ತುಮಕೂರು | ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ; ಶ್ರೀಗಳಿಂದ ಉತ್ತಮ ಸ್ಪಂದನೆ

Date:

Advertisements

ಮುಸ್ಲಿಂ ಬಾಂಧವ್ಯ ವೇದಿಕೆ-ಕರ್ನಾಟಕ ಇಂದು ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿ, ಕೋಮು ಸೌಹಾರ್ದತೆಗಾಗಿ ದನಿ ಎತ್ತುವಂತೆ ಮನವಿ ಮಾಡಿರುವುದಾಗಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಎಸ್ ಬಿ ದಾರಿಮಿ ತಿಳಿಸಿದರು.

ತುಮಕೂರು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,
“ದೇಶದಲ್ಲಿ ನೆಲೆಸಿರುವ ಎಲ್ಲ ಸಮುದಾಯಗಳ ನಡುವೆ ಉತ್ತಮ ಸೌಹಾರ್ದ ವಾತಾವರಣ ನಿರ್ಮಾಣ ಆಗಬೇಕೆಂಬ ಸದುದ್ದೇಶದಿಂದ ಹುಟ್ಟಿಕೊಂಡಿರುವ ಮುಸ್ಲಿಂ ಬಾಂಧವ್ಯ ವೇದಿಕೆ-ಕರ್ನಾಟಕ ಇದು” ಎಂದರು.

“ವಿರಕ್ತ ಮಠಗಳಲ್ಲಿಯೇ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಧಾರ್ಮಿಕವಾಗಿ ಶಕ್ತಿಕೇಂದ್ರ ಎನಿಸಿಕೊಂಡಿರುವ ಸಿದ್ದಗಂಗಾ ಮಠಾಧ್ಯಕ್ಷರನ್ನು ಭೇಟಿಯಾಗಿ ಒಂದು ಸಮುದಾಯದ ವಿರುದ್ದ ನಡೆಯುತ್ತಿರುವ ಕೋಮು ಅಸಹಿಷ್ಣತೆ ವಿರುದ್ದ ಶ್ರೀಗಳು ದನಿ ಎತ್ತುವಂತೆ ಮನವಿ ಮಾಡಿದ್ದು, ಶ್ರೀಗಳು ಅವಕಾಶ ಬಂದಾಗ, ಸೌಹಾರ್ದ ಭೂಮಿಕೆಗೆ ಕೈ ಜೋಡಿಸುವ ಭರವಸೆ ನೀಡಿದ್ದಾರೆ” ಎಂದು ಹೇಳಿದರು.

Advertisements

“ಕರ್ನಾಟಕವು ಕುವೆಂಪು ಅವರು ಹೇಳಿರುವ ರೀತಿ ಸರ್ವ ಜನಾಂಗದ ಶಾಂತಿಯ ತೋಟ. ಆದರೆ ಕೆಲ ವರ್ಷಗಳಿಂದ ಇಲ್ಲಿ ಹಿಜಾಬ್, ಹಲಾಲ್, ಅಜ್ಹಾನ್, ವ್ಯಾಪಾರ ನಿರ್ಬಂಧ, ಟಿಪ್ಪು ಜಯಂತಿ, ಉರಿಗೌಡ-ನಂಜೇಗೌಡ, ಮೀಸಲಾತಿ ರದ್ದು ಹೀಗೆ ನಿರಂತರವಾಗಿ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡ ಕೀಳು ಮಟ್ಟದ ರಾಜಕಾರಣದಿಂದ ನಿರಂತರ ಶೋಷಣೆಗೆ ಒಳಗಾಗುತ್ತಿದೆ. ಒಂದೆಡೆ ರಾಜಕೀಯ ಕಾರಣಕ್ಕೆ ಇದನ್ನು ಮಾಡಿದರೆ, ಇದಕ್ಕೆ ಕುಸಿಯತ್ತಿರುವ ಮೌಲ್ಯಾಧಾರಿತ ಸಮಾಜಿಕ ವ್ಯವಸ್ಥೆ ಕಾರಣವಾಗಿದೆ” ಎಂದರು.

