ರಾಯಚೂರು | ಐಐಐಟಿ ಸ್ಥಾಪನೆಗೆಂದು ಭೂಮಿ ನೀಡಿ ಕಂಗಾಲಾದ ರೈತರಿಂದ ನ್ಯಾಯಕ್ಕಾಗಿ ಪ್ರತಿಭಟನೆ

Date:

Advertisements

ರಾಯಚೂರು ಐಐಐಟಿಗೆ ಗುರುತಿಸಿರುವ ಜಾಗ ಈ ಹಿಂದೆ ದಲಿತರಿಗೆ ನೀಡಿದ ಭೂಮಿಯಾಗಿದೆ. ಈ ಭೂಮಿಯನ್ನೆ ನಂಬಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬಗಳಿಗೆ ಫಲವತ್ತವಲ್ಲದ ಭೂಮಿ ನೀಡಿದ್ದು, ಇತ್ತ ಪರಿಹಾರವಿಲ್ಲದೆ ಭೂಮಿ ಇಲ್ಲದೆ ಭೂಮಿ ಕಳೆದುಕೊಂಡು ರೈತರನ್ನು ಒಕ್ಕಲೆಬ್ಬಿಸಿದ್ದರಿಂದ ಕಳೆದ ಎರಡು ದಿನಗಳಿಂದ ರೈತರು ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಯಚೂರಿಗೆ ಐಐಟಿ ಬದಲಿಗೆ ತ್ರಿಬಲ್ ಐಟಿ ಮಂಜೂರು ಮಾಡಿದ್ದು, ತಾಲೂಕಿನ ವಡವಾಟಿ ಸೀಮಾಂತರದ ಸರ್ವೆ ನಂಬರ್ 99/1/3ರಲ್ಲಿ ಒಟ್ಟು 65 ಎಕರೆ ಭೂಮಿಯನ್ನು ಗುರುತಿಸಲಾಗಿದೆ. ಈ 65 ಎಕರೆಯಲ್ಲಿ ಈ ಹಿಂದೆ 1978ರಲ್ಲಿ ಭೂ ರಹಿತ ದಲಿತರಿಗೆ 35 ಎಕರೆ ಭೂಮಿಯನ್ನು 12 ಕುಟುಂಬಗಳಿಗೆ ನೀಡಲಾಗಿದೆ. ಈಗ ಗುರುತಿಸಿರುವ ಭೂಮಿಯಲ್ಲಿಯೇ ಈ ರೈತರು ಸಾಗುವಳಿ ಮಾಡುತ್ತಿದ್ದಾರೆ. ಸರಕಾರ ನೀಡಿದ್ದ ಭೂಮಿಯಲ್ಲಿ ಕೃಷಿಯನ್ನು ಮಾಡುತ್ತಿದ್ದಾರೆ. ಜಿಲ್ಲಾಡಳಿತವು ಇದೇ ಭೂಮಿಯನ್ನು ಕಾಲೇಜಿಗೆ ನೀಡಲು ಮುಂದಾಗಿದ್ದರಿಂದ, ದಲಿತ ಕುಟುಂಬಗಳು ಭೂಮಿ ಕಳೆದುಕೊಂಡಿದ್ದಾರೆ.

farmers 5

ತ್ರಿಬಲ್ ಐಟಿಗಾಗಿ ಗುರುತಿಸಿದ ಭೂಮಿಗೆ ರೈತರಿಗೆ ಪರ್ಯಾಯ ಭೂಮಿ ನೀಡಿದೆ. ಆದರೆ ಆ ಭೂಮಿಯು ಫಲವತ್ತಾಗಿಲ್ಲವೆಂಬುದು ರೈತರ ಆರೋಪವಾಗಿದೆ. ಜೊತೆಗೆ ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಪಹಣಿ , ಸರ್ವೆ ನಡೆಸಿ ರೈತರಿಗೆ ನೀಡುವ ಭರವಸೆ ನೀಡಿದ್ದು, ಇದುವರೆಗೂ ನೀಡಿಲ್ಲವೆಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

Advertisements

ಸುಮಾರು 40 ವರ್ಷದಿಂದ ಸಾಗುವಳಿ ಮಾಡಿಕೊಂಡು ಬಂದು, ಭೂಮಿಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ. ಭೂಮಿ ಕಸಿದುಕೊಂಡು ಬದಲಿ ಭೂಮಿ ನೀಡಿದ್ದು, ಆದರೆ ಯಾವುದೇ ಕೆಲಸಕ್ಕೆ ಬಾರದಂತಾಗಿದೆ. ರೈತರಿಗೆ ಮೋಸ ಮಾಡಿದ್ದಾರೆ ಎಂದು ಪ್ರತಿಭಟನಾನಿರತ ಆರೋಪಿಸಿದ್ದಾರೆ.

ತ್ರಿಬಲ್‌ಐಟಿ ಕಟ್ಟಡ ಆರಂಭವಾಗಬೇಕಾದರೆ ದಲಿತರು ಈಗಾಗಲೇ ನೀಡಿರುವ ಭೂಮಿ ವಾಪಸ್ಸು ನೀಡಬೇಕು ಅಥವಾ ಬೇರೆಡೆ ಫಲವತ್ತಾದ ಭೂಮಿ ನೀಡಿ ಎಂದು ಸುಮಾರು 50ಕ್ಕೂ ಅಧಿಕ ರೈತರು, ಮುಖಂಡರಾದ ಸುದರ್ಶನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ವರದಿ : ಹಫೀಜುಲ್ಲ

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X