ಪಶ್ಚಿಮ ಬಂಗಾಳ: ಹಾಡಹಗಲೇ ಮಹಿಳೆ ಮೇಲೆ ಗುಂಪಿನಿಂದ ಅಮಾನುಷ ಹಲ್ಲೆ

Date:

Advertisements

ಪಶ್ಚಿಮ ಬಂಗಾಳ ದ ಧಿನಾಜ್‌ಪುರ್‌ ಜಿಲ್ಲೆಯ ಚೋಪ್ರಾ ಪ್ರದೇಶದಲ್ಲಿ ಹಾಡಹಗಲಿನಲ್ಲಿಯೇ ಮಹಿಳೆಯೊಬ್ಬರ ಮೇಲೆ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಯಾವುದೋ ತಪ್ಪು ಮಾಡಿರುವ ಉದ್ದೇಶದಿಂದ ಒರ್ವ ಮಹಿಳೆ ಹಾಗೂ ಪುರುಷರೊಬ್ಬರ ಮೇಲೆ ಗುಂಪು ಹಲ್ಲೆ ನಡೆಸಿದೆ. ವಿಡಿಯೋದಲ್ಲಿರುವಂತೆ ಹಲವರು ಯುವಕರು ಮಹಿಳೆ ಹಾಗೂ ಪುರುಷನೊಬ್ಬನ ಮೇಲೆ ಮನಬಂದಂತೆ ಹಲ್ಲೆ ನಡೆಸುತ್ತಿದ್ದಾರೆ.

ಘಟನೆಗೆ ವಿಪಕ್ಷಗಳಾದ ಸಿಪಿಎಂ ಹಾಗೂ ಬಿಜೆಪಿ, ಆಡಳಿತ ಪಕ್ಷ ಟಿಎಂಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.  ಟಿಎಂಸಿ ಗೂಂಡಾಗಳು ಕಾಂಗರೊ ಕೋರ್ಟ್ ಮಾದರಿ ತಾವೆ ವಿಚಾರಣೆ ನಡೆಸಿ ಶಿಕ್ಷೆ ನೀಡುತ್ತಿರುವುದು ತೃಣಮೂಲ ಕಾಂಗ್ರೆಸ್ ಪಕ್ಷದ ಆಡಳಿತದ ಮಾದರಿಗೆ ಸಾಕ್ಷಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಎಂದು ಕಿಡಿಕಾರಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 10 ಆರೋಪಿಗಳ ಪೈಕಿ ಏಳು ಮಂದಿಯನ್ನು ಬಂಧಿಸಿದ್ದು, ಉಳಿದ ಮೂವರ ಬಂಧನಕ್ಕೆ ಶೋಧ ನಡೆಯುತ್ತಿದ್ದಾರೆ. ಇಂದು ಪೊಲೀಸರು ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಈ ನಡುವೆ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಡೆಲಿನಾ ಖೊಂಡುಪ್ ಕೂಡ ಸಂತ್ರಸ್ತೆ ಹಾಗೂ ತನಿಖೆಯ ವಿವರಗಳನ್ನು ತಿಳಿಯಲು ಅವರು ಜಿಲ್ಲಾ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು.

ಪ್ರಕರಣದಲ್ಲಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಕಾನೂನುಗಳನ್ನು ಅನ್ವಯಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ .

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X