ಬಿಹಾರ| ಮತ್ತೆ ಮೂರು ಸೇತುವೆ ಕುಸಿತ; 15 ದಿನಗಳಲ್ಲಿ ಒಂಬತ್ತು ಪ್ರಕರಣ!

Date:

Advertisements

ಬಿಹಾರದಲ್ಲಿ ಕಳೆದ 15 ದಿನಗಳಲ್ಲಿಯೇ ಸುಮಾರು ಒಂಬತ್ತು ಸೇತುವೆ ಕುಸಿತ ಘಟನೆಗಳು ನಡೆದಿದೆ. ಭಾರೀ ಮಳೆಯ ನಡುವೆ ಸಿವಾನ್ ಜಿಲ್ಲೆಯಲ್ಲಿ 24 ಗಂಟೆಗಳಲ್ಲಿ ಮೂರು ಸೇತುವೆಗಳು ಕುಸಿದು ಬಿದ್ದಿದ್ದು, ಕಳೆದ 15 ದಿನಗಳಲ್ಲಿ ರಾಜ್ಯದಲ್ಲಿ ಒಂಬತ್ತನೇ ಘಟನೆಯಾಗಿದೆ.

ಇತ್ತೀಚಿನ ಸೇತುವೆ ಕುಸಿತ ಘಟನೆಯಲ್ಲಿ ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ. ಸೇತುವೆ ಕುಸಿದ ಬಳಿಕ ಸಿವಾನ್‌ನ ಗಂಡಕ್ ಮತ್ತು ಧಾಮ್ಹಿ ನದಿಗಳ ಉದ್ದಕ್ಕೂ ಇರುವ ವಿವಿಧ ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಈ ಗ್ರಾಮಗಳು ಜಿಲ್ಲಾ ಕೇಂದ್ರದಿಂದ ಸಂಪರ್ಕ ಕಳೆದುಕೊಂಡಿದೆ.

ಸಿವಾನ್ ಜಿಲ್ಲೆಯ ಪಟೇರಾ, ಧಮಾಯಿ ಗ್ರಾಮಗಳಲ್ಲಿ, ಜಿಲ್ಲೆಯ ತೆವ್ಟಾ ಪಂಚಾಯಿತಿ ವ್ಯಾಪ್ತಿಯಲ್ಲಿ ಸೇತುವೆ ಕುಸಿದ ಘಟನೆಗಳು ನಡೆದಿದೆ. ಜಿಲ್ಲೆಯ ಮಹಾರಾಜ್‌ಗಂಜ್ ಉಪವಿಭಾಗದ ಪತೇರಾ ಗ್ರಾಮದ ದೇವರಿಯಾದಲ್ಲಿ ಮೊದಲ ಘಟನೆ ವರದಿಯಾಗಿದೆ.

ಇನ್ನು ಗಂಡಕ್ ನದಿಗೆ ನಿರ್ಮಿಸಲಾದ ಸೇತುವೆಯ ಒಂದು ಭಾಗವು ಬುಧವಾರ ಕುಸಿದಿದೆ. 36-40 ವರ್ಷಗಳ ಹಿಂದೆ ನಿರ್ಮಿಸಿದ ಸೇತುವೆ ಇದುವರೆಗೆ ದುರಸ್ತಿ ಕಂಡಿಲ್ಲ ಎಂದು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ಈ ಸೇತುವೆಯ ಸ್ಥಿತಿ ಇನ್ನಷ್ಟು ಹದಗೆಟ್ಟಿತ್ತು. ಸೇತುವೆಯು ಗ್ರಾಮಸ್ಥರಿಗೆ ಏಕೈಕ ಸಾರಿಗೆ ಸಾಧನವಾಗಿತ್ತು.

ಇದನ್ನು ಓದಿದ್ದೀರಾ?  ಬಿಹಾರ| ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿತ; 9 ದಿನಗಳಲ್ಲಿ ಐದನೇ ಪ್ರಕರಣ

ಅದೇ ರೀತಿ ಮಹಾರಾಜ್‌ಗಂಜ್ ಬ್ಲಾಕ್‌ನ ತೆವ್ತಾ ಪಂಚಾಯತ್‌ನಲ್ಲಿ ನೌತಾನ್ ಮತ್ತು ಸಿಕಂದರ್‌ಪುರವನ್ನು ಸಂಪರ್ಕಿಸುವ ಸೇತುವೆ ಕುಸಿದಿದೆ. ಧಮಾಯಿ ಗ್ರಾಮದಲ್ಲಿಯೂ ಸೇತುವೆ ಕುಸಿದಿದೆ. ಗಂಡಕ್ ನದಿಗೆ ಸೇತುವೆ ನಿರ್ಮಿಸಲಾಗಿದ್ದು, ಕೆಲ ದಿನಗಳ ಹಿಂದೆಯಷ್ಟೇ ದುರಸ್ತಿ ಮಾಡಲಾಗಿದೆ. ಬಲವಾದ ನೀರಿನ ಹರಿವಿನಿಂದಾಗಿ ಸೇತುವೆ ಕುಸಿದಿದೆ.

