ರಾಯಚೂರು | ಹೊಸ ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಸಾತಿಗೆ ಸಿಪಿಐ(ಎಂ) ಆಗ್ರಹ

Date:

Advertisements

ಕ್ರಿಮಿನಲ್ ತಿದ್ದುಪಡಿ ಕಾಯ್ದೆ ವಾಪಸ್, ಮುಸ್ಲಿಂ ಅಲ್ಪಸಂಖ್ಯಾತರ ಮೇಲಿನ ಮತಾಂಧ ದಾಳಿಗಳ ಮೇಲೆ ಕಠಿಣ ಕ್ರಮಗಳಿಗೆ ಒತ್ತಾಯಿಸಿ ಸಿಪಿಐ (ಎಂ) ಕಾರ್ಯಕರ್ತರು ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

ʼದೇಶದಲ್ಲಿ ರಾಷ್ಟ್ರೀಯ ಪರೀಕ್ಷಾ ಎಜೆನ್ಸಿ ನಡೆಸಿದ ಪರೀಕ್ಷೆಗಳ ಹಗರಣದಿಂದ ವಿದ್ಯಾರ್ಥಿಗಳ ಭವಿಷ್ಯ ಪೋಷಕರ ಕನಸು ನುಚ್ಚು ನೂರು ಮಾಡಿದೆ. ಇದರಿಂದಾಗಿ ವಿದ್ಯಾರ್ಥಿಗಳು ಇಕ್ಕಟಿಗೆ ಸಿಲುಕುವಂತಾಗಿದೆ. ಶಿಕ್ಷಣದ ಕೇಂದ್ರೀಕರಣ, ವ್ಯಾಪಾರೀಕರಣ ಹಾಗೂ ಕೋಮುವಾದ ಪ್ರತಿಪಾದಿಸುವ ಎನ್‌ಇಪಿ ಕೈಬಿಡಬೇಕುʼ ಎಂದು ಆಗ್ರಹಿಸಿದರು.

ʼತರಾತುರಿತಲ್ಲಿ ಜಾರಿಗೊಳಿಸಿರುವ ಜನವಿರೋಧಿ ಹಾಗೂ ಪ್ರಜಾಪ್ರಭುತ್ವ ವಿರೋಧಿ ಕ್ರಿಮಿನಲ್ ಕಾನೂನುಗಳನ್ನು ವಾಪಸು ಪಡೆಯಬೇಕು. ಇದು ಜನರನ್ನು ರಾಷ್ಟ್ರ ವಿರೋಧಿಗಳೆಂದು ಆರೋಪಿಸಿ ಶಿಕ್ಷೆ ನೀಡಲು ದಾರಿಯಾಗಿದೆ ಎಂದು ದೂರಿದರು. ಅಲ್ಪಸಂಖ್ಯಾತರ ಮೇಲೆ ದೇಶದ ವಿವಿಧ ಬಾಗದಲ್ಲಿ ದಾಳಿ ನಡೆಸಲಾಗಿದ್ದು ಖಂಡನೀಯ. ದೇಶದ ಮುಸ್ಲಿಂ ಸಮಾಜದ ರಕ್ಷಣೆಗೆ ಅಗತ್ಯ ಕ್ರಮವಹಿಸಬೇಕುʼ ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಳೆ ಮತ್ತು ಡೆಂಘೀ- ಜನ ಎಷ್ಟು ಅಂತ ಸಹಿಸಿಕೊಳ್ಳುತ್ತಾರೆ?

ಪ್ರತಿಭಟನೆಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವಿರೇಶ, ತಾಲೂಕು ಕಾರ್ಯದರ್ಶಿ ಡಿ.ಎಸ್. ಶರಣಬಸವ ಸೇರಿದಂತೆ ಪ್ರಮುಖರಾದ ಆಂಜನೇಯ, ಖಾಜಾ ಅಸ್ಲಂ ಪಾಷಾ, ಕರಿಯಪ್ಪ ಅಚ್ಚೊಳ್ಳಿ, ವರಲಕ್ಷ್ಮಿ, ರಂಗಪ್ಪ ಯಾಪಲದಿನ್ನಿ, ಗೋವಿಂದ, ಬಂದೇನವಾಜ, ನಾರಾಯಣ, ನರಸಿಂಹಲು ಇತರರಿದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X