ಪೀಸ್ ಫೌಂಡೇಶನ್ ಉಡುಪಿ ಜಿಲ್ಲೆಯ ಹಲವು ಶಾಲೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಸ್ಪೂರ್ತಿ ತರಲಿ ಎಂದು ಉಡುಪಿ ವಲಯ ಅರಣ್ಯಾಧಿಕಾರಿ ವಾರಿಜಾಕ್ಷಿ ಹಾರೈಸಿದರು.
ಉಡುಪಿ ಜಿಲ್ಲೆಯಲ್ಲಿ ವಿಕಲಚೇತನರ ಪರವಾಗಿ ಕಾರ್ಯ ನಿರ್ವಹಿಸುತ್ತಿರುವ ಡಾ ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್ಜಿಒ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ವಕೀಲ ಜಯಪ್ರಕಾಶ್ ಕೆದ್ಲಾಯ ಮಾತನಾಡಿ, “ಹಸಿರೇ ನಮ್ಮ ಉಸಿರು. ಪ್ರಸ್ತುತದಲ್ಲಿ ಇಡೀ ದೇಶದಲ್ಲೇ ಹಸಿರು ಕ್ರಾಂತಿ ಅಗಬೇಕಾಗಿದೆ. ವಿಶೇಷವಾಗಿ ಜನರಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸುವಂತಹ ಕೆಲಸ ಅಗಬೇಕಾಗಿದೆ. ಅದಷ್ಟು ಶಾಲೆ-ಕಾಲೇಜು, ಖಾಲಿ ಜಾಗದಲ್ಲಿ ಮರಗಳನ್ನು ನೆಟ್ಟು ಬೆಳಸಿದಲ್ಲಿ ನಮ್ಮ ಜೀವನ ಸಾರ್ಥಕ ಎನಿಸುತ್ತದೆ. ಇಂದು ವೀಕಲಚೇತನರೆಲ್ಲರೂ ಒಗ್ಗೂಡಿ ಸಾವಿರ ಗಿಡಗಳನ್ನು ನೆಡುವ ಮೂಲಕ ಹಸಿರು ಕ್ರಾಂತಿಗೆ ಮುಂದಾಗಿರುವುದು ಸಂತೋಷದ ವಿಚಾರ” ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು : ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ ನೇಮಕ
ಉಡುಪಿ ಶಾಲಾ ವಠಾರದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯೂಕ್ತ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಜಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಯೋಜನಾ ಸಹಾಯಕ ಶಿವಾಜಿ, ಪೀಸ್ ಫೌಂಡೇಶನ್ ಸಂಸ್ಥೆಯ ಜಗದೀಶ್ ಭಟ್, ಉದ್ಯಮಿ ಸ್ಟಾನ್ಲಿ, ಪತ್ರಕರ್ತ ಜನಾರ್ಧನ್ ಕೊಡವೂರು, ಶಿಜಿತ್, ಕಲಾವಿದ ಸಂದೇಶ್, ಯುವ ಉದ್ಯಮಿ ಕೆ ಸಂದೀಪ್ ಇದ್ದರು. ಅರಣ್ಯ ಇಲಾಖೆ ಸಿಬಂದಿ ಕೇಶವ ಪೂಜಾರಿ ಕಾರ್ಯಕ್ರಮ ನಿರ್ವಹಿಸಿದರು.