ಮುಂಬೈನಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ, ರೈಲು ಸೇವೆಗಳಲ್ಲಿ ವ್ಯತ್ಯಯ

Date:

Advertisements

ಸೋಮವಾರ ಮುಂಜಾನೆ ಮುಂಬೈ ಮತ್ತು ಇಲ್ಲಿನ ಉಪನಗರಗಳಲ್ಲಿ ಭಾರೀ ಮಳೆ ಸುರಿದು, ಪ್ರಮುಖ ರಸ್ತೆಗಳು ಮತ್ತು ತಗ್ಗು ಪ್ರದೇಶಗಳಲ್ಲಿ ವ್ಯಾಪಕವಾಗಿ ಜಲಾವೃತಗೊಂಡು ಜನಜೀವನ ಅಸ್ಥವ್ಯಸ್ಥಗೊಂಡಿದೆ. ನಗರದ ವಿವಿಧೆಡೆ 300 ಮಿಲಿ ಮೀಟರ್‌ಗೂ ಅಧಿಕ ಮಳೆಯಾಗಿದೆ ಎಂದು ಪೌರಾಯುಕ್ತರು ತಿಳಿಸಿದ್ದಾರೆ.

ಅಂಧೇರಿ, ಕುರ್ಲಾ, ಭಾಂಡೂಪ್, ಕಿಂಗ್ಸ್ ಸರ್ಕಲ್ ಮತ್ತು ದಾದರ್ ಸೇರಿದಂತೆ ಹಲವು ಪ್ರದೇಶಗಳು ಮಳೆಯಿಂದ ಹೆಚ್ಚು ಹಾನಿಯುಂಟಾಗಿವೆ. ಬಹುತೇಕ ಪ್ರದೇಶಗಳಲ್ಲಿ 2 ಅಡಿಗೂ ಹೆಚ್ಚು ನೀರು ಸಂಗ್ರಹಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.

ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ನಾಗರಿಕ ಮಂಡಳಿಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಭಾರೀ ಮಳೆಯಿಂದಾಗಿ ಉಪನಗರ ರೈಲು ಸೇವೆಗಳು ಮತ್ತು ಬೆಸ್ಟ್ ಬಸ್ ಸೇವೆಗಳಿಗೆ ಅಡಚಣೆಯುಂಟಾಗಿದೆ. ಹಲವು ಬೆಸ್ಟ್ ಬಸ್‌ಗಳನ್ನು ಅವುಗಳ ನಿಯಮಿತ ಮಾರ್ಗಗಳಿಂದ ಬೇರೆಡೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಅಧಿಕಾರಿಗಳ ಪ್ರಕಾರ, ಮುಂದಿನ ಗಂಟೆಗಳಲ್ಲಿ ನಗರದಲ್ಲಿ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ರೈಲುಗಳ ರದ್ದು

ಕೇಂದ್ರ ರೈಲ್ವೆ ಎಂಎಂಆರ್‌ ಸಿಎಸ್‌ಎಂಟಿ (12110), ಪುಣೆ-ಸಿಎಸ್‌ಎಂಟಿ (11010), ಪುಣೆ-ಸಿಎಸ್‌ಎಂಟಿ ಡೆಕ್ಕನ್ (12124), ಪುಣೆ-ಸಿಎಸ್‌ಎಂಟಿ ಡೆಕ್ಕನ್ (11007) ಮತ್ತು ಸಿಎಸ್‌ಎಂಟಿ-ಪುಣೆ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (12127) ರೈಲುಗಳನ್ನು ರದ್ದುಗೊಳಿಸಲಾಗಿದೆ.

ಹಳಿಗಳಲ್ಲಿ ನೀರು ಹೆಚ್ಚಿದ ಕಾರಣ ಸ್ಥಳೀಯ ರೈಲು ಸೇವೆಗಳನ್ನು ಸಹ ಸ್ವಲ್ಪ ಸಮಯದವರೆಗೆ ನಿಲ್ಲಿಸಿ ನಂತರ ಪುನರಾರಂಭಿಸಲಾಯಿತು.

“ಭಾರೀ ಮಳೆಯಿಂದಾಗಿ ಕೇಂದ್ರ ರೈಲ್ವೆ ಉಪನಗರ ಸೇವೆಗಳಿಗೆ ಅಡಚಣೆಯಾಗಿದೆ. ಸ್ಥಳೀಯ ಸಿಯಾನ್ ಮತ್ತು ಭಾಂಡೂಪ್ ಮತ್ತು ನಹೂರ್ ನಿಲ್ದಾಣಗಳ ನಡುವೆ ರೈಲು ಸೇವೆಗಳು ತೊಂದರೆಗೀಡಾಗಿವೆ. ಮಳೆ ನೀರು ಹಳಿಗಳ ಮೇಲೆ ನಿಂತ ಕಾರಣ ರೈಲುಗಳನ್ನು ಸುಮಾರು ಒಂದು ಗಂಟೆ ಸ್ಥಗಿತಗೊಳಿಸಲಾಗಿತ್ತು. ಈಗ ನೀರು ಸ್ವಲ್ಪ ಕಡಿಮೆಯಾಗಿದ್ದು, ರೈಲುಗಳನ್ನು ಪುನರಾರಂಭಿಸಲಾಗಿದೆ” ಎಂದು ಹಿರಿಯ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ಮಳೆಯ ಕಾರಣದಿಂದ ಇಂದು ಮುಂಬೈ ವಿಮಾನ ನಿಲ್ದಾಣದ ಮಾರ್ಗದಲ್ಲಿ ಭಾರೀ ದಟ್ಟಣೆ ಮತ್ತು ನಿಧಾನಗತಿಯ ವಾಹನಗಳ ಸಂಚಾರ ಉಂಟಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ  ಪ್ರಯಾಣಿಕರು ತಮ್ಮ ಪ್ರಯಾಣಕ್ಕಾಗಿ ಹೆಚ್ಚಿನ ಸಮಯವನ್ನು ಮೀಸಲಿಡುವಂತೆ ವಿಮಾನಯಾನ ಸಂಸ್ಥೆಗಳು ಸೂಚನೆ ನೀಡಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X