ಮುಡಾ ಹಗರಣ ಪ್ರಕರಣವನ್ನು ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಮೂಡಾ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಬಿಜೆಪಿ ಆಗ್ರಹದ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಅವರು, “ಬಿಜೆಪಿಯವರು ಕೇಳುತ್ತಾರೆ ಎಂದರೆ ಎಲ್ಲವನ್ನೂ ಸಿಬಿಐಗೆ ಕೊಡಲು ಆಗಲ್ಲ” ಎಂದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹದ ಬಗ್ಗೆ ಪ್ರತಿಕ್ರಿಯಿಸಿ, “ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಎಲ್ಲವನ್ನೂ ಸಿಬಿಐ ತನಿಖೆಗೆ ಕೊಟ್ಟರೆ ಇಲ್ಲೇನು ಮಾಡುವ ಹಾಗಿಲ್ಲವೇ? ಸದನದಲ್ಲಿ ಯಾವ ವಿಷಯ ಚರ್ಚೆಗೆ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಸ್ಪೀಕರ್ಗೆ ಯಾವ ವಿಚಾರದ ಬಗ್ಗೆ ಪತ್ರ ಕೊಡ್ತಾರೋ ನೋಡೋಣ. ಬಿಜೆಪಿಯವರಿಗೆ ನಾವು ಉತ್ತರ ಕೊಡುತ್ತೇವೆ, ಹಿಂಜರಿಯುವುದಿಲ್ಲ” ಎಂದು ಹೇಳಿದರು.
