ಕಲಬುರಗಿ | ಡೆಂಘೀ ಸೇರಿದಂತೆ ಸಾಂಕ್ರಾಮಿಕ ರೋಗ ತಡೆಗಟ್ಟಿ: ಸರ್ಕಾರಕ್ಕೆ ವೆಲ್ಫೇರ್ ಪಾರ್ಟಿ ಆಗ್ರಹ

Date:

Advertisements

“ಕಲಬುರಗಿ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹಾವಳಿ ದಿನೇ ದಿನೇ ವ್ಯಾಪಕವಾಗುತ್ತಿದೆ. ಝೀಕಾ ವೈರಾಣು ಸೋಂಕು, ಚಿಕೂನ್ ಗುನ್ಯಾ ರಾಜ್ಯದಲ್ಲಿ ಸದ್ದು ಮಾಡುತ್ತಿವೆ. ಸರ್ಕಾರ ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು” ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಕರ್ನಾಟಕ ರಾಜ್ಯ ಕಾರ್ಯದರ್ಶಿ ಮುಬೀನ್ ಅಹ್ಮದ್ ಆಗ್ರಹಿಸಿದ್ದಾರೆ.

“ಮಾಧ್ಯಮಗಳ ವರದಿಯ ಪ್ರಕಾರ ಈಗಾಗಲೇ ಡೆಂಗ್ಯೂ ಪೀಡಿತರ ಸಂಖ್ಯೆ 7164ಕ್ಕೆ ಏರಿಕೆಯಾಗಿದೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟಲು ಸರಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಬೇಕಾಗಿದೆ” ಎಂದು ತಿಳಿಸಿದ್ದಾರೆ.

ಹಾಗೆಯೇ ಝೀಕಾ ಸೋಂಕು, ಚಿಕೂನ್‌ ಗುನ್ಯಾ ಮುಂತಾದ ರೋಗಗಳು ಹರಡುವ ಸೂಚನೆಗಳು ಕೂಡ ಕಂಡುಬರುತ್ತಿದೆ. ಈ ರೋಗಗಳು ವ್ಯಾಪಕವಾಗಿ ಹರಡುವ ಮೊದಲೇ ಆರೋಗ್ಯ ಇಲಾಖೆ ಸಮರೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆ ದೊರೆಯಲು ಅವಕಾಶ ಮಾಡಿಕೊಡಬೇಕಾಗಿದೆ. ಅದರಲ್ಲೂ ಝೀಕಾ ವೈರಾಣು ಸೋಂಕಿಗೆ ನಿರ್ದಿಷ್ಟ ಚಿಕಿತ್ಸೆ ಲಭ್ಯವಿರದ ಕಾರಣ ಸರ್ಕಾರ ಈ ರೋಗ ನಿಯಂತ್ರಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸುತ್ತಿದೆ ಎಂದು ಮುಬೀನ್ ಅಹ್ಮದ್ ತಿಳಿಸಿದ್ದಾರೆ.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X