ಮುಂಬೈ: ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 5 ಮಂದಿ

Date:

Advertisements

ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೆ ಒಂದೇ ಕುಟುಂಬದ ಐವರು ಉಕ್ಕಿ ಹರಿಯುವ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮುಂಬೈ ನ ಲೋನಾವಾಲ ಪ್ರದೇಶದಲ್ಲಿ ನಡೆದಿದೆ.

ಕುಟುಂಬವೊಂದು ರಜೆ ಸಮಯವನ್ನು ಕಳೆಯಲು ಮುಂಬೈನಿಂದ 80 ಕಿ.ಮೀ ದೂರದಲ್ಲಿರುವ ಬುಶಿ ಜಲಾಶಯಕ್ಕೆ ಆಗಮಿಸಿತ್ತು. ಅತೀ ಹೆಚ್ಚು ಮಳೆಯಾಗುತ್ತಿದ್ದ ಕಾರಣ ಜಲಾಶಯದ ಬಳಿಯಲ್ಲಿನ ಜಲಪಾತ ಉಕ್ಕಿ ಹರಿಯುತ್ತಿತ್ತು.

ಸಾಧಾರಣ ಹರಿವಿದ್ದ ಕಾರಣ ಜಲಪಾತದ ಮಧ್ಯೆ ಕುಟುಂಬದ 7 ಮಂದಿ ನಿಂತಿದ್ದರು. ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದ ಕಾರಣ ಕುಟುಂಬದ 7 ಮಂದಿ ಒಬ್ಬರಿಗೊಬ್ಬರು ಹಿಡಿದುಕೊಂಡು ಗಟ್ಟಿಯಾಗಿ ನಿಂತಿದ್ದರು. ಆದರೂ ನೀರಿನ ರಭಸಕ್ಕೆ ನೂರಾರು ಜನರ ಕಣ್ಣೆದುರೆ ಏಳು ಮಂದಿ ಕೊಚ್ಚಿ ಹೋದರು. ಇವರಲ್ಲಿ ಇಬ್ಬರು ಈಜಿ ಸುರಕ್ಷಿತ ಸ್ಥಳ ತಲುಪಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಮೂವರು ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಉಳಿದ ಇಬ್ಬರ ಮೃತದೇಹಗಳಿಗೆ ಶೋಧ ನಡೆಸಲಾಗುತ್ತಿದೆ. ಘಟನೆಯು ಭಾನುವಾರ(ಜೂನ್‌ 30) ಮಧ್ಯಾಹ್ನ ನಡೆದಿದೆ.

ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಆಗಮಿಸಿದ್ದು, ಕೊಚ್ಚಿಕೊಂಡು ಹೋಗಿರುವವರ ಪತ್ತೆಗಾಗಿ ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ.

ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದರೂ ಪ್ರವಾಹದಲ್ಲಿ ಸಿಲುಕಿದ್ದವರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.

ಮೃತರನ್ನು ಪುಣೆ ಮೂಲದ ಶಾಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13) ಮತ್ತು ಉಮೇರಾ ಅನ್ಸಾರಿ (8) ಎನ್ನಲಾಗಿದ್ದು. ಅದ್ನಾನ್ ಅನ್ಸಾರಿ (4) ಮತ್ತು ಮರಿಯಾ ಸೈಯದ್ (9) ಅವರ ಮೃತದೇಹಗಳು ಇನ್ನೂ ದೊರಕಿಲ್ಲ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X