ಭಾರತದ ಸಾಮಾಜಿಕ ಮಾಧ್ಯಮ ಆಪ್ ‘ಕೂ’ ಶೀಘ್ರದಲ್ಲೇ ಸ್ಥಗಿತ

Date:

Advertisements

‘ಎಕ್ಸ್‌’ಗೆ(ಹಿಂದಿನ ಟ್ವಿಟರ್‌) ಪರ್ಯಾಯ ಎಂದೇ ಹೇಳಲಾಗುತ್ತಿದ್ದ ಭಾರತದ ಸಾಮಾಜಿಕ ಮಾಧ್ಯಮ ಆಪ್‌ ‘ಕೂ’  ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಆನ್‌ಲೈನ್‌ ಮಾಧ್ಯಮ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ಮಾತುಕತೆಗಳು ವಿಫಲವಾದ ನಂತರ 4 ವರ್ಷಗಳ ಹಿಂದೆ ಆರಂಭಗೊಂಡಿದ್ದ ‘ಕೂ’ ಆಪ್‌ ಸ್ಥಗಿತಕೊಳ್ಳುತ್ತಿದೆ.

‘ಕೂ’ ಆಪ್‌ ಆರಂಭವಾದಾಗ ರಾಜಕಾರಣಿಗಳು ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಪ್ರಚಾರ ನಡೆಸಿದ್ದರು. ಕಂಪನಿಯು ನೈಜೀರಿಯಾ ಹಾಗೂ ಬ್ರೆಜಿಲ್‌ನಲ್ಲಿ ವಿಸ್ತರಿಸಿ ಹೂಡಿಕೆದಾರರ ಗಮನವನ್ನು ಸೆಳೆದಿತ್ತು.

2020ರಲ್ಲಿ ಉದ್ಯಮಿಗಳಾದ ಅಮ್ರಮೇಯ ರಾಧಾಕೃಷ್ಣ ಹಾಗೂ ಮಾಯಾಂಕ್‌ ಬಿದ್ವಾತ್ಕಾ ಎಂಬುವವರು 10 ಭಾಷೆಗಳಲ್ಲಿ ಲಭ್ಯವಾಗುವಂತೆ ‘ಕೂ’ ಆಪ್‌ಅನ್ನು ಅಭಿವೃದ್ಧಿಪಡಿಸಿದ್ದರು. ಹಳದಿ ಬಣ್ಣದ ಹಕ್ಕಿಯ ಲೋಗೊದೊಂದಿಗೆ ಆರಂಭವಾಗಿದ್ದ ಇದು ಉದ್ಘಾಟನಾ ಸಂದರ್ಭದಲ್ಲಿ ಸುಮಾರು 6 ಕೋಟಿ ಮಂದಿ ಡೌನ್‌ಲೋಡ್‌ ಮಾಡಿಕೊಂಡಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೊದಲ ಭಾಷಣದಲ್ಲೇ ಬಿಜೆಪಿಗರ ಬೆವರಿಳಿಸಿದ ರಾಹುಲ್ ಮತ್ತು ಮಹುವಾ

ಈ ನಡುವೆ ಆಪ್‌ 2021ರಲ್ಲಿ ಅಮೆರಿಕದ ಟೈಗರ್‌ ಗ್ಲೋಬಲ್‌ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡು 31 ಮಿಲಿಯನ್‌ ಡಾಲರ್‌ ಹೂಡಿಕೆಯನ್ನು ಹೆಚ್ಚಿಸಿತ್ತು. ಇದು 2022ರ ವೇಳೆಗೆ 57 ಮಿಲಿಯನ್‌ ಡಾಲರ್‌ಗೆ ಏರಿಕೆಗೊಂಡು 90 ಲಕ್ಷ ಸಕ್ರಿಯ ಚಂದಾದಾರರಿದ್ದರು.

ಆದರೆ ನಂತರದ ದಿನಗಳಲ್ಲಿ ಕಂಪನಿ ಬೆಳವಣಿಗೆ ಸಾಧಿಸುವಲ್ಲಿ ವಿಫಲವಾಯಿತು. ಹೂಡಿಕೆ ಹೆಚ್ಚಿಸಲು ವಿಫಲವಾಗುವುದರೊಂದಿಗೆ ಕಾರ್ಮಿಕರ ಸಂಖ್ಯೆಯನ್ನು ಕಡಿತಗೊಳಿಸಲಾಯಿತು. ‘ಕೂ’ ಸಂಸ್ಥಾಪಕರು ತಮ್ಮ ಸ್ವಂತ ಹಣದಿಂದ ಉದ್ಯೋಗಿಗಳಿಗೆ ವೇತನವನ್ನು ನೀಡಬೇಕಾದ ಪರಿಸ್ಥಿತಿ ಉಂಟಾಯಿತು. ಅಂತಿಮವಾಗಿ ಡೈಲಿಹಂಟ್‌ನೊಂದಿಗೆ ಸ್ವಾಧೀನ ಪ್ರಕ್ರಿಯೆ ವಿಫಲವಾದ ನಂತರ ಕಂಪನಿ ಮುಚ್ಚುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X