ವಿಜಯಪುರ | ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿದ ಪ್ರಕರಣ: ಐವರ ಮೃತದೇಹ ಪತ್ತೆ; ಕಾರ್ಯಾಚರಣೆ ಅಂತ್ಯ

Date:

Advertisements

ವಿಜಯಪುರದ ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಕಾರ್ಯಾಚರಣೆ ನಿಲ್ಲಿಸಿದ್ದಾರೆ.

ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್ ಶವಗಳನ್ನು ಈಗಾಗಲೇ ಹೊರ ತೆಗೆಯಲಾಗಿತ್ತು. ಇನ್ನುಳಿದ ಇಬ್ಬರಿಗಾಗಿ ಶೋಧಕಾರ್ಯ ಮುಂದುವರೆದಿತ್ತು.

ಗುರುವಾರ 30 ಜನ ಸಿಬ್ಬಂದಿ ಹಾಗೂ ಐದು ಬೋಟ್‌ಗಳ ಸಹಾಯದಿಂದ ಶೋಧಕಾರ್ಯ ಪ್ರಾರಂಭಿಸಿದ್ದು, ರಫೀಕ್ ಆಲಮೇಲ (40) ಹಾಗೂ ಮೆಹಬೂಬ್ ವಾಲಿಕಾರ್ (35) ಮೃತದೇಹವನ್ನು ಪತ್ತೆಹಚ್ಚಿ ನೀರಿನಿಂದ ಹೊರತೆಗೆದಿದ್ದಾರೆ.

Advertisements

ತೆಪ್ಪ ಘಟನೆ

ಜುಲೈ 2ರ ಮಂಗಳವಾರ ಸಂಜೆ 4:30ರ ಸುಮಾರಿಗೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಬಳೂತಿ ಜಾಕವೆಲ್ ಬಳಿ ಘಟನೆ ನಡೆದಿತ್ತು. ಇಸ್ಪೀಟ್ ಆಡುತ್ತಿದ್ದ ವೇಳೆ ಪೊಲೀಸರ ದಾಳಿಯ ಮಾಹಿತಿಯನ್ನರಿತು ತಪ್ಪಿಸಿಕೊಳ್ಳಲು ನದಿಗೆ ತೆಪ್ಪದ ಮೂಲಕ ಜಿಗಿದಿದ್ದು, ಏಳು ಜನ ನೀರುಪಾಲಾಗಿದ್ದರು.

ಇದನ್ನು ಓದಿದ್ದೀರಾ? ವಿಜಯಪುರ | ಇಸ್ಪೀಟ್ ಆಟ; ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಆರು ಜನ ನೀರುಪಾಲು

ಈ ಪೈಕಿ ಓರ್ವ ಈಜಿ ದಡ ಸೇರಿದ್ದರೆ, ಮತ್ತೊರ್ವನನ್ನು ರಕ್ಷಣೆ ಮಾಡಲಾಗಿತ್ತು. ಇನ್ನು ಘಟನೆಯಲ್ಲಿ ಸಾವನ್ನಪ್ಪಿದವರ ಐವರ ಮೃತದೇಹಗಳನ್ನು ಪತ್ತೆ ಹಚ್ಚಿದ್ದು, ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

ಶಿವಮೊಗ್ಗ | 15 ವರ್ಷದ ಬಳಿಕ ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಆರ್. ಮಾರುತಿ ವರ್ಗಾವಣೆ!

ಶಿವಮೊಗ್ಗ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 15...

ಸಿಂಧನೂರು | ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆ – ವಿದ್ಯಾರ್ಥಿನಿಯರ ಪ್ರತಿಭಟನೆ

ಸಿಂಧನೂರಿನ ಕುಷ್ಟಗಿ ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜಿನಲ್ಲಿ ಉಪನ್ಯಾಸಕರ ಕೊರತೆಯಿಂದಾಗಿ...

Download Eedina App Android / iOS

X