ಇಂಡಿಯನ್ ಕ್ರಿಕೆಟ್ ಟೀಮ್‌ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ

Date:

Advertisements

ಟೀಂ ಇಂಡಿಯಾ ಪುರುಷರ ತಂಡದ ಮುಖ್ಯ ಕೋಚ್‌ ಆಗಿ ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್‌ ಗಂಭೀರ್‌ ಅವರನ್ನು ಬಿಸಿಸಿಐ ಇಂದು ನೇಮಕ ಮಾಡಿದೆ.

ಟಿ20 ವಿಶ್ವಕಪ್‌ ನಂತರ ರಾಹುಲ್‌ ದ್ರಾವಿಡ್ ಅವರ ಕೋಚ್‌ ಅವಧಿ ಮುಕ್ತಾಯಗೊಂಡಿತ್ತು. ಗಂಭೀರ್‌ ಕೋಚ್‌ ಆಗುವುದು ಬಹುತೇಕ ಖಚಿತವಾಗಿದ್ದರೂ ಅಧಿಕೃತ ಆದೇಶ ಮಾತ್ರ ಬಾಕಿಯುಳಿದಿತ್ತು.

ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ, ಗೌತಮ್‌ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್‌ ಆಗಿ ನೇಮಕ ಮಾಡುವುದಕ್ಕೆ ಅಪಾರ ಸಂತಸವಾಗುತ್ತಿದೆ. ಆಧುನಿಕ ಕ್ರಿಕೆಟ್ ತ್ವರಿತವಾಗಿ ವಿಕಸಿತವಾಗುತ್ತಿದ್ದು, ಗೌತಮ್‌ ಅವರು ಇದನ್ನು ಉನ್ನತ ಹಂತದಲ್ಲಿ ಬದಲಿಸುವಲ್ಲಿ ಪ್ರಮುಖ ಕಾರಣಕರ್ತರಾಗಿದ್ದಾರೆ. ಅವರು ತಮ್ಮ ವೃತ್ತಿಯುದ್ದಕ್ಕೂ ಹೋರಾಟದ ಹಾದಿಯೊಂದಿಗೆ ಹಲವು ಮೈಲಿಗಲ್ಲು ಸಾಧಿಸಿದ್ದಾರೆ. ಭಾರತ ಕ್ರಿಕೆಟ್ ತಂಡ ಬೆಳವಣಿಗೆ ಸಾಧಿಸಲು ಗೌತಮ್‌ ಒಬ್ಬ ಆದರ್ಶ ವ್ಯಕ್ತಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಕೇರಳ ಕ್ರಿಕೆಟ್ ಸಂಸ್ಥೆಯ ಕೋಚ್‌ನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ

ಇವರ ಸ್ಪಷ್ಟ ಉದ್ದೇಶ ಟೀಂ ಇಂಡಿಯಾವನ್ನು ತಮ್ಮ ಅದ್ಭುತ ಅನುಭವದೊಂದಿಗೆ ಉನ್ನತ ಹಂತಕ್ಕೆ ಕೊಂಡೊಯ್ಯುವುದು. ಬಿಸಿಸಿಐ ಇವರ ನೂತನ ಹಾದಿಗೆ ಸಂಪೂರ್ಣ ಸಹಕಾರ ನೀಡುತ್ತದೆ ಎಂದು ಜಯ್‌ ಶಾ ಹೇಳಿದ್ದಾರೆ.

ಗೌತಮ್‌ ಗಂಭೀರ್ 240ಕ್ಕೂ ಹೆಚ್ಚು ಟೆಸ್ಟ್‌, ಏಕದಿನ, ಟಿ20 ಪಂದ್ಯಗಳನ್ನು ಆಡಿದ್ದು 10 ಸಾವಿರಕ್ಕೂ ಹೆಚ್ಚು ರನ್‌ ಪೇರಿಸಿದ್ದಾರೆ. ಗಂಭೀರ್ 2011ರ ಏಕದಿನ ವಿಶ್ವಕಪ್‌ ವಿಜೇತ ಟೀಂ ಇಂಡಿಯಾದ ಸದಸ್ಯರಾಗಿದ್ದರು. ಕೆಕೆಆರ್‌ ಸಾರಥ್ಯ ವಹಿಸಿದ್ದ ಗಂಭೀರ್‌ ಎರಡು ಬಾರಿ ಕಪ್‌ ಜಯಿಸಲು ಕಾರಣವಾಗಿದ್ದರು.

blank profile picture 973460 640
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸರ್ಕಾರಿ ಶಾಲೆ ಮಕ್ಕಳಿಗೆ ಸುಸಜ್ಜಿತ ವ್ಯವಸ್ಥೆ ಸಿಕ್ಕರೆ ಅತ್ಯುನ್ನತ ಸಾಧನೆ, ಸಾಮರ್ಥ್ಯ ಅನಾವರಣ

"ಖಾಸಗಿ ಶಾಲೆಗಳಲ್ಲಿ ಓದುವ ಮಕ್ಕಳಿಗಿಂತ ಸರ್ಕಾರಿ ಶಾಲೆಗಳ ಮಕ್ಕಳು ಯಾವುದರಲ್ಲಿಯೂ ಕಡಿಮೆ...

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

Download Eedina App Android / iOS

X