ವಿಜಯಪುರ | ಅತಿಹೆಚ್ಚು ಉದ್ಯೋಗ ಸೃಷ್ಟಿಸುವ ಕೃಷಿ ಕ್ಷೇತ್ರವನ್ನೇ ಸರ್ಕಾರ ಕಡೆಗಣಿಸುತ್ತಿವೆ: ಚಾಮರಸ ಮಾಲಿ ಪಾಟೀಲ

Date:

Advertisements

“ಅಧಿಕಾರಕ್ಕೆ ಬರುವ ಪಕ್ಷಗಳು ಜನರ ಸಮಸ್ಯೆಗಳನ್ನು ಪರಿಹರಿಸದೆ, ತಲೆಮರೆಸಿಕೊಳ್ಳುವ ಕೆಲಸ ಮಾಡುತ್ತಿವೆ. ಅತಿಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಕೃಷಿ ಕ್ಷೇತ್ರವನ್ನು ಸರ್ಕಾರಗಳು ಕಡೆಗಣಿಸುತ್ತಿವೆ” ಎಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ ಹೇಳಿದರು.

ವಿಜಯಪುರ ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಸಮಿತಿಯಿಂದ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ, ನಿರುದ್ಯೋಗ, ಬಡತನ, ರೈತರ ಆತ್ಮಹತ್ಯೆಯಂತಹ ಸಮಸ್ಯೆಗಳಿಗೆ ಪರಿಹಾರ ಪರ್ಯಾಯ ಪಕ್ಷದ ಅವಶ್ಯಕತೆಯಿದ್ದು, ನಾವೆಲ್ಲರೂ ಸಂಘಟಿತರಾಗಿ ಕರ್ನಾಟಕ ಸರ್ವೋದಯ ಪಕ್ಷವನ್ನು ಬೆಳೆಸಬೇಕಿದೆ ಎಂದು ಕರೆ ನೀಡಿದರು.

“ಬಿಜೆಪಿ ಅಧಿಕಾರಕ್ಕೆ ಬರುವ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ರೈತರ ಸಾಲಮನ್ನಾ, ಸ್ವಾಮಿನಾಥನ್ ವರದಿ ಪ್ರಕಾರ ಉತ್ತಮ ಬೆಂಬಲ ಬೆಲೆ ನೀಡುತ್ತೇವೆ. ರೈತರ ಆದಾಯ ದ್ವಿಗುಣಗೊಳಿಸುತ್ತೇವೆ ಎಂದಿದ್ದರು. ಆದರೇ ಅದರ ತದ್ವಿರುದ್ಧವಾಗಿ ಪೆಟ್ರೋಲ್, ಡಿಸೇಲ್, ಬೀಜ, ರಸಗೊಬ್ಬರದ ದರ ಹೆಚ್ಚಳ ಮಾಡಿದ್ದಾರೆ. ಬೆಂಬಲ ಬೆಲೆ ನೀಡುವಲ್ಲಿಯೂ ಸಂಪೂರ್ಣ ವಿಫಲರಾಗಿದ್ದಾರೆ. ಆ ಮೂಲಕ ರೈತಾಪಿ ವರ್ಗಕ್ಕೆ ಅನ್ಯಾಯ ಎಸಗಿದ್ದಾರೆ” ಎಂದು ಚಾಮರಸ ಮಾಲಿ ಪಾಟೀಲ ಕಿಡಿಕಾರಿದರು.

Advertisements

ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, “ರಾಜ್ಯ ರೈತ ಸಂಘವು ಗಾಂಧೀಜಿ, ಅಂಬೇಡ್ಕರ್, ಬಸವಣ್ಣನವರ ಜನಪರ ಸಿದ್ದಾಂತಗಳ ಮೇಲೆ ಕಾರ್ಯ ನಿರ್ವಹಿಸುತ್ತಿದೆ. ಆದರೇ ಪ್ರಸ್ತುತ ರಾಜಕೀಯ ಪಕ್ಷಗಳು ಜನಪರ ಕೆಲಸ ಮಾಡುತ್ತಿಲ್ಲ. ವಾಮಮಾರ್ಗಗಳ ಮೂಲಕ ಅಧಿಕಾರಕ್ಕೆ ಬರುತ್ತಿವೆ” ಎಂದರು.

“ಅನೇಕ ವರದಿಗಳ ಪ್ರಕಾರ ರಾಜ್ಯದಲ್ಲಿ ಶೇ. 87ರಷ್ಟು ಜನರು ಪರ್ಯಾಯ ರಾಜಕಾರಣಬೇಕು ಎನ್ನುತ್ತಾರೆ. ಕಾರ್ಪೋರೆಟ್ ರಾಷ್ಟ್ರೀಯ ಪಕ್ಷಗಳು ನಾಗರಿಕ ಸಮಾಜದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿವೆ. ರೈತರ, ಮಹಿಳೆಯರ, ದಲಿತರ ಉದ್ಧಾರಕ್ಕಾಗಿ ನಮ್ಮ ಪಕ್ಷ ಬೆಳೆಸುವ ಅವಶ್ಯಕತೆ ಇದೆ. ಕಾರ್ಪೋರೇಟ್ ಪರ ಇರುವ ಪಕ್ಷಗಳನ್ನು ದೂರವಿಟ್ಟು, ಜನಪರ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನವಿರೋಧಿ ನೀತಿ ವಿರುದ್ಧ ಹೋರಾಡಲು ಕರ್ನಾಟಕ ಸರ್ವೋದಯ ಸಂಘಟಿಸಬೇಕು” ಎಂದರು.

ಇದನ್ನು ಓದಿದ್ದೀರಾ? ಚಿಕ್ಕನಾಯಕನಹಳ್ಳಿ | ಕೃಷಿ ಭೂಮಿಯಲ್ಲಿ ಟವರ್ ನಿರ್ಮಾಣ; ರೈತರು-ಕೆಪಿಟಿಸಿಎಲ್ ಅಧಿಕಾರಿಗಳ ನಡುವೆ ವಾಗ್ವಾದ

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರನ್ ಪೂಣಚ್ಚ, ಕರ್ನಾಟಕ ರಾಜ್ಯ ರೈತ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಶಂಕರಗೌಡ ಹಿರೇಗೌಡರ, ಬಸನಗೌಡ ಧರ್ಮಗೊಂಡ, ಸಿದ್ದನಗೌಡ ಜಲಪೂರ, ಶಿವಶರಣ ಔರಾದಿ, ಬಾಪುಗೌಡ ಬಿರಾದಾರ, ಸಿದ್ರಾಮ ಜಂಗಮಶೆಟ್ಟಿ, ಗಿರೀಶ ಹಿರೇಮಠ್ ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

Download Eedina App Android / iOS

X