ಕುಮಾರಸ್ವಾಮಿ ಒಬ್ಬ ಹುಚ್ಚ, ಚಿಕಿತ್ಸೆ ಪಡೆಯುವುದು ಉತ್ತಮ: ಡಿಸಿಎಂ ಡಿ ಕೆ ಶಿವಕುಮಾರ್ ವಾಗ್ದಾಳಿ

Date:

Advertisements

ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಅವರು ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿಸಿಎಂ ಡಿ ಕೆ ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದರು.

ಮೂಡಾ ಹಗರಣ ಹೊರಬರುವಲ್ಲಿ ಡಿಸಿಎಂ ಶಿವಕುಮಾರ್ ಕೈವಾಡವಿದೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಬಗ್ಗೆ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು.

ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಉತ್ತರ ನೀಡಿದ ಶಿವಕುಮಾರ್ ಅವರು, “ಮೂಡಾ ಹಗರಣ ವಿಚಾರದಲ್ಲಿ ಕುಮಾರಸ್ವಾಮಿ ಮಾಡುತ್ತಿರುವುದು ಆಧಾರರಹಿತ ಆರೋಪ. ಹುಚ್ಚು ಹಿಡಿದಿರುವ ಕಾರಣ ಅವರು ಈ ರೀತಿ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಹೇಳಿದರು.

Advertisements

ಸಿಡಿ ಫ್ಯಾಕ್ಟರಿ ನಂತರ ಈಗ ಮೂಡಾ ಫ್ಯಾಕ್ಟರಿ ಹೊರಬರುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ “ಕೆಲವೊಬ್ಬರಿಗೆ ನನ್ನನ್ನು ನೆನಪಿಸಿಕೊಳ್ಳದಿದ್ದರೆ ನಿದ್ದೆಯೂ ಬರುವುದಿಲ್ಲ, ತಲೆಯೂ ಓಡುವುದಿಲ್ಲ. ಅವರು ಬಾಯಿಗೆ ಬಂದಂತೆ ಮಾತಾಡುತ್ತಿರುವುದು ಬಹಳ ಸಂತೋಷದ ವಿಚಾರ ” ಎಂದು ತಿರುಗೇಟು ನೀಡಿದರು.

ಮಂಡ್ಯದಲ್ಲಿ ತಾವು ಮಾಡುತ್ತಿರುವ ಜನತಾದರ್ಶನಕ್ಕೆ ಅಧಿಕಾರಿಗಳು ಹೋಗಬಾರದೆಂದು ರಾಜ್ಯ ಸರಕಾರದಿಂದ ಸೂಚನೆ ನೀಡಲಾಗಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ “ಜನರನ್ನು ಇಟ್ಟುಕೊಂಡು ಜನತಾ ದರ್ಶನ ಮಾಡಲಿ. ಹಳ್ಳಿ, ಹಳ್ಳಿ ತಿರುಗಲಿ, ಯಾರು ಬೇಡ ಎಂದು ಹೇಳಿದ್ದಾರೆ. ಅಧಿಕಾರಿಗಳು ಶಿಷ್ಟಾಚಾರ ಪಾಲಿಸುತ್ತಾರೆ. ಅದರ ಪ್ರಕಾರ ಸಂಸದರನ್ನು ಹೇಗೆ ಸ್ವಾಗತಿಸಬೇಕೋ ಆ ರೀತಿ ಕೆಲಸ ಮಾಡುತ್ತಾರೆ. ನಾವು ದೆಹಲಿಗೆ ತೆರಳಿ ಅಲ್ಲಿನ ಅಧಿಕಾರಿಗಳನ್ನು ಬಳಸಿಕೊಳ್ಳಲು ಆಗುತ್ತದೆಯೇ? ಜನಕ್ಕೆ ಹೋಗಬೇಡಿ ಎಂದು ಹೇಳಲು ಆಗುತ್ತದೆಯೇ? ನನಗೆ ಈ ಆರೋಪದ ವಿಚಾರ ಗೊತ್ತೇ ಇಲ್ಲ. ನನಗೂ ಇದಕ್ಕೂ ಯಾವುದೇ ರೀತಿಯ ಸಂಬಂಧವೂ ಇಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X