ಪ್ರಧಾನಿ ಜೊತೆಗಿನ ಸಂವಾದದ ವೇಳೆ ‘ಅಹಂಕಾರ’ವನ್ನು ಉಲ್ಲೇಖಿಸಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

Date:

Advertisements

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಗೆದ್ದ ಟೀಂ ಇಂಡಿಯಾ ಜೊತೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಬ್ಯಾಟಿಂಗ್‌ ದಿಗ್ಗಜ ವಿರಾಟ್‌ ಕೊಹ್ಲಿ ‘ಅಹಂಕಾರ’ ಪದವನ್ನು ಉಲ್ಲೇಖಿಸಿದ್ದಾರೆ. ಆಟಗಳ ಬಗ್ಗೆ ಕೊಹ್ಲಿ ಆಡಿರುವ ಮಾತುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ಹೇಳಿದಂತೆ ಭಾಸವಾಗಿದೆ.

ಬಾರ್ಬಡೋಸ್‌ನಲ್ಲಿ ಟಿ20 ವಿಶ್ವಕಪ್‌ ಗೆದ್ದ ಬಳಿಕ ಟೀಂ ಇಂಡಿಯಾ ಬೆರಿಲ್‌ ಚಂಡಮಾರುತದಿಂದ ಸಿಲುಕಿ ಹಾಕಿಕೊಂಡಿತ್ತು. ಇದಾದ ನಂತರ ರೋಹಿತ್ ಶರ್ಮಾ ಪಡೆ ಜುಲೈ 4ರಂದು ಬೆಳಿಗ್ಗೆ 6 ಗಂಟೆಗೆ ಬಾರ್ಬಡೋಸ್‌ನಿಂದ ದೆಹಲಿಗೆ ಬಂದಿಳಿದಿತ್ತು.

ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಕಾರ್ಯದರ್ಶಿ ಜಯ ಶಾ ಜೊತೆ ಟೀಂ ಇಂಡಿಯಾ ಆಟಗಾರರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ಅವರೊಂದಿಗೆ ಟೀಮ್‌ ಇಂಡಿಯಾ ಆಟಗಾರರು ಸಂವಾದ ನಡೆಸಿದ್ದರು. ಈ ಸಂವಾದದ ಪೂರ್ಣ ವಿಡಿಯೋವನ್ನು ಶುಕ್ರವಾರ ಸಂಜೆ ಯೂಟ್ಯೂಬ್‌ನಲ್ಲಿ ಖುದ್ದು ಪ್ರಧಾನಿ ಮೋದಿಯೇ ಬಿಡುಗಡೆಗೊಳಿಸಿದ್ದರು.

Advertisements

ಈ ಸಂವಾದದ ವೇಳೆ ಮಾತನಾಡಿರುವ ವಿರಾಟ್‌ ಕೊಹ್ಲಿ, “ನಾನು ಏನು ಮಾಡಲು ಪ್ರಯತ್ನ ಮಾಡಿದರೂ ಅದು ಸಾಧ್ಯವಾಗುತ್ತಿರಲಿಲ್ಲ. ನಾನು ಮಾಡುತ್ತೇನೆ ಎಂದು ನಮಗೆ ಅನಿಸಿದರೆ ನಮ್ಮ ಅಹಂಕಾರ ಹೆಚ್ಚಾಗುತ್ತದೆ. ಆಗ ಆಟ ನಮ್ಮ ಕೈತಪ್ಪಿ ಹೋಗುತ್ತದೆ. ಅಹಂಕಾರವನ್ನೇ ಬಿಡಬೇಕಾಗುತ್ತದೆ” ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ

ಇದನ್ನು ಓದಿದ್ದೀರಾ?  ವಿರಾಟ್ ಕೊಹ್ಲಿ ಬೆನ್ನಲ್ಲೇ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ನಾಯಕ ರೋಹಿತ್ ಶರ್ಮಾ

“ಆಟದ ಸ್ಥಿತಿ ಹಾಗೆಯೇ ಇತ್ತು. ನನಗೆ ನನ್ನ ಅಹಂಕಾರವನ್ನು ತೋರಿಸಲು ಅವಕಾಶವೇ ಇರಲಿಲ್ಲ. ತಂಡಕ್ಕಾಗಿ ನನ್ನ ಅಹಂಕಾರವನ್ನು ನಾನು ಬದಿಗೊತ್ತಬೇಕಾಗಿತ್ತು” ಎಂದು ತಿಳಿಸಿದ್ದಾರೆ.

