೆಯ ಮುಧೋಳ್‌ ತಹಶೀಲ್ದಾರ್ ಕಚೇರಿ ಎದುರು ಹಮ್ಮಿಕೊಂಡಿದ್ದ ರನ್ನ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನರಾರಂಭದ ಕುರಿತು ಹಕ್ಕೊತ್ತಾಯ ಸಭೆ ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರೊಟ್ಟಿಗೆ ನಡೆದ ರೈತ ಮತ್ತು ಕಾರ್ಮಿಕರ ಮುಖಂಡರ ಸಭೆಯಲ್ಲಿ ಮಾತನಾಡಿದರು.

ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ

ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಮಾತನಾಡಿ, “ನಾನು ಕಾರ್ಖಾನೆ ಪ್ರಾರಂಭಕ್ಕೆ ಸಾಕಷ್ಟು ಪ್ರಯತ್ನ ಮಾಡಿದ್ದೇನೆ. ಹಲವಾರು ಕಾನೂನು ಅಡೆ-ತಡೆಗಳನ್ನು ಬಗೆಹರಿಸಿದ್ದೇನೆ. ಜುಲೈ 4ರಂದು ಸಚಿವ ಸಂಪುಟ ಸಭೆ ಇದೆ. ಈ ಸಚಿವ ಸಂಪುಟ ಸಭೆಯಲ್ಲಿ ಕಾರ್ಖಾನೆಯನ್ನು ಲೀಸ್ ಕೊಡುವುದು ಹಾಗೂ ಕಾರ್ಖಾನೆಯ ಪ್ರಾರಂಭಕ್ಕೆ 40 ಕೋಟಿ ರೂಪಾಯಿ ಬ್ಯಾಂಕ್ ಗ್ಯಾರಂಟಿ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಈ ಸಚಿವ ಸಂಪುಟ ಸಭೆ ನಂತರ ಕಾರ್ಖಾನೆಯ ಪ್ರಾರಂಭದ ಬಗ್ಗೆ ಮತ್ತೆ ಎಲ್ಲ ಮುಖಂಡರು ಸಭೆ ಮಾಡಲಾಗುವುದು” ಎಂದು ಸಭೆಯಲ್ಲಿ ತಿಳಿಸಿದರು.

Advertisements

ಈ ಸಭೆಯಲ್ಲಿ ರೈತ ಮತ್ತು ಕಾರ್ಮಿಕರ ಮುಖಂಡರ ಜೊತೆಗೆ ಭಾಗವಹಿಸಿದ ಬಿಜೆಪಿ ಮತ್ತು ಕಾಂಗ್ರೆಸ್ ಮುಖಂಡರೂ ಕೂಡ ಕಾರ್ಖಾನೆಯ ಪ್ರಾರಂಭದ ಬಗ್ಗೆ ಸಚಿವರು ಗಟ್ಟಿ ನಿರ್ಧಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಬಳಿಕ ಎಲ್ಲ ಮುಖಂಡರಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ʼಸಚಿವ ಸಂಪುಟ ಸಭೆಯ ನಂತರ ಎಲ್ಲರೂ ಸಭೆ ಸೇರೋಣʼ ಎಂದು ಹೇಳುವ ಮೂಲಕ ಸಭೆಯು ಮುಕ್ತಾಯವಾಯಿತು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಸರ್ಕಾರಿ ಕಾನೂನು ಮಹಾವಿದ್ಯಾಲಯ ನಿರ್ಮಿಸಿ, ಪ್ರಸಕ್ತ ವರ್ಷದಿಂದಲೇ ಪ್ರಾರಂಭಿಸಿ: ಎಸ್ಎಫ್ಐ ಆಗ್ರಹ

ಈ ಸಂದರ್ಭದಲ್ಲಿ ಮುತ್ತಪ್ಪ ಕೋಮಾರ, ಶುಭಾಷ ಶಿರುಬುರ, ಯುವ ವಕೀಲ ಡಾ. ಯಲ್ಲಪ್ಪ ಹೆಗಡೆ, ಈರಪ್ಪ ಹಂಚಿನಾಳ, ರಾಜು ಯಡಹಳ್ಳಿ, ಪ್ರಕಾಶ ಚಿತ್ತರಗಿ, ಗೋವಿಂದಪ್ಪ ಮೆಟಗುಡ್ಡ, ಬಸಪ್ಪ ಸಂಗನ್ನವರು ಸೇರಿದಂತೆ ಇತರರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X