ಹತ್ರಾಸ್ ಕಾಲ್ತುಳಿತ ದುರಂತ | ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವು!

Date:

Advertisements

ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಸದ್ಯ 121ಕ್ಕೆ ಏರಿಕೆಯಾಗಿದೆ. ಈ ನಡುವೆ ಮೃತ ದೇಹಗಳನ್ನು ನೋಡಿ ಹೃದಯಾಘಾತದಿಂದ ಪೊಲೀಸ್ ಕಾನ್‌ಸ್ಟೆಬಲ್ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾದ ಕಾನ್‌ಸ್ಟೆಬಲ್ ರವಿ ಹತ್ರಾಸ್ ಸತ್ಸಂಗದಲ್ಲಿ ಕಾಲ್ತುಳಿತದಿಂದ ಸಾವನ್ನಪ್ಪಿದ ಜನರ ಮೃತದೇಹಗಳನ್ನು ನೋಡಿದ ಬಳಿಕ ಹೃದಯಾಘಾತಕ್ಕೆ ಒಳಗಾಗಿದ್ದು ಇಟಾಹ್ ವೈದ್ಯಕೀಯ ಕಾಲೇಜಿನಲ್ಲಿ ನಿಧನರಾದರು ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ರವಿ ಒಂದು ತಿಂಗಳಿನಿಂದ ತನ್ನ ಸಹೋದ್ಯೋಗಿ ಶೇಖರ್ ಪ್ರೇಮಿಯೊಂದಿಗೆ ಕ್ಯೂಆರ್‌ಟಿ ಕರ್ತವ್ಯದ ಮೇರೆಗೆ ಇಟಾಹ್ ನಗರದಲ್ಲಿ ನೆಲೆಸಿದ್ದರು. ಹತ್ರಾಸ್ ಘಟನೆಯ ಬಳಿಕ ತ್ವರಿತವಾಗಿ ಇಟಾಹ್ ವೈದ್ಯಕೀಯ ಕಾಲೇಜಿಗೆ ಹೋಗುವಂತೆ ರವಿ ಅವರಿಗೆ ಸೂಚಿಸಲಾಗಿತ್ತು.

Advertisements

ಇದನ್ನು ಓದಿದ್ದೀರಾ?  ಹತ್ರಾಸ್ ಕಾಲ್ತುಳಿತ ದುರಂತ| ಮೃತರ ಸಂಖ್ಯೆ 121ಕ್ಕೆ ಏರಿಕೆ, ಸತ್ಸಂಗ ನಡೆಸಿದ ಭೋಲೆ ಬಾಬಾ ನಾಪತ್ತೆ

ಇಟಾಹ್ ವೈದ್ಯಕೀಯ ಕಾಲೇಜಿಗೆ ಬಂದ ರವಿ ಅವರು ಮೃತ ದೇಹಗಳನ್ನು ನೋಡಿ ತಲೆ ತಿರುಗಿ ಬಿದ್ದಿದ್ದಾರೆ. ಅವರನ್ನು ಬಿಸಿಲಿನ ಧಗೆಗೆ ತಲೆ ತಿರುಗಿರಬಹುದು ಎಂದು ಹವಾನಿಯಂತ್ರಿತ ಕೊಠಡಿಗೆ ಕರೆದೊಯ್ಯುತ್ತಿದ್ದಂತೆ ರವಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಮೃತ ಮತ್ತು ಪ್ರಜ್ಞಾಹೀನರಾದ ಸಂತ್ರಸ್ತರನ್ನು ಟ್ರಕ್‌ಗಳು ಮತ್ತು ಟೆಂಪೋಗಳಲ್ಲಿ ಸಿಕಂದರಾವ್ ಟ್ರಾಮಾ ಸೆಂಟರ್‌ಗೆ ಕರೆತರಲಾಗಿತ್ತು. ಆರೋಗ್ಯ ಕೇಂದ್ರದ ಹೊರಗೆ ಜನರು ಜಮಾಯಿಸಿದ್ದ ಕಾರಣ ಮೃತದೇಹಗಳನ್ನು ಎಲ್ಲೆಂದರಲ್ಲಿ ಇರಿಸಲಾಗಿದೆ. ಮಂಜಿನ ಗೆಡ್ಡೆಯ ಮೇಲೆ ಮಲಗಿಸಲಾಗಿದೆ.

ಇನ್ನು ಹತ್ರಾಸ್ ಕಾಲ್ತುಳಿತ ಪ್ರಕರಣದಲ್ಲಿ ಈವರೆಗೆ 121ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ ಅಧಿಕ ಮಂದಿ ಮಹಿಳೆಯರಾಗಿದ್ದು ಮಕ್ಕಳು ಕೂಡ ಸಾವನ್ನಪ್ಪಿದ್ದಾರೆ. ಭೋಲೆ ಬಾಬಾ ಎಂದು ಕರೆಯಲ್ಪಡುವ ಬೋಧಕನ ನೇತೃತ್ವದಲ್ಲಿ ನಡೆಸಿದ ಸತ್ಸಂಗದ ಬಳಿಕ ಈ ಕಾಲ್ತುಳಿತ ಉಂಟಾಗಿದ್ದು ಸದ್ಯ ಬಾಬಾ ನಾಪತ್ತೆಯಾಗಿದ್ದಾರೆ. ಜನರು ಭೋಲೆ ಬಾಬಾ ಪೋಸ್ಟರ್‌ಗಳಿಗೆ ಕಲ್ಲೆಸೆದು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X