ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ಧ, ಆದರೆ ಖರೀದಿಸಲು ರಾಜ್ಯ ಸರ್ಕಾರದಲ್ಲಿ ಹಣವಿಲ್ಲ: ಪ್ರಲ್ಹಾದ್‌ ಜೋಶಿ ಆರೋಪ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಕಿ ವಿಚಾರದಲ್ಲಿ ರಾಜಕಾರಣ ಮಾಡುವುದನ್ನು ಬಿಡಬೇಕು. ಕೇಂದ್ರ ಸರ್ಕಾರ ಅಕ್ಕಿ ನೀಡಲು ಸಿದ್ದ. ಆದರೆ, ಖರೀದಿಗೆ ಕರ್ನಾಟಕ ಸರ್ಕಾರದಲ್ಲಿ ಹಣವಿಲ್ಲ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಗ್ಯಾರಂಟಿಗೆ ಹಣ ಹೊಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಣುಕಾಡುತ್ತಿದ್ದಾರೆ. ಈ ವೈಫಲ್ಯವನ್ನು ಮುಚ್ಚಿಹಾಕಲು ಬಿಜೆಪಿಯವರ ಮೇಲೆ ಹಾಕುತ್ತಿದ್ದಾರೆ. ಕ್ಷುಲ್ಲಕ ರಾಜಕಾರಣ ಮಾಡುವುದನ್ನು ಬಿಟ್ಟು ಅಭಿವೃದ್ದಿ ಕಡೆಗೆ ಗಮನ ಕೊಟ್ಟರೆ ಉತ್ತಮ” ಎಂದರು.

“ದೇಶದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ ದಾಸ್ತಾನು ಇರಲಿ ಎನ್ನುವ ಕಾರಣಕ್ಕಾಗಿ ಕಳೆದ ವರ್ಷದ ಜೂನ್ 13ಕ್ಕೆ ಮುಕ್ತ ಮಾರುಕಟ್ಟೆ ಪದ್ದತಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಈಗ ಪರಿಸ್ಥಿತಿ ಸುಧಾರಿಸಿರುವುದರಿಂದ ಅಕ್ಕಿಯನ್ನು ಕೊಡಲು ಕೇಂದ್ರ ಶಕ್ತವಾಗಿದೆ” ಎಂದು ಜೋಶಿ ತಿಳಿಸಿದರು.

Advertisements

“ಕಳೆದ ವರ್ಷ ಕೇಂದ್ರದಿಂದ ಅಕ್ಕಿ ಬಂದಿಲ್ಲ ಎಂದು ಸಿದ್ದರಾಮಯ್ಯನವರು ವಿನಾಕಾರಣ ಆರೋಪಿಸುತ್ತಿದ್ದಾರೆ. ದೇಶದಲ್ಲಿ ಅಕ್ಕಿ ಸಂಗ್ರಹ ಇಳಿಮುಖ ಆಗಬಹುದು ಎನ್ನುವ ಭೀತಿಯಿಂದ ಅಕ್ಕಿ ವಿತರಣೆ ನಿಲ್ಲಿಸಲಾಗಿತ್ತು. ಇದು ಬರೀ ನಮ್ಮ ದೇಶಕ್ಕೆ ಮಾತ್ರ ಅನ್ವಯಿಸುವಂತದಲ್ಲ, ಪ್ರಪಂಚದ ಎಲ್ಲ ಕಡೆ ಈ ಆತಂಕವಿತ್ತು” ಎಂದರು.

“ವಿಧಾನಸಭಾ ಚುನಾವಣೆಗೂ ಮುನ್ನ ಕೇಂದ್ರ ಸರ್ಕಾರ ಅಕ್ಕಿಯನ್ನು ಒದಗಿಸಿದರೆ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದೂ ಸಿದ್ದರಾಮಯ್ಯನವರು ಎಲ್ಲೂ ಹೇಳಿರಲಿಲ್ಲ. ಕೇಂದ್ರದಲ್ಲಿ 330 ಲಕ್ಷ ಟನ್ ಅಕ್ಕಿ ದಾಸ್ತಾನು ಇದೆ. ಕೊಡಲು ಸಿದ್ಧರಿದ್ದೇವೆ” ಎಂದು ಹೇಳಿದರು.

“ಹಿಂದೆ ಕೆಜಿಯೊಂದಕ್ಕೆ 34 ರೂಪಾಯಿ ನಿಗದಿ ಮಾಡಿದ್ದೆವು. ಈಗ ಅದನ್ನು 28 ರೂಪಾಯಿಗೆ ಇಳಿಸಿದ್ದೇವೆ. ಅಕ್ಕಿ ಕೊಡಲು ನಾವು ಸಿದ್ದರಿದ್ದೇವೆ, ಖರೀದಿಸಲು ಸಿದ್ದರಾಮಯ್ಯ ಸರ್ಕಾರದಲ್ಲಿ ದುಡ್ಡು ಇದೆಯೇ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಜ್ಯ ಸರ್ಕಾರ ಅಕ್ಕಿ ಕೇಳುತ್ತಿರುವುದು ಕಡಿಮೆ ದರದಲ್ಲಿ ಬಡಜನರಿಗೆ ಕೊಡಲು,,ಅದನ್ನೂ ಕೇಂದ್ರ ಸರಕಾರ ವ್ಯಾಪಾರ ಮಾಡುವುದಾದರೆ,, ಅದನ್ನೇ ದೊಡ್ಡದಾಗಿ ಪುಂಗಿ ಊದುವ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಿಲ್ಲದ ಇಂಥಾ ಮಂತ್ರಿ ಚುನಾಯಿಸಿ ಕಳಿಸಿದ ನಾವೇ ಧನ್ಯರು,,, ಚುನಾವಣೆಗೆ ಮುಂಚೆ ಭಾರತ ಅಕ್ಕಿ ವ್ಯಾಪಾರ ಸುರು ಮಾಡಿದ್ದ ಸರಕಾರ ಚುನಾವಣೆ ಫಲಿತಾಂಶ ಬಂದಾಗಿನಿಂದ ಮಾರ್ಕೆಟ್ ನಲ್ಲಿ ಅಕ್ಕಿ ಪತ್ತೆ ಇಲ್ಲ,,ಬಡವರಿಗೆ ಐದು ಕೆಜಿ ಹೆಚ್ಚುವರಿ ಅಕ್ಕಿ ಕೊಟ್ಟರೆ ಮಂತ್ರಿಗೆ ಕರುಳು ಕಿತ್ತು ಬರುವಂತೆ ಕಾಣುತ್ತಿದೆ ಅದೇ ಆಪ್ತ ಬಂಡವಾಳಿಗರ ಲಕ್ಷಾಂತರ ಕೋಟಿ ಸಾಲ ರೈಟ್ ಆಫ್ ಮಾಡಿ ಸಾವಿರಾರು ಕೋಟಿ ತೆರಿಗೆ ವಿನಾಯಿತಿ ನೀಡಿದಾಗ,,, ಆರಾಮಾಗಿ ನಿದ್ದೆ ಮಾಡಿದರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X