ಅಸ್ಸಾಂ ಪ್ರವಾಹ ಸ್ಥಿತಿ ಗಂಭೀರ: 29 ಜಿಲ್ಲೆಗಳ 16 ಲಕ್ಷ ಮಂದಿಗೆ ಆಪತ್ತು

Date:

Advertisements

ಅಸ್ಸಾಂ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದು, ರಾಜ್ಯದ 29 ಜಿಲ್ಲೆಗಳ 16.50 ಲಕ್ಷ ಮಂದಿ ತೊಂದರೆಗೊಳಗಾಗಿದ್ದಾರೆ. ರಾಜ್ಯದಾದ್ಯಂತ ಎಲ್ಲ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ ಎಂದು ಅಧಿಕೃತ ವರದಿಗಳು ತಿಳಿಸಿವೆ.

ಕಾಮರೂಪಿ ಜಿಲ್ಲೆಯ ಬ್ರಹ್ಮಪುತ್ರ, ದಿಗರು ಹಾಗೂ ಕೊಲ್ಲಾಂಗ್‌ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವುದರಿಂದ ಜನವಸತಿ ಹಾಗೂ ಕೃಷಿ ಭೂಮಿಗಳು ಜಲಾವೃತವಾಗಿವೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿಯಲು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಗುವಾಹಟಿಯ ಪ್ರವಾಹ ಪೀಡಿತ ಪ್ರದೇಶಗಳಾದ ಮಲಿಗಾವ್‌, ಪಂಡು ಬಂದರು ಹಾಗೂ ದೇಗುಲ ಘಟ್ಟಗಳ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Advertisements

ಹಿಮಂತ ಬಿಸ್ವಾ ಶರ್ಮಾ ಅವರು ಪ್ರವಾಹ ಪರಿಸ್ಥಿತಿಗಳ ಬಗ್ಗೆ ಅವಲೋಕಿಸಲು ಬುಧವಾರ ರಾತ್ರಿ ಎಲ್ಲ ಜಿಲ್ಲೆಗಳ ಆಯುಕ್ತರೊಂದಿಗೆ ಸಭೆ ನಡೆಸಿದ್ದು, ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಬೇಕೆಂದು ನಿರ್ದೇಶಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಸ್ಸಾಂ ಪ್ರವಾಹದಿಂದ 26 ಸಾವು, 1.61 ಲಕ್ಷ ಮಂದಿ ನಿರಾಶ್ರಿತ

ಆಗಸ್ಟ್‌ ತಿಂಗಳೊಳಗೆ ಎಲ್ಲ ಪುನರ್ವಸತಿ ಶಿಬಿರಗಳನ್ನು ಪೂರ್ಣಗೊಳಿಸಬೇಕು ಹಾಗೂ ಪರಿಹಾರ ನೀಡಿಕೆಯ ಬಗ್ಗೆ ಮುಖ್ಯ ಕಚೇರಿಗೆ ಖಚಿತ ಮಾಹಿತಿ ಒದಗಿಸಬೇಕು ಎಂದು ತಿಳಿಸಿದ್ದಾರೆ.

ಮುಂದಿನ ಮೂರು ದಿನಗಳಲ್ಲಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಂಪುಟ ದರ್ಜೆ ಸಚಿವರು ವಾಸ್ತವ್ಯ ಹೂಡಲಿದ್ದಾರೆ.

ಅಸ್ಸಾಂನಲ್ಲಿ ಪ್ರವಾಹ, ಭೂಕುಸಿತ ಹಾಗೂ ಚಂಡ ಮಾರುತದಿಂದ ಸಾವಿನ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. ಧಿಬ್ರು ಅತ್ಯಂತ ಹೆಚ್ಚು ತೊಂದರೆಗೊಳಗಾದ ಜಿಲ್ಲೆಯಾಗಿದ್ದು, 2.23 ಲಕ್ಷ ಮಂದಿ ಅಪಾಯದ ಸ್ಥಿತಿ ಎದುರಿಸುತ್ತಿದ್ದಾರೆ. ದರಾಂಗ್‌ನಲ್ಲಿ 1.84 ಲಕ್ಷ ಹಾಗೂ ಲಕೀಂಪುರದಲ್ಲಿ 1.66 ಲಕ್ಷ ಜನರಿಗೆ ತೊಂದರೆಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

Download Eedina App Android / iOS

X