ಹಾವೇರಿ | ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅಪಘಾತ; ಪರಿಹಾರಕ್ಕೆ ಎಸ್‌ಎಫ್‌ಐ ಆಗ್ರಹ

Date:

Advertisements

ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ ನಿರ್ಲಕ್ಷ್ಯದಿಂದ ಅಪಘಾತಕ್ಕೆಗೊಳಗಾದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ರೂ. ಪರಿಹಾರ ನೀಡಬೇಕು. ಅಪಘಾತಕ್ಕೆ ಕಾರಣರಾದ ಕೆಎಸ್‌ಆರ್‌ಟಿಸಿ ಸಿಬ್ಬಂದಿಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಎಸ್‌ಎಫ್‌ಐ ಆಗ್ರಹಿಸಿದೆ.

ಹಾವೇರಿಯಲ್ಲಿ ಪ್ರತಿಭಟನೆ ನಡೆಸಿದ ಎಸ್‌ಎಫ್‌ಐ ಕಾರ್ಯಕರ್ತರು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ಸೋಮವಾರ, ಹಾವೇರಿ ಜಿಲ್ಲೆಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಕಾಲೇಜಿಗೆ ಹೋಗಲು ಬಸ್‌ ಹತ್ತುವಾಗ, ಹತ್ತುವ ಮುನ್ನವೇ ಬಸ್‌ ಮುಂದೆ ಚಲಿಸಿದ್ದು, ವಿದ್ಯಾರ್ಥಿಗಳು ಬಿದ್ದು ಗಾಯಗೊಂಡಿದ್ದಾರೆ. ಅಲ್ಲದೆ, ಮುಂದೆ ನಿಂತಿದ್ದ ಆಟೋಗೆ ಬಸ್‌ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳಾದ ರೇವಣಸಿದ್ದೇಶ್ ವಿ, ಆರ್ ಕಿರಣ, ಮೋಹನ್ ಎಚ್, ಪ್ರವೀಣ್ ರಾಠೋಡ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಎಸ್ಆರ್‌ಟಿಸಿ ಡ್ರೈವರ್‌ ಹಾಗೂ ಕಂಡಕ್ಟರ್ ನಿರ್ಲಕ್ಷ್ಯತನದಿಂದಾಗಿ ಘಟನೆ ಸಂಭವಿಸಿದೆ” ಎಂದು ಆರೋಪಿಸಿದ್ದಾರೆ.

Advertisements

“ಘಟನೆಯಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳು ಉಚಿತ ಚಿಕಿತ್ಸೆ ನೀಡಬೇಕು. ಅವರಿಗೆ 1 ಲಕ್ಷ ರೂ. ಪರಿಹಾರ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

“ವಿದ್ಯಾರ್ಥಿಗಳಿಗೆ ಹಿಂದಿನಿಂದಲೂ ಬಸ್‌ ವ್ಯವಸ್ಥೆಯ ಸಮಸ್ಯೆ ಇದೆ. ಈ ಹಿಂದೆ, ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅರ್ಧ ಗಂಟೆಗೊಮ್ಮೆ ಬಸ್‌ ಸಂಚಾರ ಒದಗಿಸಲಾಗಿತ್ತು. ಆದರೆ, ಕಳೆದ ಮೂರು ತಿಂಗಳಿಂದ ಬಸ್‌ ಸಂಚಾರ ನಿಲ್ಲಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಸಮರ್ಪಕವಾಗಿ ಬಸ್‌ ವ್ಯವಸ್ಥೆ ಕಲ್ಪಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಎಸ್ಎಫ್ಐ ಮುಖಂಡ ಅಮರೇಶ್ ಕಡಗದ ಮಾತನಾಡಿ, “ಸರ್ಕಾರ ಹಾಗೂ ಜಿಲ್ಲಾಡಳಿತ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕ ಸೇವೆಗೆ ಸಮರ್ಪಕವಾಗಿ ಬಸ್ಸುಗಳನ್ನು ಬಿಡಬೇಕು ಹಾಗೂ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಬಸ್ಸಿನ ಸೌಲಭ್ಯ ಒದಗಿಸಬೇಕು. ಅನ್ಯಾಯಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು ರಾಜ್ಯ ಈ ವಿಚಾರದಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್ ಮಾತನಾಡಿ, “ಸರ್ಕಾರಿ ಇಂಜಿನಿಯರಿಂಗ್ ಮಹಾವಿದ್ಯಾಲಯಕ್ಕೆ ಪ್ರತಿ ನಿತ್ಯವು ಕನಿಷ್ಠ 20 ಬಸ್ಸುಗಳನ್ನು ಬಿಡಬೇಕು. ಸಾರಿಗೆ ಸಂಸ್ಥೆ ಸಿಬ್ಬಂದಿಗಳಿಗೆ ಶಿಸ್ತು ಕ್ರಮ ಜರುಗಿಸಬೇಕು. ಗಾಯಗಳು ವಿದ್ಯಾರ್ಥಿಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಜೊತೆಗೆ 1 ಲಕ್ಷ ಪರಿಹಾರ ಕೊಡಬೇಕು. ಜಿಲ್ಲಾಧಿಕಾರಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಸಭೆ ಕರೆದು ಇಡೀ ಜಿಲ್ಲೆಯ ಬಸ್ಸಿನ ಸಮಸ್ಯೆಗಳನ್ನು ಪರಿಹಾರಿಸಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್ಎಫ್ಐ ಮುಖಂಡರಾದ ಮಹೇಶ್ ಮರೋಳ, ಕಿರಣ ಬಿ, ಅಭಿಷೇಕ ಹಲಗೇರಿ, ನವೀನ್ , ಪ್ರಥಮೇಶ್, ಕುಮುದಾ ಯಶೋದಾ, ಅಕ್ಷತಾ ಕೆ ಆರ್, ಕೀರ್ತನಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X