ತಮಿಳುನಾಡಿನ ಬಿಎಸ್ಪಿ ರಾಜ್ಯಾಧ್ಯಕ್ಷ ಕೆ ಆರ್ಮ್ಸ್ಟ್ರಾಂಗ್ ಹತ್ಯೆಯ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಹುಜನ ಸಮಾಜ ಪಕ್ಷ (ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಭಾನುವಾರ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಅವರು ಚೆನ್ನೈನಲ್ಲಿ ಆರ್ಮ್ಸ್ಟ್ರಾಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಪೆರಂಬೂರ್ನಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಇರಿಸಲಾಗಿದ್ದ ಆರ್ಮ್ಸ್ಟ್ರಾಂಗ್ ಪಾರ್ಥಿವ ಶರೀರದ ಮುಂದೆ ಪುಷ್ಪಾರ್ಚನೆ ಮಾಡಿದರು.
ಅದಾದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮಾಯಾವತಿ ಅವರು, ಈವರೆಗೆ ಬಂಧಿಸಲ್ಪಟ್ಟವರು ನಿಜವಾದ ಅಪರಾಧಿಗಳಲ್ಲ ಎಂದು ಪ್ರತಿಪಾದಿಸಿದರು. ಹಾಗೆಯೇ ತನಿಖೆಯನ್ನು ಕೇಂದ್ರ ಏಜೆನ್ಸಿ ಸಿಬಿಐಗೆ ವರ್ಗಾಯಿಸಲು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರಿಗೆ ಒತ್ತಾಯಿಸಿದರು.
ಇದನ್ನು ಓದಿದ್ದೀರಾ? ತಮಿಳುನಾಡು ಬಿಎಸ್ಪಿ ಮುಖ್ಯಸ್ಥನ ಬರ್ಬರ ಹತ್ಯೆ: 8 ಜನರ ಬಂಧನ
“ಆರ್ಮ್ಸ್ಟ್ರಾಂಗ್ ಹತ್ಯೆಯ ರೀತಿಯನ್ನು ನೋಡಿದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಇಲ್ಲ ಎಂಬುವುದನ್ನು ತೋರಿಸುತ್ತದೆ. ಆರ್ಮ್ಸ್ಟ್ರಾಂಗ್ಗೆ ನ್ಯಾಯ ದೊರೆಯುವಂತೆ ಸ್ಟಾಲಿನ್ ನೋಡಿಕೊಳ್ಳಬೇಕು. ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕು” ಎಂದು ಮನವಿ ಮಾಡಿದರು.
“ನಿಜವಾದ ಆರೋಪಿಗಳನ್ನು ಬಂಧಿಸಲಾಗಿಲ್ಲ. ರಾಜ್ಯ ಸರ್ಕಾರವು ನ್ಯಾಯವನ್ನು ಖಾತರಿಪಡಿಸುತ್ತದೆ ಎಂಬ ಭರವಸೆ ನಮಗಿಲ್ಲ. ತನಿಖೆಯನ್ನು ಸಿಬಿಐಗೆ ವರ್ಗಾಯಿಸಬೇಕು” ಎಂದು ಆಗ್ರಹಿಸಿದರು.
“ಆರ್ಮ್ಸ್ಟ್ರಾಂಗ್ ಹತ್ಯೆಯ ನಂತರ ರಾಜ್ಯದಾದ್ಯಂತ ದಲಿತರು ಆತಂಕಕ್ಕೊಳಗಾಗಿದ್ದಾರೆ” ಎಂದು ಹೇಳಿದ ಮಾಯಾವತಿ, ರಾಜ್ಯದಲ್ಲಿ ದಲಿತರ ಸುರಕ್ಷತೆ ಕಡೆ ಗಮನಹರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.
#WATCH | “… we urge the state government to refer the case to the CBI,” says BSP Chief Mayawati on the murder of Tamil Nadu BSP President K Armstrong in Chennai.
She says, “I urge the state government and especially the CM that he should ensure law and order in the state,… https://t.co/pgFqpzLFcR pic.twitter.com/wUjHL2de0l
— ANI (@ANI) July 7, 2024