ಲೈಂಗಿಕ ದೌರ್ಜನ್ಯ ಪ್ರಕರಣ: ಜುಲೈ 18ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರದತ್ತ ಸೂರಜ್ ರೇವಣ್ಣ

Date:

Advertisements

ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತನಾಗಿರುವ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಗೆ ಬೆಂಗಳೂರಿನ ಸಷೆನ್ಸ್‌ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ಜುಲೈ 1ರಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟೆನ್‌ ಮ್ಯಾಜಿಸ್ಟ್ರೇಟ್‌ ಅವರು ಜುಲೈ 3ರವರೆಗೂ ಸಿಐಡಿ ಕಸ್ಟಡಿಗೆ ನೀಡಿದ್ದರು.

ಸಿಐಡಿ ತಂಡ ಕಳೆದ ವಾರ ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತ್ತು. ಈತನ ಡಿಎನ್‌ಎ ಮಾದರಿಗಳನ್ನು ಕೂಡ ಸಂಗ್ರಹಿಸಲಾಗಿತ್ತು. ಸೂರಜ್‌ನನ್ನು ಜೂನ್‌ 23ರಂದು ಬಂಧಿಸಲಾಗಿದ್ದು,ಪುರುಷತ್ವ ಪರೀಕ್ಷೆಗೊಳಪಡಿಸಲಾಗಿದೆ.

Advertisements

ಅದೇ ರೀತಿ ಸಿಐಡಿ ತಂಡ ಶಾಸಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗ ಇಬ್ಬರು ಸಂತ್ರಸ್ತರ ಡಿಎನ್‌ಎ ಮಾದರಿಯನ್ನು ಕೂಡ ಸಂಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಮೊದಲ ಪ್ರಕರಣದಲ್ಲಿ, ಹಾಸನ ಜಿಲ್ಲೆಯ ಯುವಕರೊಬ್ಬರು ಸೂರಜ್‌ ರೇವಣ್ಣ ಜೂನ್‌ 16ರಂದು ಫಾರ್ಮ್‌ಹೌಸ್‌ನಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ,36 ವರ್ಷದ ಯುವಕರೊಬ್ಬರು ದೂರು ನೀಡಿದ್ದು, ಕೋವಿಡ್‌ ಸಾಂಕ್ರಾಮಿಕ ಕಾಲದ ಅವಧಿಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಆರೋಪಿಸಿದ್ದಾನೆ.

ಇವೆರೆಡೂ ದೂರುಗಳ ಆಧಾರದ ಮೇಲೆ ಸೂರಜ್‌ ವಿರುದ್ಧ 377, 342, 506 ಸೆಕ್ಷನ್‌ಗಳು ಸೇರಿದಂತೆ ಐಪಿಸಿಯ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸೂರಜ್‌ ರೇವಣ್ಣ ಸೋದರ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಕೂಡ ಹಲವು ಲೈಂಗಿಕ ಕಿರುಕುಳಗಳ ಆರೋಪದ ಮೇಲೆ ಬಂಧಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X