ಕಳೆದ ಹದಿನೈದು ದಿನಗಳಲ್ಲಿ ನಡೆದ ಸೇತುವೆ ಕುಸಿತ ಘಟನೆಗಳ ಹಿಂದೆ ರಾಜಕಾರಣಿಗಳು, ಗುತ್ತಿಗೆದಾರರು ಮತ್ತು ಅಧಿಕಾರಿಗಳ ನಡುವೆ ನಡೆದಿರುವ ಅಕ್ರಮಗಳೇ ಈ ಎಲ್ಲ ಸೇತುವೆಗಳ ಕುಸಿತಕ್ಕೆ ಕಾರಣ ಎಂದು ಆರೋಪ ಮಾಡಲಾಗಿದೆ.

“ಅಧಿಕಾರಿಗಳು ಮತ್ತು ಗುತ್ತಿಗೆದಾರರೊಂದಿಗೆ ಶಾಮೀಲಾಗಿರುವ ರಾಜಕಾರಣಿಗಳು ದುರ್ಬಲ ಸೇತುವೆಗಳ ನಿರ್ಮಾಣಕ್ಕೆ ಕಾರಣರಾಗಿದ್ದಾರೆ” ಎಂದು ಎ ಎನ್ ಸಿನ್ಹಾ ಇನ್‌ಸ್ಟಿಟ್ಯೂಟ್ ಆಫ್ ಸೋಶಿಯಲ್ ಸ್ಟಡಿ ಮಾಜಿ ನಿರ್ದೇಶಕ ಪ್ರೊ.ಎಸ್ ನಾರಾಯಣ್ ದೂರಿದ್ದಾರೆ.

ಇದನ್ನು ಓದಿದ್ದೀರಾ?  9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

“ಗುತ್ತಿಗೆದಾರರು, ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ನಂಟು ಮುಖ್ಯವಾಗಿ ರಾಜ್ಯದಲ್ಲಿ ಸೇತುವೆ ಕುಸಿತಕ್ಕೆ ಕಾರಣವಾಗಿದೆ. ರಾಜಕೀಯ ನಿಧಿಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನು ಎನ್‌ಡಿಎ ಒಕ್ಕೂಟದ ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಾಗ್ದಾಳಿ ನಡೆಸಿದ್ದಾರೆ. ಈ ನಡುವೆ ಸೇತುವೆ ಕುಸಿತದ ಬಗ್ಗೆ ತನಿಖೆ ನಡೆಸಲು ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಕುಸಿದಿರುವ ಬಹುತೇಕ ಸೇತುವೆಗಳನ್ನು ಗ್ರಾಮೀಣ ಕಾಮಗಾರಿ ಇಲಾಖೆಯಿಂದ ನಿರ್ಮಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಶೇ. 3 ರಷ್ಟು ತುಟ್ಟಿಭತ್ಯೆ ಹೆಚ್ಚಳ; ಸಚಿವ ಸಂಪುಟ ಅನುಮೋದನೆ

ಕೇಂದ್ರ ಸಂಪುಟ ಬುಧವಾರ ನಡೆದ ಸಭೆಯಲ್ಲಿ ಕೇಂದ್ರ ಸರ್ಕಾರದ ಉದ್ಯೋಗಿಗಳು ಮತ್ತು...

ಭಾರತದ ಅಗ್ರ ಕೋಟ್ಯಾಧಿಪತಿಗಳಲ್ಲಿ ಮಹಿಳೆಗೆ ಸ್ಥಾನ; ಅತೀ ಶ್ರೀಮಂತ ಮಹಿಳೆ ರೋಶ್ನಿ ಮಲ್ಹೋತ್ರಾ!

ಭಾರತದ ಬಿಲಿಯನೇರ್‌ಗಳ ಇತಿಹಾಸದಲ್ಲಿ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಇದೇ ಮೊದಲ ಬಾರಿಗೆ...

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

Download Eedina App Android / iOS

X