ಧಾರವಾಡ | ಅಂಜುಮನ್ ಸಂಸ್ಥೆಯ ಹೆಸರು ಹೇಳಲು ವಿದ್ಯಾರ್ಥಿಗಳು ಮುಜುಗರಪಡುತ್ತಾರೆ: ಇಸ್ಮಾಯಿಲ್ ತಮಟಗಾರ್ ಬೇಸರ

Date:

Advertisements

ಅಂಜುಮನ್ ಸಂಸ್ಥೆಯಲ್ಲಿ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇರುವುದು ಸಂತಸದ ವಿಚಾರ. ಆದರೆ, ಇಲ್ಲಿ ಕಲಿತು ಸಾಧನೆಗೈದ ಮಕ್ಕಳು ಸಂಸ್ಥೆಯ ಹೆಸರು ಹೇಳಲು ಮುಜುಗರಪಡುತ್ತಾರೆ ಎಂದು ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ತಮಟಗಾರ್ ಬೇಸರ ವ್ಯಕ್ತಪಡಿಸಿದರು.

ಧಾರವಾಡ ನಗರದ ಅಂಜುಮನ್ ಮಹಾವಿದ್ಯಾಲಯ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಹಯೋಗದಲ್ಲಿ ನಗರದ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟಪ್ಪ ಸಭಾಂಗಣದಲ್ಲಿ ನಡೆದ ಕಾಲೇಜಿನ 38ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.

“ದುಶ್ಚಟಗಳಿಗೆ ಬಲಿಯಾಗಿ ವಿದ್ಯಾರ್ಥಿಗಳು ಜೀವನ ಹಾಳು ಮಾಡಿಕೊಳ್ಳದೆ, ಉಸಿರು ನಿಂತರೂ, ಹೆಸರು ಅಳಿಯದ ಸಾಧನೆ ಮಾಡುವ ಮೂಲಕ ಕಲಿತ ಸಂಸ್ಥೆ, ಕಲಿಸಿದ ಗುರು ಮತ್ತು ಪಾಲಕರಿಗೆ ಕೀರ್ತಿ ತರಬೇಕು. ವಿದ್ಯಾರ್ಥಿ ಬದುಕಿನಲ್ಲಿ ಆಗುವ ಸೋಲಿನಲ್ಲಿಯೂ ಗೆಲುವು ಸಾಧಿಸುವ ಛಲವಿರಬೇಕು. ಸತತ ಅಧ್ಯಯನ, ನಿರಂತರ ಪರಿಶ್ರಮ ಇದ್ದಾಗ ಸಾಧನೆ ಹಾದಿ ಸುಲಭವಾಗುತ್ತದೆ” ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

Advertisements

“ಉನ್ನತ ಹುದ್ದೆ ಪಡೆದ ಯಾವುದೇ ಧರ್ಮದವರಾಗಿರಲಿ ತಾವು ಕಲಿತ ಸಂಸ್ಥೆಯನ್ನು ಮರೆಯದಿರುವುದೇ ವಿದ್ಯಾರ್ಥಿ ಲಕ್ಷಣವಾಗಬೇಕು ಮತ್ತು ಮಾನವೀಯ ಮೌಲ್ಯಗಳೊಂದಿಗೆ ಉತ್ತಮ‌ ನಾಗರಿಕರಾಗುವಂತೆ ಕರೆ ನೀಡಿದರು.

ಕರ್ನಾಟಕ ಉರ್ದು ಅಕ್ಯಾಡೆಮಿ ಅಧ್ಯಕ್ಷ ಮಹ್ಮದ್ ಅಲಿ ಖಾಜಿ ಮಾತನಾಡಿ, “ಉರ್ದು ಜಾಗತಿಕ ಭಾಷೆ. ಅಟಲ್ ಬಿಹಾರಿ ವಾಜಪೇಯಿ, ಎಲ್ ಕೆ ಅಡ್ವಾನಿಯಂಥ ನಾಯಕರು ಉರ್ದು ಭಾಷೆ ಅಧ್ಯಯನ ಮಾಡಿದ್ದಾರೆಂದು ಹೆಮ್ಮೆ ವ್ಯಕ್ತಪಡಿಸಿ, ಅಲಿಗಡ ವಿವಿಯಲ್ಲಿ ಉರ್ದು ಭಾಷೆಯಲ್ಲಿಯೇ ರಾಮಾಯಣ, ಮಹಾಭಾರತ ಬೋಧಿಸಲಾಗುತ್ತಿದೆ. ಭವಿಷ್ಯದಲ್ಲಿ ಒಳ್ಳೆಯ ದಿನ ಬರಲಿವೆ. ವಿದ್ಯಾರ್ಥಿಗಳು ಪಾಲಕರ ಪರಿಶ್ರಮ ವ್ಯರ್ಥ ಮಾಡದೆ, ಸಾರ್ಥಕ ಮಾಡಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಎನ್‌ಡಿಎ ಆಡಳಿತದಲ್ಲಿ ವ್ಯಾಪಕ ಗುಂಪು ಹತ್ಯೆ; ಎಸ್‌ಡಿಪಿಐ ಖಂಡನೆ

ಕಾರ್ಯಕ್ರಮದಲ್ಲಿ 2022-23ನೇ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಕುಮಾರಿ ಬಿಬಿ ಆಯೇಷಾ ಝಕೀರ್ ಹುಸೇನ್ ರೇಷಮವಾಲೆ, ಕುಮಾರಿ ಸೌಂದರ್ಯ ಚಾವದಲ, ಕುಮಾರಿ ಅಸ್ಮಾ, ಕುಮಾರಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕುಮಾರ ದೀಪಕ್ ದುರ್ಗಣ್ಣವರ, ಕುಮಾರ ಉಸ್ಮಾನ್ ನೈಕರ, ಹಾಗೂ ಕುಮಾರ ದದಾಖಳಂದರ ಜಮಖಂಡಿ, ವಿದ್ಯಾರ್ಥಿಗಳಿಗೆ ಸನ್ಮಾನಿಸಿ, ಗೌರವಿಸಿದರು.

ಅಂಜುಮನ್ ಪದಾಧಿಕಾರಿ ಡಾ. ಎಸ್ ಎಸ್ ಸರಗಿರೋ, ಮಹ್ಮದ್ ಶಫಿ ಕಳ್ಳಿಮನಿ, ಮಹ್ಮದ್ ರಫೀಕ್ ಶಿರಹಟ್ಟಿ, ಯಾಸೀನ್ ಹಾವೇರಿಪೇಟಿ, ಜನಾಬ ಖಲೀಲ್ ದಾಸನಕೊಪ್ಪ, ಪತ್ರಿಕೋದ್ಯಮದ ಮುಖ್ಯಸ್ಥ ಡಾ. ಎಸ್ ಎಸ್ ಅದೋನಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X