“ಅನಾದಿ ಕಾಲದಿಂದ ಎಲ್ಲ ಸಮುದಾಯದವರ ನಡುವೆ ಉತ್ತಮ ಬಾಂಧವ್ಯ ಹೊಂದಿರುವ ಮಠ-ಮಾನ್ಯಗಳ ಸ್ವಾಮೀಜಿಗಳು ಮೌನ ಸರಿಯಲ್ಲ. ನಶಿಸುತ್ತಿರುವ ಕೋಮು ಸಾಮರಸ್ಯವನ್ನು ಪುನಃ ಸ್ಥಾಪಿಸುವ ನಿಟ್ಟಿನಲ್ಲಿ ಸ್ವಾಮಿಜೀಗಳು ಜನರಿಗೆ ಸತ್ಯ ತಿಳಿಸಬೇಕು. ಇದು ಕೇವಲ ಹಿಂದು ಧರ್ಮದ ಸ್ವಾಮೀಜಿಗಳಲ್ಲದೆ, ಎಲ್ಲ ಧರ್ಮಗಳ ಪೂಜ್ಯ ಸ್ಥಾನದಲ್ಲಿ ಇರುವವರೂ ಇದಕ್ಕೆ ಕೈಜೋಡಿಬೇಕೆಂಬುದು ನಮ್ಮ ವೇದಿಕೆಯ ಕೋರಿಕೆಯಾಗಿದೆ” ಎಂದರು.

“ರಾಜ್ಯದಲ್ಲಿ ವ್ಯಕ್ತಿಗತ ನೆಲೆಯಲ್ಲಿ ಆದ ಘಟನೆಗಳನ್ನು ಇಡೀ ಸಮುದಾಯಕ್ಕೆ ಅಂಟಿಸುವ ಕೆಲಸವನ್ನು ಹೆಚ್ಚಿನ ರೀತಿಯಲ್ಲಿ ಮಾಡಲಾಗುತ್ತಿದೆ. ಈ ವಿಚಾರದಲ್ಲಿ ಮಠಾಧೀಶರು, ಧಾರ್ಮಿಕ ನಾಯಕರು, ಸಾಮಾಜಿಕ ನಾಯಕರು ಮತ್ತು ಮುತ್ಸದ್ದಿಗಳ ಮೌನ ಸಮ್ಮತಿ ಎಂಬಂತೆ ಕೆಲವರು ವರ್ತಿಸುತ್ತಿದ್ದಾರೆ. ಈ ರೀತಿಯ ಪ್ರಯತ್ನಗಳು ನಮ್ಮ ನೆರೆ ಹೊರೆಯ ರಾಜ್ಯಗಳಲ್ಲಿ ಯಶಸ್ಸು ಕಂಡಿಲ್ಲ. ಇದಕ್ಕೆ ಅಲ್ಲಿನ ಸಾಮಾಜಿಕ ಮತ್ತು ಧಾರ್ಮಿಕ ವ್ಯವಸ್ಥೆಯೇ ಕಾರಣವಾಗಿದೆ” ಎಂದರು.

“ಆನಾದಿ ಕಾಲದಿಂದಲೂ ಮುಸ್ಲಿಂ ಸಮುದಾಯದೊಂದಿಗೆ ಒಳ್ಳೆಯ ಬಾಂಧವ್ಯ ಹೊಂದಿದ್ದ ಸಮುದಾಯಗಳೇ ಇಂತಹ ವಿಚಾರಗಳಲ್ಲಿ ಮುಂದಾಳತ್ವ ವಹಿಸುತ್ತಿರುವುದು ಕಳವಳ ಮೂಡಿಸಿದೆ. ಹಾಗಾಗಿ ಸ್ವಾಮೀಜಿಗಳು ರಾಜ್ಯದಲ್ಲಿ ಕೋಮು ಸೌಹಾರ್ದ ವಾತಾವರಣ ನಿರ್ಮಾಣದ ಮುಂದಾಳ್ವತ್ವ ವಹಿಸಬೇಕೆಂದು ಶ್ರೀ ಸಿದ್ದಲಿಂಗ ಸ್ವಾಮೀಜಿಗಳಲ್ಲಿ ಮನವಿ ಮಾಡಿದ್ದೆವೆ” ಎಂದರು.

ಈ ಸುದ್ದಿ ಓದಿದ್ದೀರಾ? ಜು.7 | ಉಡುಪಿ ಕ್ರೈಸ್ತ ಸಮುದಾಯದ ವತಿಯಿಂದ ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಸನ್ಮಾನ

ಸುದ್ದಿಗೋಷ್ಟಿಯಲ್ಲಿ ಮುಸ್ಲಿಂ ಬಾಂಧವ್ಯ ವೇದಿಕೆಯ ಗೌರವಾಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟಾ, ಸುಹೇಲ್ ಅಹಮದ್ ಮರೂರ್, ಡಾ ಹಕೀಮ್ ತೀರ್ಥಹಳ್ಳಿ, ಮುಸ್ತಾಕ್ ಹೆನ್ನಾಬೈಬ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X