ಉತ್ತರಾಖಂಡ | ಭಾರೀ ಮಳೆ, 100 ರಸ್ತೆಗಳು ಬಂದ್, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

Date:

Advertisements

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿದಿದ್ದು 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

ಚಂಪಾವತ್, ಅಲ್ಮೋರಾ, ಪಿಥೋರಗಢ, ಉಧಮ್‌ಸಿಂಗ್ ನಗರ ಮತ್ತು ಕುಮಾವೂನ್ ಪ್ರದೇಶದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಉತ್ತರಾಖಂಡದ ಹವಾಮಾನ ಇಲಾಖೆಯು ನೀಡಿದೆ. ಡೆಹ್ರಾಡೂನ್, ಪೌರಿ, ತೆಹ್ರಿ ಮತ್ತು ಹರಿದ್ವಾರದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇನ್ನು ನಿರಂತರ ಮಳೆಯಿಂದಾಗಿ ಗಂಗಾ, ಅಲಕನಂದಾ, ಭಾಗೀರಥಿ, ಶಾರದಾ, ಮಂದಾಕಿನಿ ಮತ್ತು ಕೋಸಿ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಪಾಯದ ಮಟ್ಟವನ್ನು ಮೀರಿ ನದಿಗಳು ಉಕ್ಕಿ ಹರಿದಿದ್ದು, 100ಕ್ಕೂ ಹೆಚ್ಚು ರಸ್ತೆಗಳನ್ನು ಮುಚ್ಚಲಾಗಿದೆ.

Advertisements

ಇದನ್ನು ಓದಿದ್ದೀರಾ?  ಉತ್ತರಾಖಂಡ | 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ; ಬಿಜೆಪಿ ನಾಯಕನ ವಿರುದ್ಧ ದೂರು

ರುದ್ರಪ್ರಯಾಗ ಜಿಲ್ಲೆಯಲ್ಲಿ ಅಲಕನಂದಾ ನದಿಯಲ್ಲಿ ತುಂಬಿದ ನೀರು 10 ಅಡಿ ಎತ್ತರದ ಶಿವನ ವಿಗ್ರಹವನ್ನು ಮುಳುಗಿಸಿದೆ. ನೀರು ಹೆಚ್ಚುತ್ತಿರುವ ಕಾರಣ ಜನರು ತಗ್ಗು ಪ್ರದೇಶಗಳಿಗೆ ಅಥವಾ ನದಿ ದಡಗಳಿಗೆ ಹೋಗದಂತೆ ಹವಾಮಾನ ಮತ್ತು ವಿಪತ್ತು ನಿರ್ವಹಣಾ ಇಲಾಖೆ ಸಲಹೆ ನೀಡಿದೆ.

ಪೌರಿ ಮತ್ತು ನೈನಿತಾಲ್ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರೇತರ ಶಾಲೆಗಳನ್ನು ಮುಚ್ಚಲಾಗಿದೆ. ವಿಪತ್ತಿನ ಸಂದರ್ಭದಲ್ಲಿ ತಕ್ಷಣದ ರಕ್ಷಣೆಗೆ ಸಿದ್ಧರಾಗಿರಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವಿಪತ್ತು ನಿರ್ವಹಣಾ ಇಲಾಖೆಗಳು ಹಾಗೂ ರಾಷ್ಟ್ರೀಯ ವಿಪತ್ತು ರಕ್ಷಣಾ ಪಡೆಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಭಾರೀ ಮಳೆ

ಗಂಗಾ ಮತ್ತು ಸರಾಯು ಅಪಾಯದ ಮಟ್ಟಕ್ಕಿಂತ ಕೆಲವೇ ಮೀಟರ್‌ಗಳಷ್ಟು ಕೆಳಗೆ ಹರಿಯುತ್ತಿದ್ದರೆ, ಅಲಕನಂದಾ, ಮಂದಕಣಿ ಮತ್ತು ಭಾಗೀರಥಿ ನದಿಗಳು ಅಪಾಯದ ಮಟ್ಟವನ್ನು ದಾಟಿವೆ. ಗೋಮತಿ, ಕಾಳಿ, ಗೌರಿ, ಶಾರದಾ ನದಿಗಳ ನೀರಿನ ಮಟ್ಟವೂ ಏರಿಕೆಯಾಗುತ್ತಿದೆ.

ಭೂಕುಸಿತದಿಂದಾಗಿ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ ಪೀಪಲ್ ಕೋಠಿ ಬಳಿ ಪಾಗಲ್ ನಾಲ್ ಮತ್ತು ಮಾಲ್ವಾ ಮಾರ್ಗವನ್ನು ನಿರ್ಬಂಧಿಸಲಾಗಿದೆ. ಯಮುನೋತ್ರಿ ಹೆದ್ದಾರಿ, ಧಾರ್ಚುಲಾ ಮತ್ತು ತವಾ ಘಾಟ್ ರಾಷ್ಟ್ರೀಯ ಹೆದ್ದಾರಿಯ ರಸ್ತೆಗಳನ್ನು ಸಹ ನಿರ್ಬಂಧಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X