ಕೆಎಚ್‌ಐಆರ್‌ ಸಿಟಿ ಅಭಿವೃದ್ಧಿ | ದಕ್ಷಿಣ ಕೊರಿಯಾ ನಿಯೋಗದೊಂದಿಗೆ ರಾಜ್ಯ ನಿಯೋಗ ಚರ್ಚೆ

Date:

Advertisements

ಬೆಂಗಳೂರು ಬಳಿ ಅಸ್ತಿತ್ವಕ್ಕೆ ಬರಲಿರುವ ಜ್ಞಾನ, ಆರೋಗ್ಯ, ಆವಿಷ್ಕಾರ ಮತ್ತು ಸಂಶೋಧನಾ ನಗರದ (ಕೆಎಚ್‌ಐಆರ್‌ ಸಿಟಿ) ಅಭಿವೃದ್ಧಿಗೆ ಸಂಬಂಧಿಸಿದಂತೆ ದಕ್ಷಿಣ ಕೊರಿಯಾದ ಜಿಯೊಂಗಿ ಪ್ರಾಂತ್ಯದ ಜೊತೆಗಿನ ಸಹಯೋಗದ ಸಾಧ್ಯತೆಗಳ ಬಗ್ಗೆ ರಾಜ್ಯದ ನಿಯೋಗವು ಗುರುವಾರ ಫಲಪ್ರದ ಸಮಾಲೋಚನೆ ನಡೆಸಿತು.

ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಜಿಯೊಂಗಿ ಪ್ರಾಂತ್ಯದ ಉಪ ರಾಜ್ಯಪಾಲ ಹಿಯುನ್‌ ಗೊನ್‌ ಕಿಮ್‌ ಅವರನ್ನು ಭೇಟಿಯಾಗಿತ್ತು.

‘ಎಲೆಕ್ಟ್ರಾನಿಕ್ಸ್‌, ಸ್ಟಾರ್ಟ್‌ಅಪ್‌, ಸಂಶೋಧನೆ ಮತ್ತು ಅಭಿವೃದ್ಧಿ (ಆರ್‌ಆ್ಯಂಡ್ಡಿ) , ಜೈವಿಕ ತಂತ್ರಜ್ಞಾನ ಹಾಗೂ ವೈದ್ಯಕೀಯ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಯೋಗಕ್ಕೆ ವಿಪುಲ ಅವಕಾಶಗಳು ಇವೆʼ ಎಂದು ಸಚಿವರು ಕಿಮ್‌ ಅವರ ಗಮನಕ್ಕೆ ತಂದರು.

Advertisements

ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ಜಿಯೊಂಗಿ ನವೋದ್ಯಮ ಶೃಂಗಸಭೆಯಲ್ಲಿ ಭಾಗವಹಿಸಲು ಕರ್ನಾಟಕದ ಸ್ಟಾರ್ಟ್‌ಅಪ್‌ಗಳಿಗೆ ಕಿಮ್‌ ಅವರು ಆಹ್ವಾನ ನೀಡಿದರು.

ಭಾರತದ ಸಿಲಿಕಾನ್‌ ಕಣಿವೆ ಖ್ಯಾತಿಯ ಬೆಂಗಳೂರು ಮತ್ತು ಕೊರಿಯಾದ ಸಿಲಿಕಾನ್‌ ಕಣಿವೆ ಖ್ಯಾತಿಯ ಪ್ಯಾಂಗೊ ಟೆಕ್ನೊ ವ್ಯಾಲಿ ನಡುವೆ ವಾಣಿಜ್ಯ ಬಾಂಧವ್ಯ ವೃದ್ಧಿಸಲು ನಿರ್ಧರಿಸಲಾಯಿತು.

ಸೋಲ್‌ ಮೆಟ್ರೊಪಾಲಿಟನ್‌ ಸರ್ಕಾರದ ಆರ್ಥಿಕ ನೀತಿಯ ಉಪ ಮೇಯರ್‌ ಲೀ ಹೆ ವೊ ಅವರ ಜೊತೆಗಿನ ಭೇಟಿಯಲ್ಲಿ ಹಣಕಾಸು, ಹೂಡಿಕೆ, ನವೋದ್ಯಮ, ಸಂಶೋಧನೆ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಕೊರಿಯಾದ ಕಂಪನಿಗಳಿಗೆ ರಾಜ್ಯ ಸರ್ಕಾರ ಒದಗಿಸಲಿರುವ ಸೌಲಭ್ಯಗಳನ್ನು ವಿವರಿಸಲಾಗಿದೆ.

ರಾಜ್ಯದಲ್ಲಿ ತನ್ನ ಹಣಕಾಸು ಚಟುವಟಿಕೆ ವಿಸ್ತರಿಸುವ ಸಾಧ್ಯತೆಗಳನ್ನು ಪರಿಶೀಲಿಸುವುದಾಗಿ ಕೆಇಬಿ ಹನಾಬ್ಯಾಂಕ್‌ ತಿಳಿಸಿದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X