ಸದ್ಯ ಈ ವಿಡಿಯೋ ತುಣುಕು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, “ವಿರಾಟ್ ಕೊಹ್ಲಿ ಪರೋಕ್ಷವಾಗಿ ಪ್ರಧಾನಿ ಮೋದಿ ಅವರ ಮೇಲೆ ವಾಗ್ದಾಳಿ ನಡೆಸಿದ್ದಾರೆಯೇ” ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

“ಆ ಅಹಂಕಾರದಿಂದಾಗಿಯೇ ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬರು (ನರೇಂದ್ರ ಮೋದಿ) 303 ಸ್ಥಾನದಿಂದ 240ಕ್ಕೆ ಇಳಿದಿದ್ದಾರೆ” ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದರೆ, “ಇನ್ನೊಬ್ಬರನ್ನು ಪರೋಕ್ಷವಾಗಿ ರೋಸ್ಟ್ ಮಾಡುವ ಪ್ರತಿಭೆ ಕೊಹ್ಲಿಗೆ ಇದೆ ಎಂದು ನನಗೆ ತಿಳಿದಿರಲಿಲ್ಲ” ಎಂದು ಮತ್ತೋರ್ವ ನೆಟ್ಟಿಗರು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಟಿ20 ವಿಶ್ವಕಪ್ ಫೈನಲ್ | ವಿರಾಟ್ ಕೊಹ್ಲಿ ಅರ್ಧಶತಕ; ದಕ್ಷಿಣ ಆಫ್ರಿಕಾಕ್ಕೆ ಸವಾಲಿನ ಗುರಿ ನೀಡಿದ ಟೀಮ್ ಇಂಡಿಯಾ

ಈ ಹಿಂದೆ 2021ರಲ್ಲಿ ಪಾಕಿಸ್ತಾನದ ಎದುರು ಭಾರತ ಸೋತಾಗ ಭಕ್ತರು ಮೊಹಮ್ಮದ್ ಶಮಿ ವಿರುದ್ಧ ಟ್ರೋಲ್ ಮಾಡಿದಾಗ ವಿರಾಟ್ ಕೊಹ್ಲಿ ಶಮಿ ಪರವಾಗಿ ನಿಂತಿದ್ದರು ಎಂಬುವುದನ್ನು ನೆಟ್ಟಿಗರೊಬ್ಬರು ನೆನಪಿಸಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಚಾರ್‌ ಸೋ ಪಾರ್ ಅಂದರೆ 400ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತನ್ನೆಲ್ಲ ಭಾಷಣಗಳಲ್ಲಿ ಹೇಳಿಕೊಂಡಿದ್ದರು. ಆದರೆ ಬಿಜೆಪಿ ಬಹುಮತವನ್ನು ಕೂಡಾ ಪಡೆಯಲು ಸಾಧ್ಯವಾಗದೆ ಸದ್ಯ ಮಿತ್ರ ಪಕ್ಷಗಳ ಸಹಾಯದಿಂದ ಸರ್ಕಾರ ರಚಿಸಿದೆ. ಇದಕ್ಕೆಲ್ಲ ಮೋದಿಯ ಅಹಂಕಾರವೇ ಕಾರಣ ಎಂದು ನೆಟ್ಟಿಗರು ಹೇಳಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

5 COMMENTS

  1. ಇದು ನಿಮ್ಮ ಭ್ರಮೆ. ನಿಮ್ಮ ಅನಿಸಿಕೆ, ಅಭಿಪ್ರಾಯ Virat Kohli ದು ಅನ್ನುವ ರೀತಿಯಲ್ಲಿ ಪ್ರಕಟಿಸಿದ್ದೀರಾ . Modi North Korea president ಥರಾ ಇದ್ದಿದ್ದರೆ ನಿಮ್ fake News Channel permenent ಆಗಿ ಬಂದ್ ಆಗ್ತಾ ಇತ್ತು.

  2. ಯಾವುದೇ ಸಂದರ್ಭದಲ್ಲಿ ಅಹಾಂಕಾರ ಪ್ರದರ್ಶನ ಮಾಡಬಾರದು ಮಾಡಿದರೆ ಸೋಲು ಕಟ್ಟಿಟ್ಟ ಬುತ್ತಿ. ಎಂದು ನುಡಿದ್ದಿದ್ದಾರೆ.

  3. This channel look like funded by congi and urban naxals. Virat spoke purely a mind and heart of sports personnel which is very very true for a team game. What if he spoke the same with pappu, mamata or akilesh

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X