ಮುಖ್ಯಮಂತ್ರಿ ಬದಲಾವಣೆಯಾದ್ರೆ ರಾಜ್ಯಾದ್ಯಂತ ಹೋರಾಟ; ಅಹಿಂದ ಎಚ್ಚರಿಕೆ

Date:

Advertisements

ಡಿ.ಕೆ ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂಬ ಬಗ್ಗೆ ಒಕ್ಕಲಿಗ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಉಪಮುಖ್ಯಮಂತ್ರಿ ಸ್ಥಾನಗಳ ಬಗ್ಗೆ ಸಚಿವ, ಶಾಸಕರ ಮಾತುಗಳು, ಮುಖ್ಯಮಂತ್ರಿ ಹುದ್ದೆಯ ಕುರಿತ ಸ್ವಾಮೀಜಿಗಳ ಹೇಳಿಕೆಗಳು ರಾಜಕೀಯದಲ್ಲಿ ತಲ್ಲಣ ಸೃಷ್ಠಿಸಿವೆ. ಇದೀಗ, ಮುಖ್ಯಮಂತ್ರಿ ಬದಲಾವಣೆ ಮಾಡಿದರೆ, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಿದರೆ ರಾಜ್ಯಾದ್ಯಂತ ಬೃಹತ್ ಹೋರಾಟಗಳನ್ನು ನಡೆಸುತ್ತೇವೆಂದು ಅಹಿಂದ ರಾಜ್ಯಾಧ್ಯಕ್ಷ ಪ್ರಭುಲಿಂಗ ದೊಡ್ಡಣಿ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಜನ್ಮ ದಿನಾಚರಣೆ ಆಚರಿಸುವ ಸಂಬಂಧ ಹುಬ್ಬಳ್ಳಿಯಲ್ಲಿ ಅಹಿಂದ ಮುಖಂಡರು ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೊಡ್ಡಣಿ, “5 ವರ್ಷ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿರಬೇಕು. ಸಿದ್ದರಾಮಯ್ಯ ಅವರಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ, ಬೃಹತ್ ಹೋರಾಟಗಳನ್ನು ನಡೆಸುತ್ತೇವೆ” ಎಂದಿದ್ದಾರೆ.

“ಕೆಲವು ಸ್ವಾಮೀಜಿಗಳು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದಾರೆ. ಸ್ವಾಮೀಜಿಗಳು ರಾಜಕೀಯ ಹೇಳಿಕೆ ನೀಡುವುದು ಧಾರ್ಮಿಕ ವಿಚಾರಗಳಿಗೆ ಧಕ್ಕೆ ತರುತ್ತವೆ. ಚಂದ್ರಶೇಖರ ಸ್ವಾಮೀಜಿ ಅವರದ್ದು ವೈಯಕ್ತಿಕ ಅಭಿಪ್ರಾಯ. ಅವರ ಅಭಿಪ್ರಾಯಕ್ಕೆ ಕಾಂಗ್ರೆಸ್‌ ಮಣೆಹಾಕಬಾರದು” ಎಂದಿದ್ದಾರೆ.

Advertisements

“ಮುಖ್ಯಮಂತ್ರಿ ಬದಲಾವಣೆ ಆದ್ರೆ, ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುತ್ತದೆ. ಅಹಿಂದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಪ್ರತಿ ಜಿಲ್ಲೆಯಲ್ಲೂ ಅಹಿಂದ ಸಂಘಟನೆ ಮಾಡಿದ್ದೇವೆ. ರಾಜ್ಯದ ಜನರು ಸಿದ್ದರಾಮಯ್ಯ ಅವರ ಬೆನ್ನಿಗೆ ನಿಂತಿದ್ದಾರೆ. ಅವರ ಕಾರಣಕ್ಕಾಗಿಯೇ ಕಾಂಗ್ರೆಸ್​​ಗೆ ಮತ ಹಾಕಿದ್ದಾರೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X